ರಾಜಧಾನಿಯಲ್ಲಿ 49 ಸಾವಿರ ಆರೋಗ್ಯ ಕಾರ್ಡ್‌ ವಿತರಣೆ


Team Udayavani, Jul 14, 2018, 12:15 PM IST

rajadhani.jpg

ಬೆಂಗಳೂರು: ಯಶಸ್ವಿನಿ ಸೇರಿದಂತೆ ರಾಜ್ಯದಲ್ಲಿ ಈ ಹಿಂದೆ ಜಾರಿಯಲ್ಲಿದ್ದ ಆರೋಗ್ಯ ಯೋಜನೆಗಳನ್ನೆಲ್ಲಾ ವಿಲೀನಗೊಳಿಸಿ ಜಾರಿಗೆ ತಂದಿರುವ “ಆರೋಗ್ಯ ಕರ್ನಾಟಕ’ ಯೋಜನೆಯಡಿ ಬೆಂಗಳೂರಿನಲ್ಲಿ ಈವರೆಗೆ 49,480 ಮಂದಿ ಆರೋಗ್ಯ ಕಾರ್ಡ್‌ ಪಡೆದಿದ್ದಾರೆ.

ಏಪ್ರಿಲ್‌ನಿಂದ ಕಾರ್ಡ್‌ ವಿತರಣೆ ಆರಂಭವಾಗಿದ್ದರೂ ಆರಂಭದಲ್ಲಿ ಹೆಚ್ಚಿನ ಸ್ಪಂದನೆ ವ್ಯಕ್ತವಾಗಿರಲಿಲ್ಲ. ಮೇ 31ರಂದು ಯಶಸ್ವಿನಿ ಯೋಜನೆಯು ಆರೋಗ್ಯ ಕರ್ನಾಟಕ ಯೋಜನೆಯಡಿ ವಿಲೀನಗೊಂಡ ಬಳಿಕ ಕಾರ್ಡ್‌ ಪಡೆಯುವವರ ಸಂಖ್ಯೆ ಹೆಚ್ಚಾಗಿದೆ. ಇತ್ತೀಚೆಗೆ ಮುಂಜಾನೆಯಿಂದಲೇ ಜನ ಕಾರ್ಡ್‌ಗಾಗಿ ಸಾಲುಗಟ್ಟಿ ನಿಲ್ಲುವುದು ಕಂಡುಬರುತ್ತಿದೆ.

ಆ ಹಿನ್ನೆಲೆಯಲ್ಲಿ ಕಾರ್ಡ್‌ ಪಡೆಯಲು ಸಾರ್ವಜನಿಕರು ಧಾವಂತ ತೋರದೆ ಚಿಕಿತ್ಸೆ ಅಗತ್ಯವಿದ್ದಾಗಲೇ ಕಾರ್ಡ್‌ ಪಡೆಯುವಂತೆ ಆರೋಗ್ಯ ಇಲಾಖೆ ಮನವಿ ಮಾಡಿದೆ. ಕಾರ್ಡ್‌ ಇಲ್ಲದಿದ್ದರೂ ಬಿಪಿಎಲ್‌ ಪಡಿತರ ಕಾರ್ಡ್‌ ತೋರಿಸಿ ಚಿಕಿತ್ಸೆ ಪಡೆಯಬಹುದಾಗಿದ್ದು, ಆತಂಕಪಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.

ಆರೋಗ್ಯ ಕರ್ನಾಟಕ ಯೋಜನೆಯಡಿ ಏಪ್ರಿಲ್‌ನಿಂದ ಕಾರ್ಡ್‌ ವಿತರಣೆ ಆರಂಭವಾಗಿದ್ದರೂ ಇತ್ತೀಚೆಗೆ ಕಾರ್ಡ್‌ ಅಪೇಕ್ಷಿತರ ಸಂಖ್ಯೆ ಹೆಚ್ಚಾಗಿದೆ. ಕೆಲ ಆಸ್ಪತ್ರೆಗಳ ಬಳಿ ಮುಂಜಾನೆ 6ರಿಂದಲೇ ಜನ ಸಾಲುಗಟ್ಟಿ ನಿಲ್ಲಲಾರಂಭಿಸಿದ್ದಾರೆ. ಇದರಿಂದ ಜನರನ್ನು ನಿಯಂತ್ರಿಸಲು ಆಸ್ಪತ್ರೆ ಸಿಬ್ಬಂದಿ ಹರಸಾಹಸ ಪಡುವಂತಾಗಿದೆ.

ಮೊದಲ ಹಂತದಲ್ಲಿ ರಾಜ್ಯದ 11 ಆಸ್ಪತ್ರೆಗಳಲ್ಲಿ ಕಾರ್ಡ್‌ ವಿತರಿಸಲಾಗುತ್ತಿದ್ದು, ನಗರದ ಮಲ್ಲೇಶ್ವರದ ಕೆ.ಸಿ.ಜನರಲ್‌ ಆಸ್ಪತ್ರೆ, ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆ, ವಿಕ್ಟೋರಿಯಾ ಆಸ್ಪತ್ರೆ ಸೇರಿವೆ. ಸದ್ಯ ಕೆ.ಸಿ.ಜನರಲ್‌ ಆಸ್ಪತ್ರೆಯಲ್ಲಷ್ಟೇ ಕಾರ್ಡ್‌ ವಿತರಿಸುತ್ತಿದ್ದು, ನಿತ್ಯ 200ರಿಂದ 250 ಕಾರ್ಡ್‌ ವಿತರಣೆಯಾಗುತ್ತಿದೆ. ಉಳಿದೆರಡು ಆಸ್ಪತ್ರೆಗಳಲ್ಲಿ ರೋಗಿಗಳಿಗೆ ತೊಂದರೆಯಾಗುವುದನ್ನು ತಪ್ಪಿಸಲು ಆರಂಭಿಕವಾಗಿ ಒಳರೋಗಿಗಳಿಗೆ ಕಾರ್ಡ್‌ ನೀಡಲಾಗುತ್ತಿದೆ. 

ಕಾರ್ಡ್‌ ಪಡೆಯಲು ಕಾಲಮಿತಿ ಇಲ್ಲ: ಆರೋಗ್ಯ ಕಾರ್ಡ್‌ ಪಡೆಯಲು ಸರ್ಕಾರ ಕಾಲಮಿತಿ ನಿಗದಿಪಡಿಸಿಲ್ಲ. ಅನಾರೋಗ್ಯಕ್ಕೆ ಒಳಗಾದಾಗ ಪಡಿತರ ಚೀಟಿ  ಹಾಗೂ ಆಧಾರ್‌ ಕಾರ್ಡ್‌ ತೋರಿಸಿ ಚಿಕಿತ್ಸೆ ಪಡೆಯಬಹುದಾಗಿದ್ದು, ಆಗ ಕಾರ್ಡ್‌ ತೆಗೆದುಕೊಳ್ಳಬಹುದು.

ಬಿಪಿಎಲ್‌ ಕಾರ್ಡ್‌ದಾರರಿಗೆ ಬಹುತೇಕ ಚಿಕಿತ್ಸೆ ಉಚಿತ. ಎಪಿಎಲ್‌ ಕಾರ್ಡ್‌ದಾರರು ಪಡೆಯುವ ಚಿಕಿತ್ಸೆಯಲ್ಲಿ ಶೇ.30ರಷ್ಟನ್ನು ಸರ್ಕಾರ ಭರಿಸಲಿದ್ದು, ಉಳಿದಿದ್ದನ್ನು ರೋಗಿಯೇ ಪಾವತಿಸಬೇಕು. ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ ಕಾರ್ಡ್‌ ವಿತರಣೆ ಜವಾಬ್ದಾರಿ ವಹಿಸಿಕೊಂಡಿದೆ.

ಕಾರ್ಡ್‌ ಪಡೆಯುವುದು ಹೇಗೆ?: ಆರೋಗ್ಯ ಕಾರ್ಡ್‌ ಪಡೆಯಲು ಆಧಾರ್‌ ಕಾರ್ಡ್‌, ಪಡಿತರ ಚೀಟಿ ಕಡ್ಡಾಯ. ಪಡಿತರ ಚೀಟಿ ಇಲ್ಲದಿದ್ದರೆ ಆಧಾರ್‌ ಕಾರ್ಡ್‌ ತೆಗೆದುಕೊಂಡು ಹೋಗಬೇಕು. 10 ರೂ. ಪಾವತಿಸಿ ಅರ್ಜಿ ಪಡೆದು ಭರ್ತಿ ಮಾಡಬೇಕು. ದಾಖಲೆ ಪರಿಶೀಲಿಸಿ ಬೆರಳಚ್ಚು ಪಡೆದು ಕೆಲ ನಿಮಿಷದಲ್ಲೇ ಸ್ಥಳದಲ್ಲಿ ಕಾರ್ಡ್‌ ವಿತರಿಸುತ್ತಾರೆ. ಮೊದಲ ಕಾರ್ಡ್‌ಗೆ 10 ರೂ. ಕಾರ್ಡ್‌ ಕಳೆದರೆ 20 ರೂ. ಪಾವತಿಸಿ ಹೊಸ ಕಾರ್ಡ್‌ ಪಡೆಯಬಹುದು. ರಾಜ್ಯಾದ್ಯಂತ ಈವರೆಗೆ 2.55 ಲಕ್ಷ ಮಂದಿ ಕಾರ್ಡ್‌ ಪಡೆದಿದ್ದಾರೆ.

ಆರೋಗ್ಯ ಕಾರ್ಡ್‌ ಪಡೆಯಲು ಕಾಲಮಿತಿ ನಿಗದಿಪಡಿಸಿಲ್ಲ. ಅಲ್ಲದೆ ಚಿಕಿತ್ಸೆಗೆ ಈ ಕಾರ್ಡ್‌ ಕಡ್ಡಾಯವಲ್ಲ. ಅನಾರೋಗ್ಯದಿಂದ ಆಸ್ಪತ್ರೆಗೆ ತೆರಳಿದಾಗ ಅಲ್ಲಿಯೇ ಆರೋಗ್ಯ ಕಾರ್ಡ್‌ ಮಾಡಿಸಿ ಚಿಕಿತ್ಸೆ ನೀಡಲಾಗುವುದು. ಹಾಗಾಗಿ ಜನ ತಕ್ಷಣ ಕಾರ್ಡ್‌ ಪಡೆಯಲು ಧಾವಿಸುವ ಅಗತ್ಯವಿಲ್ಲ.
-ಡಾ.ಬಿ.ಎಆರ್‌.ಮೋಹನ್‌, ಸ್ಥಾನೀಯ ವೈದ್ಯಾಧಿಕಾರಿ, ಕೆ.ಸಿ.ಜನರಲ್‌ ಆಸ್ಪತ್ರೆ

ಮೂರು ಆಸ್ಪತ್ರೆಗಳ ಜತೆಗೆ ಇನ್ನಷ್ಟು ಕೇಂದ್ರಗಳಲ್ಲಿ ಕಾರ್ಡ್‌ ವಿತರಿಸುವಂತಾಗಬೇಕು. ಬೆಂಗಳೂರು ಒನ್‌, ವಾರ್ಡ್‌ ಕಚೇರಿ ಇತರೆಡೆ ವಿತರಿಸಿದರೆ ಅನುಕೂಲವಾಗಲಿದೆ.
-ರಜಿಯಾ ಬೇಗಂ, ಕಾರ್ಡ್‌ ಆಕಾಂಕ್ಷಿ

ಟಾಪ್ ನ್ಯೂಸ್

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.