3,716 ಮರಗಳಿಗೆ ಕೊಡಲಿ ಪೆಟ್ಟು


Team Udayavani, Feb 8, 2019, 6:07 AM IST

3716mara.jpg

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಜಾರಿಗೊಳಿಸಲು ಉದ್ದೇಶಿಸಿರುವ ಆರು ಪಥದ ಎಲಿವೇಟೆಡ್‌ ಕಾರಿಡಾರ್‌ ಯೋಜನೆಗೆ 3,716 ಮರಗಳನ್ನು ಕತ್ತರಿಸಲು ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತ (ಕೆಆರ್‌ಡಿಸಿಎಲ್‌) ಬಿಬಿಎಂಪಿಗೆ ಪ್ರಸ್ತಾವನೆ ಸಲ್ಲಿಸಿದೆ.

ಬಳ್ಳಾರಿ ರಸ್ತೆಯಲ್ಲಿ ಎಲಿವೇಟೆಡ್‌ ಕಾರಿಡಾರ್‌ ಯೋಜನೆಗೆ 144 ಮರಗಳ ಕಡಿಯುವ ಪ್ರಸ್ತಾವನೆ ಹೊರ ಬೀಳುವ ಮೊದಲೇ ಪರಿಸರವಾದಿಗಳು ಪ್ರತಿಭಟನೆ ನಡೆಸಿದ್ದರು. ಇದೀಗ ಕೆಆರ್‌ಡಿಸಿಎಲ್‌ ಬರೋಬ್ಬರಿ 3,716 ಮರಗಳನ್ನು ಕತ್ತರಿಸಲು ಪ್ರಸ್ತಾವನೆ ಸಲ್ಲಿಸಿರುವುದು ವಿವಾದಕ್ಕೆ ಎಡೆಮಾಡಿಕೊಡಲಿದ್ದು, ಪರಿಸರವಾದಿಗಳ ಮತ್ತೆ ರಸ್ತೆಗಿಳಿಯುವ ಸಾಧ್ಯತೆಯಿದೆ.

ನಗರದ ಒಂದು ತುಂದಿ ಮತ್ತೂಂದು ತುದಿಗೆ ಸಂಚರಿಸುವ ವಾಹನಗಳಿಗೆ ಅನುಕೂಲವಾಗುವಂತೆ 102 ಕಿ.ಮೀ. ಉದ್ದದ ಎಲಿವೇಟೆಡ್‌ ಕಾರಿಡಾರ್‌ ಯೋಜನೆಯನ್ನು ಸರ್ಕಾರ ಕೈಗೆತ್ತಿಕೊಂಡಿದೆ. ಅದರಂತೆ ಯೋಜನೆಗಾಗಿ 3,716 ಮರಗಳನ್ನು ಕತ್ತರಿಸಬೇಕಿದ್ದು, 601 ಮರಗಳನ್ನು ಭಾಗಶಃ ಕತ್ತರಿಸುವಂತೆ ಕೆಆರ್‌ಡಿಸಿಎಲ್‌ ಪಾಲಿಕೆಯ ಅರಣ್ಯ ವಿಭಾಗಕ್ಕೆ ಮನವಿ ಮಾಡಿದೆ.

ಯಾವುದೇ ಅಭಿವೃದ್ಧಿ ಯೋಜನೆಗೆ 50 ಮರಗಳಿಗಿಂತಲೂ ಹೆಚ್ಚಿನ ಮರಗಳನ್ನು ಕತ್ತರಿಸಬೇಕಾದರೆ ವೃಕ್ಷ ಸಮಿತಿಯ ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ಆ ಹಿನ್ನೆಲೆಯಲ್ಲಿ ಸಾರ್ವಜನಿಕರಿಂದ ಆಕ್ಷೇಪಣೆಗಳನ್ನು ಪಡೆದ ನಂತರದಲ್ಲಿ ಮುಂದಿನ ಕ್ರಮಕೈಗೊಳ್ಳಲು ಪಾಲಿಕೆಯ ಅಧಿಕಾರಿಗಳು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಎಲಿವೇಟೆಡ್‌ ಕಾರಿಡಾರ್‌ ಯೋಜನೆಗಾಗಿ 25 ಸಾವಿರ ಕೊಟಿ ರೂ. ವೆಚ್ಚವಾಗುವ ಕುರಿತು ಅಂದಾಜಿಸಲಾಗಿದ್ದು, ಯೋಜನೆಯಿಂದಾಗಿ ಹೆಚ್ಚಿನ ವಾಹನಗಳು ನಗರ ಪ್ರವೇಶಿಸದೆ ನಗರದ ಒಂದು ತುದಿಯಿಂದ ಮತ್ತೂಂದು ತುದಿಗೆ ಸಂಚಾರ ನಡೆಸಲಿವೆ. ಇದರಿಂದಾಗಿ ಸಮಯ ಉಳಿತಾಯವಾಗಲಿದೆ. ಆ ಹಿನ್ನೆಲೆಯಲ್ಲಿ 5 ಹಂತಗಳಲ್ಲಿ ಮರಗಳನ್ನು ಕತ್ತರಿಸುವಂತೆ ಕೆಆರ್‌ಡಿಸಿಎಲ್‌ ಪ್ರಸ್ತಾವನೆಯಲ್ಲಿ ತಿಳಿಸಿದೆ. 

ಆರು ಪಥದ ಎಲಿವೇಟೆಡ್‌ ಕಾರಿಡಾರ್‌ ವಿವರ 
– ಉತ್ತರ-ದಕ್ಷಿಣ ಕಾರಿಡಾರ್‌: ಸೆಂಟ್ರಲ್‌ ಸಿಲ್ಕ್ ಬೋರ್ಡ್‌ನಿಂದ ಹೆಬ್ಟಾಳ
– ಪೂರ್ವ-ಪಶ್ಚಿಮ ಕಾರಿಡಾರ್‌ 1: ಕೆ.ಆರ್‌.ಪುರದಿಂದ ಗೊರಗುಂಟೆಪಾಳ್ಯ
– ಪೂರ್ವ-ಪಶ್ಚಿಮ ಕಾರಿಡಾರ್‌ 2: ವರ್ತೂರು ಕೋಡಿಯಿಂದ ಜ್ಞಾನಭಾರತಿ

4 ಪಥದ ಕನೆಕ್ಟಿಂಗ್‌ ಕಾರಿಡಾರ್‌ಗಳು
– ಅಗರದಿಂದ ಕಲಾಸಿಪಾಳ್ಯ
– ರಿಚ್‌ಮಂಡ್‌ ರಸ್ತೆಯಿಂದ ಹಲಸೂರು
– ಕಲ್ಯಾಣನಗರ ಜಂಕ್ಷನ್‌ನಿಂದ ವೀಲರ್ ರಸ್ತೆ ಜಂಕ್ಷನ್‌

ಟಾಪ್ ನ್ಯೂಸ್

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.