ಸಿದ್ಧಗಂಗಾ ಶ್ರೀ ಪುತ್ಥಳಿ ನಿರ್ಮಾಣಕ್ಕೆ 5 ಕೋಟಿ


Team Udayavani, Aug 29, 2019, 3:05 AM IST

siddaganga

ಬೆಂಗಳೂರು: ನಗರದ ಉತ್ತರ ತಾಲೂಕಿನ ಯಶವಂತಪುರ ಹೋಬಳಿಯ ದೊಡ್ಡಬಿದರಕಲ್ಲು ಗ್ರಾಮದ ಜಮೀನನ್ನು ಸಿದ್ಧಗಂಗಾ ಶ್ರೀ ಡಾ. ಶಿವಕುಮಾರ ಸ್ವಾಮೀಜಿ ಅವರ ಪುತ್ಥಳಿ ಹಾಗೂ ಧ್ಯಾನ ಮಂದಿರ ನಿರ್ಮಾಣಕ್ಕೆ ಪಾಲಿಕೆಗೆ ಹಸ್ತಾಂತರ ಮಾಡಲು ಅಗತ್ಯ ಕ್ರಮ ಕೈಗೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತಿಳಿಸಿದರು.

ಬುಧವಾರ ಜಯನಗರದ ಎಂ.ಎನ್‌.ಕೃಷ್ಣ ರಾವ್‌ ಉದ್ಯಾನವನದಲ್ಲಿ ನೂತನವಾಗಿ ನಿರ್ಮಿಸಿರುವ ಶಿವಕುಮಾರ ಸ್ವಾಮೀಜಿ ಬ್ಯಾಡ್ಮಿಂಟನ್‌ ಒಳಾಂಗಣ ಕ್ರೀಡಾಂಗಣ ಹಾಗೂ ಶಿವಕುಮಾರ ಸ್ವಾಮೀಜಿಯವರ ಪುತ್ಥಳಿ ಅನಾವರಣ ಮಾಡಿದ ಸಿಎಂ ಯಡಿಯೂರಪ್ಪ, ಬಿಬಿಎಂಪಿ ತನ್ನ ಬಜೆಟ್‌ನಲ್ಲಿ ಶಿವಕುಮಾರ ಸ್ವಾಮೀಜಿರವರ ಪುತ್ಥಳಿ ಹಾಗೂ ಧ್ಯಾನ ಮಂದಿರ ನಿರ್ಮಾಣಕ್ಕೆ 5 ಕೋಟಿ ರೂ. ಅನುದಾನ ಮೀಸಲಿರಿಸಿದ್ದು,

ಅಗತ್ಯ ಸ್ಥಳವನ್ನು ಒಂದು ವಾರದೊಳಗೆ ನಗರ ಪಾಲಿಕೆಗೆ ಹಸ್ತಾಂತರ ಮಾಡಲು ಕ್ರಮ ಕೈಗೊಳ್ಳುತ್ತೇನೆ ಎಂದರು. ನಗರದಲ್ಲಿನ ಮಾಲಿನ್ಯ ತಡೆಗಟ್ಟಲು ಹೆಚ್ಚಿನ ಉದ್ಯಾನವನಗಳನ್ನು ಅಭಿವೃದ್ಧಿ ಪಡಿಸಬೇಕಿದೆ.ನಗರದಲ್ಲಿ ಲಭ್ಯವಿರುವ ಸ್ಥಳಗಳಲ್ಲಿ ಉದ್ಯಾನವನಗಳನ್ನು ನಿರ್ಮಿಸಲು ಸರಕಾರ ಹೆಚ್ಚಿನ ಆಧ್ಯತೆ ನೀಡುತ್ತದೆ. ಆದ್ದರಿಂದ ಈ ಉದ್ಯಾನವನ ಹೊಸದಾಗಿ ಶಟಲ್‌ ಬ್ಯಾಡ್ಮಿಂಟನ್‌ ಒಳಾಂಗಣ ಕ್ರೀಡಾಂಗಣ ನಿರ್ಮಿಸಲಾಗಿದೆ ಎಂದರು.

ಶ್ರೀ ಸಿದ್ಧಲಿಂಗ ಮಹಾಸ್ವಾಮಿ ಪೀಠಾಧ್ಯಕ್ಷ ಸಿದ್ಧಲಿಂಗ ಸ್ವಾಮೀಜಿ ಮಾತನಾಡಿ, ಬೆಂಗಳೂರಿಗೆ ಉದ್ಯಾನವನ ನಗರಿ ಎಂಬ ಹೆಸರು ಬಳಸಿ ಉಳಿಸಿಕೊಂಡಿರುವ ಪಟ್ಟಿಯಲ್ಲಿ ಜಯನಗರವು ಸೇರಿದೆ. ಉತ್ತಮ ಆಯೋಗ್ಯ ಕಾಪಾಡಿಕೊಳ್ಳಲು ನಿಟ್ಟಿನಲ್ಲಿ ಜನತೆ ಬಹುಮುಖ್ಯ ಪಾತ್ರ ವಹಿಸಬೇಕು ಎಂದರು. ಮೇಯರ್‌ ಗಂಗಾಂಬಿಕೆ, ನೂತನ ಆಯುಕ್ತ ಎ.ಎಚ್‌ ಅನಿಲ್‌ ಕುಮಾರ್‌, ಉಪ ಮೇಯರ್‌ ಬಿ.ಭದ್ರೇಗೌಡ, ಕಟ್ಟೆ ಸತ್ಯನಾರಾಯಣ, ಜಯನಗರ ಶಾಸಕಿ ಸೌಮ್ಯ ರೆಡ್ಡಿ, ಬಿಬಿಎಂಪಿ ಆಡಳಿತ ಪಕ್ಷದ ನಾಯಕ ಅಬ್ದುಲ್‌ ವಾಜೀದ್‌, ಬಿಬಿಎಂಪಿ ವಿರೋಧ ಪಕ್ಷದ ನಾಯಕ ಪದ್ಮನಾಭ ರೆಡ್ಡಿ, ಜೆಡಿಎಸ್‌ ಪಕ್ಷದ ನಾಯಕಿ ನೇತ್ರಾನಾರಾಯಣ್‌ ಹಾಜರಿದ್ದರು.

ಮುಖ್ಯಮಂತ್ರಿಗಳ ನಿಧಿಗೆ 5 ಲಕ್ಷ ರೂ. ಚೆಕ್‌: ಎಂ.ಎನ್‌.ಕೃಷ್ಣರಾವ್‌ ಪಾರ್ಕ್‌ ನ್ಪೋರ್ಟ್ಸ್ ಅಸೋಸಿಯೇಷನ್‌ ವತಿಯಿಂದ ಉತ್ತರ ಕರ್ನಾಟಕ ಪ್ರವಾಹ ಪೀಡಿತ ಪ್ರದೇಶಗಳಿಗೆ ಐದು ಲಕ್ಷ ರೂ. ದೇಣಿಗೆಯನ್ನು ಮುಖ್ಯಮಂತ್ರಿಗಳ ನಿಧಿಗೆ ಚೆಕ್‌ ನೀಡಲಾಯಿತು.

ನಗರದ ಜನರು ಒತ್ತಡದ ಜೀವನ ನಡೆಸುತ್ತಿದ್ದಾರೆ. ಅವರ ಆರೋಗ್ಯದ ಹಿತದೃಷ್ಟಿಯಿಂದ ಎಲ್ಲಾ ವಾರ್ಡ್‌ಗಳ ಉದ್ಯಾನಗಳಲ್ಲಿ ಒಳಾಂಗಣ ಹಾಗೂ ಹೊರಾಂಗಣ ಕ್ರೀಡಾಂಗಣಗಳನ್ನು ನಿರ್ಮಿಸಲಾಗಿದೆ.
-ಗಂಗಾಂಬಿಕೆ, ಮೇಯರ್‌ ಬಿಬಿಎಂಪಿ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.