37 ಭಿಕ್ಷುಕರು ನಿರಾಶ್ರಿತರ ಕೇಂದ್ರಕ್ಕೆ ರವಾನೆ
Team Udayavani, Oct 28, 2021, 10:25 AM IST
ಬೆಂಗಳೂರು: ಮೆಜೆಸ್ಟಿಕ್, ಸಿಟಿ ಮಾರುಕಟ್ಟೆ ಹಾಗೂ ಇತರೆಡೆಯ ಜಂಕ್ಷನ್ಗಳು, ಬಸ್, ರೈಲು ನಿಲ್ದಾಣ, ದೇವಾಲಯಗಳ ಮುಂಭಾಗ ಭಿಕ್ಷೆ ಬೇಡುತ್ತಿದ್ದ 37 ಮಂದಿ ಭಿಕ್ಷುಕರನ್ನು ಪಶ್ಚಿಮ ವಿಭಾಗ ಪೊಲೀಸರು ಬುಧವಾರ ನಿರಾಶ್ರಿತರ ಕೇಂದ್ರಕ್ಕೆ ಕಳುಹಿಸಿದ್ದಾರೆ.
ಪಶ್ಚಿಮ ವಿಭಾಗದ ಉಪ್ಪಾರಪೇಟೆ, ಕೆ.ಆರ್. ಮಾರುಕಟ್ಟೆ, ಬ್ಯಾಟರಾಯನಪುರ, ಚಂದ್ರಲೇಔಟ್, ಕೆಂಗೇರಿ ಹಾಗೂ ವಿಜಯನಗರ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ವಿಶೇಷ ಕಾರ್ಯಾ ಚರಣೆ ಕೈಗೊಂ ಡಿದ್ದು, ದೇವಾಲಯ, ಮಾರುಕಟ್ಟೆ, ಜಂಕ್ಷನ್, ಬಸ್, ರೈಲು ನಿಲ್ದಾಣ ಹಾಗೂ ಇತರೆಡೆ ಭಿಕ್ಷೆ ಬೇಡುತ್ತಿದ್ದ ವ್ಯಕ್ತಿಗಳನ್ನು ವಶಕ್ಕೆ ಪಡೆಯಲಾಯಿತು.
ಇದನ್ನೂ ಓದಿ:- ಜಾಗೃತಿ ಮೂಡಿಸುವ ಕಾರ್ಯಕ್ರಮ ಆಯೋಜನೆ
ಬಳಿಕ ಎಲ್ಲರನ್ನು ಕೊಟ್ಟಿಗೆಪಾಳ್ಯ, ಕಾಮಾಕ್ಷಿಪಾಳ್ಯ ಸೇರಿ ವಿವಿಧೆಡೆ ಇರುವ ನಿರಾಶ್ರಿತರ ಕೇಂದ್ರಗಳಿಗೆ ಕಳುಹಿಸಲಾಗಿದೆ. ಉಪ್ಪಾರಪೇಟೆ 20, ಕೆ.ಆರ್.ಮಾರುಕಟ್ಟೆ 6, ಬ್ಯಾಟರಾಯನಪುರ, ಚಂದ್ರಲೇಔಟ್, ಕೇಂಗೇರಿ ತಲಾ ಮೂವರು ಹಾಗೂ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಬ್ಬರು ಸೇರಿದಂತೆ ಒಟ್ಟು 37 ಭಿಕ್ಷುಕರನ್ನು ನಿರಾಶ್ರಿತರ ಕೇಂದ್ರಕ್ಕೆ ಸೇರಿಸಿದ್ದಾರೆ.
ಈ ಹಿಂದೆಯೂ ವಿಭಾಗದ ವ್ಯಾಪ್ತಿಯಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿ, ಸಾಕಷ್ಟು ಭಿಕ್ಷುಕರನ್ನು ಪತ್ತೆ ಹಚ್ಚಿ ನಿರಾಶ್ರಿತ ಕೇಂದ್ರಗಳಿಗೆ ಕಳುಹಿಸಲಾಗಿತ್ತು. ಆದರೆ, ಕಳೆದ ಕೆಲ ದಿನಗಳಲ್ಲಿ ಪಶ್ಚಿಮ ವಿಭಾಗ ವ್ಯಾಪ್ತಿಯಲ್ಲಿ ಏಕಾಏಕಿ ಭಿಕ್ಷುಕರ ಸಂಖ್ಯೆಯಲ್ಲಿ ಗಣ ನೀಯ ಏರಿಕೆಯಾದ ಬೆನ್ನಲ್ಲೇ ಕಾರ್ಯಾಚರಣೆ ನಡೆಸಲಾಗಿದೆ. ಗುರುವಾರವೂ ವಿಶೇಷ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್