ಸರ್ಕಾರಿ ಕಚೇರಿಗಳಿಗೆ 50 ಮಹಡಿಯ ಅವಳಿ ಗೋಪುರ

8.50 ಎಕರೆ ಪ್ರದೇಶದಲ್ಲಿ ಸುಸಜ್ಜಿತ 50 ಮಹಡಿಗಳ ಅವಳಿ ಗೋಪುರ: ಡಿಸಿಎಂ ಗೋವಿಂದ ಕಾರಜೋಳ

Team Udayavani, Dec 12, 2020, 12:34 PM IST

ಸರ್ಕಾರಿ ಕಚೇರಿಗಳಿಗೆ 50 ಮಹಡಿಯ ಅವಳಿ ಗೋಪುರ

ಬೆಂಗಳೂರು: ಬಾಡಿಗೆ ಕಟ್ಟಡಗಳಲ್ಲಿರುವ ಸರ್ಕಾರಿ ಕಚೇರಿಗಳನ್ನು ಒಂದೇ ಸೂರಿನಡಿ ತರುವಸದುದ್ದೇಶದಿಂದ ನಗರದ ಆನಂದರಾವ್‌ ವೃತ್ತದಬಳಿ ಇರುವ ಲೋಕೋಪಯೋಗಿ ಇಲಾಖೆಯ 8.50 ಎಕರೆ ಪ್ರದೇಶದಲ್ಲಿ 1,250 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ 50 ಮಹಡಿಗಳಅವಳಿಗೋಪುರವನ್ನು ನಿರ್ಮಿಸಲಾಗುವುದು ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ಹೇಳಿದರು.

ಕಾಮಗಾರಿ ಉದ್ದೇಶಿತ ಸ್ಥಳಕ್ಕೆ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಹಲವು ಸರ್ಕಾರಿ ಕಚೇರಿಗಳು ಬಾಡಿಗೆ ಕಟ್ಟಡದಲ್ಲಿದೆ. ಇದರಿಂದ ಸರ್ಕಾರದ ಬೊಕ್ಕಸಕ್ಕೆ ಹೊರೆಯಾಗುವ ಜತೆಗೆ ಸಕಾಲದಲ್ಲಿ ಸಮನ್ವಯತೆಯಿಂದ ಕಾರ್ಯನಿರ್ವಹಿಸಲು ಕಷ್ಟವಾಗುತ್ತಿದೆ. ಹೀಗಾಗಿ2020-21ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವಂತೆ ಅವಳಿ ಗೋಪುರಗಳನಿರ್ಮಾಣವನ್ನು ರಾಷ್ಟ್ರೀಯ ಕಟ್ಟಡಗಳ ನಿರ್ಮಾಣ ನಿಗಮ (ಎನ್‌ಬಿಸಿಸಿ) ಸಹ ಯೋಗದೊಂದಿಗೆ 1,250 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಮಾಡಲಿದ್ದೇವೆ ಎಂದು ಮಾಹಿತಿ ನೀಡಿದರು.

30 ವರ್ಷಗಳಿಗೆ ಲೀಸ್‌: ವಾರ್ಷಿಕ 150 ಕೋಟಿ ರೂ.ಗಳನ್ನು ಸರ್ಕಾರಿ ಕಚೇರಿಗಳಿಗೆ ಬಾಡಿಗೆ ನೀಡುತ್ತಿದ್ದೇವೆ. ಈ ಅವಳಿ ಕಟ್ಟಡ ಪೂರ್ಣವಾದ ನಂತರ 250 ಕೋಟಿಗೂ ಅಧಿಕ ರೂ. ವಾರ್ಷಿಕ ಉಳಿತಾಯವಾಗಲಿದೆ. ಈ ಕಟ್ಟಡದಲ್ಲಿ ಶೇ.60ರಷ್ಟು ರಾಜ್ಯ ಸರ್ಕಾರ ಹಾಗೂ ಶೇ.40ರಷ್ಟು ಎನ್‌ಬಿಸಿಸಿ ಬಳಸಿಕೊಳ್ಳಲಿದೆ. ಕಟ್ಟಡವು ಖಾಸಗಿ ಸಾರ್ವಜನಿಕ ಸಹಭಾಗಿತ್ವದಲ್ಲಿ ಆಗಲಿರುವುದರಿಂದ 30ವರ್ಷಗಳಿಗೆ ಎನ್‌ಬಿಸಿಸಿಗೆ ಲೀಸ್‌ ಮೇಲೆ ನೀಡಲಿದ್ದೇವೆ ಎಂದು ಹೇಳಿದರು.

8.50 ಎಕರೆ ಸರ್ಕಾರಿ ನಿವೇಶನ: ಕಳೆದ ಸಚಿವಸಂಪುಟದಲ್ಲಿ ಈ ಪ್ರಸ್ತಾವನೆಗೆ ಅನುಮೋದನೆನೀಡಲಾಗಿದೆ. ವಿಧಾನಸೌಧ, ವಿಕಾಸಸೌಧ, ಮೆಜೆಸ್ಟಿಕ್‌, ರೈಲ್ವೆ ನಿಲ್ದಾಣ, ಮೆಟ್ರೋ ನಿಲ್ದಾಣಕ್ಕೂ ಈ ಪ್ರದೇಶ ಸಮೀಪವಿದ್ದು, ಸರ್ಕಾರಿ ನೌಕರರು ಹಾಗೂ ಸಾರ್ವಜನಿಕರಿಗೆ ಅನುಕೂಲವಾಗಲಿದೆ.8.50 ಎಕರೆ ಸರ್ಕಾರಿ ನಿವೇಶನದಲ್ಲಿ 23.94 ಲಕ್ಷ ಚದುರ ಅಡಿ ವಿಸ್ತೀರ್ಣದಲ್ಲಿ ಈ ಬೃಹತ್‌ ಕಟ್ಟಡವನ್ನು ಮುಂದಿನ ಎರಡು ವರ್ಷದಲ್ಲಿ ಪೂರ್ಣಗೊಳಿಸುವ ಗುರಿ ಹೊಂದಿದ್ದೇವೆ. ಈ ಸಂಬಂಧ ಶೀಘ್ರವೇ ಎನ್‌ಬಿಸಿಸಿ ಅವರೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲಿದ್ದೇವೆ ಎಂದರು. ಈ ನಿವೇಶನದಲ್ಲಿ 1940ಕ್ಕಿಂತಲೂ ಹಿಂದೆ ನಿರ್ಮಿಸಲಾದ ಲೋಕೋಪಯೋಗಿ ಇಲಾಖೆಯ ಕಟ್ಟಡಗಳು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಟ್ಟಡಗಳು ಸೇರಿದಂತೆ ವಿವಿಧ ಇಲಾಖೆಗಳ ಕಟ್ಟಡಗಳಿವೆ. ಇವುಗಳನ್ನು ಶೀಘ್ರವಾಗಿ ಬೇರೆಡೆಗೆ ಸ್ಥಳಾಂತರಿಸಲಾಗುತ್ತದೆ. ಬಿಎಂಟಿಸಿಕಟ್ಟಡಕ್ಕೆ ಸ್ಥಳಾಂತರಿಸಲು ಈಗಾಗಲೇ ಮಾತುಕತೆನಡೆಸಿದ್ದೇವೆ. ಈ ಹಿಂದೆ400ಕೋಟಿರೂ. ವೆಚ್ಚದಲ್ಲಿಈ ಕಟ್ಟಡ ನಿರ್ಮಾಣಕ್ಕೆ ಉದ್ದೇಶಿಸಲಾಗಿತ್ತು. ಈಗ ಅದನ್ನು 1250 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಿದ್ದೇವೆ. ಈಗ ಇರುವ ಗ್ರಾಮೀಣ ಭವನ ಹಾಗೇ ಉಳಿದುಕೊಳ್ಳಲಿದ್ದು, ಅದರ ಸುತ್ತಲೂ ಹೊಸ ಕಟ್ಟಡ ನಿರ್ಮಾಣ ಆಗಲಿದೆ ಎಂದು ಹೇಳಿದರು.

ಲೋಕೋಪಯೋಗಿ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ರಜನೀಶ್‌ ಗೋಯಲ್‌, ಮುಖ್ಯಅಭಿಯಂತರ ‌ ಶಿವಯೋಗಿ ಹಿರೇಮಠ, ಅಧೀಕ್ಷಕ ಅಭಿಯಂತರ ಎಲ್‌. ಶ್ರೀಧರಮೂರ್ತಿ, ಕಾರ್ಯನಿರ್ವಾಹಕ ಅಭಿಯಂತರ ಜಿ.ಡಿ.ಕುಮಾರ್‌ ಇತರರು ಇದ್ದರು.

ಲೋಕೋಪಯೋಗಿ ಇಲಾಖೆಯಲ್ಲಿ ಸುಮಾರು 5,500 ಕೋಟಿ ರೂ.ಗಳ ಬಿಲ್‌ ಬಾಕಿಯಿದೆ.ಕೋವಿಡ್ ದಿಂದ ಆರ್ಥಿಕ ಪರಿಸ್ಥಿತಿಯಲ್ಲಿ ಸ್ವಲ್ಪ ಏರುಪೇರಾಗಿರುವುದರಿಂದ ಬಿಲ್‌ ಪಾವತಿ ವಿಳಂಬವಾಗಿದೆ. ಈಗ ಪರಿಸ್ಥಿತಿ ಸುಧಾರಿಸುತ್ತಿರುವುದರಿಂದ ದಿನೇದಿನೆ ಬಿಲ್‌ ಪಾವತಿ ಮಾಡುತ್ತಿದ್ದೇವೆ. ಗೋವಿಂದ ಎಂ.ಕಾರಜೋಳ, ಉಪಮುಖ್ಯಮಂತ್ರಿ

ಟಾಪ್ ನ್ಯೂಸ್

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

Padubidri: ಬೈಕಿಗೆ ಡಿಕ್ಕಿ ಹೊಡೆದ ಕಾರು… ಪೊಲೀಸ್‌ ಕಾನ್‌ಸ್ಟೆಬಲ್‌ ಗೆ ಗಾಯ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

orangrapady

Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್‌ ಸವಾರ ಮೃತ್ಯು

yatnal

LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

Belthangady: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ

1-sadadas

NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.