ಒಂದೇ ದಿನ 4.3ಲಕ್ಷ ರೂ. ತೆರಿಗೆ ಸಂಗ್ರಹ


Team Udayavani, May 16, 2019, 3:08 AM IST

onde-dina

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಅಂತರ್ಜಾಲ ತಾಣದಲ್ಲಿ ಬುಧವಾರ ಆಸ್ತಿದಾರರು ಮುಗಿಬಿದ್ದು ಆಸ್ತಿ ತೆರಿಗೆ ಪಾವತಿ ಮಾಡಿದ್ದು, ಒಂದೇ ದಿನ 4.3 ಲಕ್ಷ ರೂ. ತೆರಿಗೆ ಸಂಗ್ರಹವಾಗಿದೆ.

ಲೋಕಸಭಾ ಚುನಾವಣೆ, ಆಸ್ತಿ ತೆರಿಗೆ ಪರಿಷ್ಕರಣೆ ಸೇರಿದಂತೆ ವಿವಿಧ ಕಾರಣಗಳಿಂದಾಗಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಅಂತರ್ಜಾಲ ತಾಣದ ಮೂಲಕ ಆಸ್ತಿ ತೆರಿಗೆ ಪಾವತಿ ಮಾಡುವ ವ್ಯವಸ್ಥೆಯನ್ನು ಸಂಪೂರ್ಣ ಸ್ಥಗಿತಗೊಳಿಸಿತ್ತು.

ಎರಡು ತಿಂಗಳ ನಂತರ ಬಿಡಿಎ ಐಟಿ ವಿಭಾಗದ ಅಧಿಕಾರಿಗಳು ಆನ್‌ಲೈನ್‌ನಲ್ಲಿ ಆಸ್ತಿ ತೆರಿಗೆ ಪಾವತಿಸುವ ವ್ಯವಸ್ಥೆಯನ್ನು ಪುನರಾರಂಭಿಸಿದ್ದು, ಅಧಿಕ ಸಂಖ್ಯೆಯಲ್ಲಿ ಜನ ತೆರಿಗೆ ಪಾವತಿ ಮಾಡುತ್ತಿದ್ದಾರೆ. ಬುಧವಾರ ಬೆಳಗ್ಗೆ 7.30ರ ವೇಳೆ ವೆಬ್‌ಸೈಟ್‌ ಪುನರಾರಂಭವಾಗಿದ್ದು, ಕೆಲವೇ ಗಂಟೆಗಳಲ್ಲಿ 1.2 ಲಕ್ಷ ರೂ. ತೆರಿಗೆ ಪಾವತಿಯಾಗಿದೆ.

ಮಧ್ಯಾಹ್ನದ ವೇಳೆ ತೆರಿಗೆ ಪಾವತಿಯಲ್ಲಿ ಮತ್ತಷ್ಟು ಹೆಚ್ಚಳ ಕಂಡುಬಂತು. ಭೋಜನ ವಿರಾಮದ ವೇಳೆಗಾಗಲೇ ಸುಮಾರು 3.22 ಲಕ್ಷ ರೂ. ತೆರಿಗೆ ಸಂಗ್ರಹವಾಗಿತ್ತು ಎಂದು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಹಿರಿಯ ಅಧಿಕಾರಿ ಮಾಹಿತಿ ನೀಡಿದ್ದಾರೆ.

ಹಲವು ದಿನಗಳ ನಂತರ ಆನ್‌ಲೈನ್‌ ಕಾರ್ಯ ಆರಂಭಿಸಿಸಿದೆ. ಇದರೊಂದಿಗೆ ಆನ್‌ಲೈನ್‌ ಮೂಲಕ ತೆರಿಗೆ ಪಾವತಿ ಮಾಡುವರ ಸಂಖ್ಯೆ ಕೂಡ ಹೆಚ್ಚಳವಾಗುತ್ತಿದೆ. ಬುಧವಾರ ಮೂರಾರು ಆಸ್ತಿ ಮಾಲೀಕರು ಆನ್‌ಲೈನ್‌ ಮೂಲಕ ಆಸ್ತಿ ತೆರಿಗೆ ಪಾವತಿ ಮಾಡಿದ್ದಾರೆ.

ತಾಂತ್ರಿಕವಾಗಿ ಕೆಲವು ಬದಲಾವಣೆಗಳೊಂದಿಗೆ ಬಿಡಿಎ ಆನ್‌ಲೈನ್‌ ಆಸ್ತಿ ತೆರಿಗೆ ವಿಭಾಗ ಕಾರ್ಯಾರಂಭ ಮಾಡಿದ್ದು, ಸಾರ್ವಜನಿಕರಿಂದಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದು ಐಟಿ ವಿಭಾಗದ ಹಿರಿಯ ಅಧಿಕಾರಿಗಳು “ಉದಯವಾಣಿ’ಗೆ ತಿಳಿಸಿದ್ದಾರೆ.

ಪಾವತಿ ವಿಧಾನ ಸರಳ: ಬಿಡಿಎ ತಾಂತ್ರಿಕ ವಿಭಾಗ ತನ್ನ ಅಂತರ್ಜಾಲ ತಾಣದಲ್ಲಿ ಕೆಲವು ಸಣ್ಣ ಪುಟ್ಟ ತಾಂತ್ರಿಕ ಬದಲಾವಣೆ ತಂದಿದೆ. ಆಸ್ತಿ ತೆರಿಗೆ ಪಾವತಿದಾರರ ಅನುಕೂಲಕ್ಕಾಗಿ ದತ್ತಾಂಶಗಳನ್ನು ತುಂಬುವ ವ್ಯವಸ್ಥೆಯನ್ನು ಸರಳೀಕರಿಸಿದೆ. ಕಳೆದ ಬಾರಿ ಆಸ್ತಿ ತೆರಿಗೆ ಪಾವತಿಸುವಾಗ ಹಲವು ರೀತಿಯ ಮಾಹಿತಿಯನ್ನು ತೆರಿಗೆದಾರರು ಅಪ್‌ಡೇಟ್‌ ಮಾಡಬೇಕಿತ್ತು.

ಇದರಿಂದಾಗಿ ಸಾರ್ವಜನಿಕರು ಕಿರಿಕಿರಿ ಅನುಭವಿಸುತ್ತಿದ್ದರು. ಹೀಗಾಗಿ ಈ ಬಾರಿ ಆನ್‌ಲೈನ್‌ ಆಸ್ತಿ ತೆರಿಗೆ ಪಾವತಿ ವ್ಯವಸ್ಥೆಯನ್ನು ಸರಳೀಕರಿಸಲಾಗಿದೆ. ತೆರಿಗೆ ಪಾವತಿ ಮಾಡುವಾಗ ಆಸ್ತಿ ಸಂಖ್ಯೆ (ಎಸ್‌ಟಿಪಿ), ಪಾವತಿದಾರರ ಮೊಬೈಲ್‌ ಸಂಖ್ಯೆ ಮತ್ತು ಇ-ಮೇಲ್‌ ಅನ್ನು ಮಾತ್ರ ಪರಿಗಣನೆಗೆ ತೆಗೆದುಕೊಳ್ಳಲಾಗುತ್ತಿದೆ.

ಈ ಮೊದಲು ಅಂತರ್ಜಾಲ ತಾಣದಲ್ಲಿ ಆಸ್ತಿ ತೆರಿಗೆ ಪಾವತಿ ಮಾಡಬೇಕಾದರೆ ಸಾರ್ವಜನಿಕರು ಚಲನ್‌ನಲ್ಲಿ ಇರುವಂತೆಯೇ ತುಂಬಬೇಕಿತ್ತು. ಅರ್ಜಿ ತುಂಬುವಾಗ ಸ್ವಲ್ಪ ತಪ್ಪಾದರೂ ಅದನ್ನು ಸ್ವೀಕರಿಸುತ್ತಿರಲಿಲ್ಲ. ಈಗ ಚಲನ್‌ ತುಂಬುವ ವ್ಯವಸ್ಥೆ ಸರಳವಾಗಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಬದಲಾವಣೆ ತರುವುದಾಗಿ ಬಿಡಿಎ ಐಟಿ ವಿಭಾಗದ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಸಾರ್ವಜನಿಕರಿಗೆ ಅನುಕೂಲವಾಗುವ ಹಲವು ಯೋಜನೆಗಳನ್ನು ಬಿಡಿಎ ರೂಪಿಸುತ್ತಿದ್ದು, ಆನ್‌ಲೈನ್‌ನಲ್ಲಿ ತೆರಿಗೆ ಪಾವತಿ ಮಾಡುವವಗೆ ನೆರವಾಗಲಿ ಎಂಬ ಕಾರಣಕ್ಕಾಗಿ ಮತ್ತಷ್ಟು ಸರಳ ವ್ಯವಸ್ಥೆ ಜಾರಿಗೆ ತರಲಾಗಿದೆ.
-ರಾಕೇಶ್‌ ಸಿಂಗ್‌, ಬಿಡಿಎ ಆಯುಕ್ತ

* ದೇವೇಶ್‌ ಸೂರಗುಪ್ಪ

ಟಾಪ್ ನ್ಯೂಸ್

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.