50 ಕೆ.ಜಿ ಗಾಂಜಾ ವಶ: ಇಬ್ಬರ ಬಂಧನ
Team Udayavani, Sep 15, 2020, 11:36 AM IST
ಬೆಂಗಳೂರು: ಆಂಧ್ರದವಿಶಾಖಪಟ್ಟಣಂನಿಂದ ಗಾಂಜಾ ತಂದು ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸುವಲ್ಲಿ ಕೋಣನಕುಂಟೆ ಪೊಲೀಸರು ಯಶಸ್ವಿಯಾಗಿದ್ದು,50ಕೆ.ಜಿ ಗಾಂಜಾ ವಶಪಡಿಸಿ ಕೊಂಡಿದ್ದಾರೆ.
ಕೊಳ್ಳೆಗಾಲ ಮೂಲದ ಎಂ ಸುರೇಶ, ವಿಶಾಖಪಟ್ಟಣದ ಬಂಟು ತಾತಾರಾಮ್ ಬಂಧಿತರು. ಸೆ.13ರಂದು ಕೊತ್ತನೊರಿನ ಬ್ರೂಕ್ಸ್ ಹೆವನ್ ಲೇಔಟ್ನಲ್ಲಿ ಗಾಂಜಾ ಮಾರಾಟ ಮಾಡಲಾಗುತ್ತಿದೆ ಎಂಬ ಬಗ್ಗೆ ಮಾಹಿತಿಆಧರಿಸಿ ಕಾರ್ಯಾಚರಣೆನಡೆಸಿಆರೋಪಿ ಸುರೇಶ್ನನ್ನು ಬಂಧಿಸಲಾಯಿತು. ಆತನ ಬಳಿಯಿದ್ದ 1,040 ಗ್ರಾಂ ಗಾಂಜಾ ಜಪ್ತಿ ಮಾಡಿಕೊಳ್ಳಲಾಗಿತ್ತು. ಆರೋಪಿ ಸುರೇಶ್ ವಿರುದ್ಧ ಪ್ರಕರಣ ದಾಖಲಿಸಿಕೊಂಡುವಿಚಾರಣೆನಡೆಸಿದಾಗ ಆತ ಸ್ನೇಹಿತ ಬಂಟು ತಾತಾರಾಮ್ ಬಗ್ಗೆ ಮಾಹಿತಿ ನೀಡಿದ. ಇದನ್ನು ಆಧರಿಸಿ ಇನ್ಸ್ಪೆಕ್ಟರ್ ಟಿ.ಎಂ ಧರ್ಮೇಂದ್ರ ನೇತೃತ್ವದ ತಂಡ, ಜೆ.ಪಿ ನಗರ ಎಂಟನೇ ಹಂತದ ಮಹೇಶ್ವರ ಲೇಔಟ್ನಲ್ಲಿಮನೆಯೊಂದರ ಮೂರನೇ ಮಹಡಿಯಲ್ಲಿ ಶೋಧ ನಡೆಸಲಾಯಿತು.ಈ ವೇಳೆ ಮನೆಯಲ್ಲಿದ್ದ ಬಂಟು ತಾತಾರಾಮ್ ಸಿಕ್ಕಿಬಿದ್ದ ಜತೆಗೆಆತ ಮನೆಯಲ್ಲಿ ಸಂಗ್ರಹಿಸಿದ್ದ 48 ಕೆ.ಜಿ 950 ಗ್ರಾಂಗಾಂಜಾ ವಶಪಡಿಸಿಕೊಳ್ಳಲಾಯಿತು. ಮೌಲ್ಯ ಸುಮಾರು 25 ಲಕ್ಷ ರೂ. ಮೌಲ್ಯ ಎಂದು ಪೊಲೀಸರು ತಿಳಿಸಿದ್ದಾರೆ.
ಹಲವಾರು ವರ್ಷಗಳಿಂದ ದಂಧೆಯಲ್ಲಿರುವ ಆರೋಪಿಗಳು, ಆಂಧ್ರದ ವಿಶಾಖಪಟ್ಟಂನಿಂದ ಕಡಿಮೆ ಬೆಲೆಗೆ ಗಾಂಜಾ ಖರೀದಿಸಿಕೊಂಡು ಬರುತ್ತಿದ್ದರು. ಇಲ್ಲಿನ ಮನೆಯಲ್ಲಿ ಅಷ್ಟೂ ಪ್ರಮಾಣದ ಗಾಂಜಾವನ್ನು ಸಬ್ ಪೆಡ್ಲರ್ ಗಳ ಮೂಲಕಕಾಲೇಜು ವಿದ್ಯಾರ್ಥಿಗಳು ಹಾಗೂ ಐಟಿ ಉದ್ಯೋಗಿಗಳಿಗೆ ಮಾರಾಟ ಮಾಡುತ್ತಿದ್ದರು ಎಂಬ ಸಂಗತಿ ತನಿಖೆಯಲ್ಲಿ ಗೊತ್ತಾಗಿದೆ. ಆರೋಪಿಗಳ ಜತೆ ಇನ್ನೂ ಹಲವರು ಭಾಗಿಯಾಗಿರುವ ಬಗ್ಗೆ ಮಾಹಿತಿ ದೊರೆತಿದ್ದು, ತನಿಖೆ ಮುಂದುವರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fraud: ರೈಸ್ ಪುಲ್ಲಿಂಗ್ ಹೆಸರಿನಲ್ಲಿ ವಂಚನೆಗೆ ಯತ್ನ; 3 ಸೆರೆ, 69.79 ಲಕ್ಷ ವಶ
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ
Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!
Glanders infection: ಗ್ಲ್ಯಾಂಡರ್ಸ್ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ
Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ
MUST WATCH
ಹೊಸ ಸೇರ್ಪಡೆ
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ