ಆಯುಕ್ತರ ಹೆಸರಲ್ಲಿ 50 ಸಾವಿರ ವಂಚನೆ


Team Udayavani, Jan 12, 2020, 3:06 AM IST

fruad

ಬೆಂಗಳೂರು: ನಗರ ಪೊಲೀಸ್‌ ಆಯುಕ್ತ ಭಾಸ್ಕರ್‌ ರಾವ್‌ ಹೆಸರಿನಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ನಿವೃತ್ತ ಪೊಲೀಸ್‌ ಅಧಿಕಾರಿಗೆ 50 ಸಾವಿರ ರೂ. ವಂಚಿಸಿ ರುವ ಪ್ರಕರಣ ಬೆಳಕಿಗೆ ಬಂದಿದೆ. ಅರಕೆರೆ ನಿವಾಸಿ ನಿವೃತ್ತ ಪೊಲೀಸ್‌ ಅಧಿಕಾರಿ ಶ್ರೀಧರ್‌ ಹಣ ಕಳೆದುಕೊಂಡವರು. ಈ ಸಂಬಂಧ ಇನ್‌ಫ್ಯಾಂಟ್ರಿ ರಸ್ತೆಯ ನಗರ ಪೊಲೀಸ್‌ ಆಯುಕ್ತರ ಕಚೇರಿ ಆವರಣಲ್ಲಿರುವ ಸಿಇಎನ್‌ ಪೊಲೀಸ್‌ ಠಾಣೆ (ಸೈಬರ್‌ ಕ್ರೈಂ ಠಾಣೆ)ಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

ಶ್ರೀಧರ್‌ ಅವರು ತಮ್ಮ ಮನೆಯಲ್ಲಿದ್ದ ಟ್ರೆಡ್ಮಿಲ್‌ ಅನ್ನು ಓಎಲ್‌ಎಕ್ಸ್‌ನಲ್ಲಿ ಮಾರಾ ಟಕ್ಕಿರಿಸಿ ಜಾಹೀರಾತು ನೀಡಿದ್ದರು. ಅದನ್ನು ಗಮನಿಸಿದ ಅಪರಿಚಿತ ವ್ಯಕ್ತಿಯೊಬ್ಬ ಶ್ರೀಧರ್‌ಗೆ ಕರೆ ಮಾಡಿ ಟ್ರೆಡ್ಮಿಲ್‌ ಖರೀದಿಸುವುದಾಗಿ ತನ್ನ ಮೊಬೈಲ್‌ ನಂಬರ್‌ ಕಳುಹಿಸಿದ್ದಾನೆ. ಅಲ್ಲದೆ, ತಾನು ನಗರದಲ್ಲಿ ಹಿರಿಯ ಪೊಲೀಸ್‌ ಅಧಿಕಾರಿಯಾಗಿದ್ದು, ತನ್ನೊಂದಿಗೆ ಗೌರವದಿಂದ ಮಾತನಾಡು ವಂತೆ ಹಿಂದಿ ಮತ್ತು ಇಂಗ್ಲಿಷ್‌ನಲ್ಲಿ ಸೂಚಿಸಿದ್ದಾನೆ.

ಗೂಗಲ್‌ ಪೇ ಮೂಲಕ ಹಣ ಕಳುಹಿಸುತ್ತೇನೆ ಎಂದಿದ್ದ ಆರೋಪಿ, ಗೂಗಲ್‌ ಪೇ ಲಿಂಕ್‌ನಲ್ಲಿ ಕ್ಯೂಆರ್‌ ಕೋಡ್‌ ಕಳುಹಿಸಿ, ಅದನ್ನು ಸ್ಕ್ಯಾನ್‌ ಮಾಡಿ ಹಣ ಬರುತ್ತದೆ ಎಂದಿದ್ದಾನೆ. ಅದನ್ನು ನಂಬಿದ ಶ್ರೀಧರ್‌ ಸ್ಕ್ಯಾನ್‌ ಮಾಡುತ್ತಿದ್ದಂತೆ ಮೊದಲಿಗೆ 9,500 ರೂ. ನಂತರ 19,500, ಮತ್ತೂಮ್ಮೆ 11 ಸಾವಿರ ಹೀಗೆ ನಾಲ್ಕೈದು ಬಾರಿ ಒಟ್ಟು 50 ಸಾವಿರ ರೂ. ಹಣ ಕಬಳಿಸಿದ್ದಾನೆ. ತಮ್ಮ ಖಾತೆಯಿಂದ ಏಕಾಏಕಿ 50 ಸಾವಿರ ರೂ. ವರ್ಗಾವಣೆ ಆಗಿರುವ ಕುರಿತು ಬ್ಯಾಂಕ್‌ನಿಂದ ಬಂದ ಸಂದೇಶ ಕಂಡು ಗಾಬರಿಗೊಂಡ ಶ್ರೀಧರ್‌, ಆರೋಪಿಗೆ ಕರೆ ಮಾಡಿದ್ದಾರೆ. ಅಷ್ಟರಲ್ಲಿ ಆತನ ಮೊಬೈಲ್‌ ನಂಬರ್‌ ಸ್ವಿಚ್‌ ಆಫ್ ಆಗಿತ್ತು ಎಂದು ಪೊಲೀಸರು ಮಾಹಿತಿ ನೀಡಿದರು.

ಮತ್ತೂಬ್ಬ ಕರೆ ಮಾಡಿ ಕ್ಯೂಆರ್‌ ಕೋಡ್‌ ಕಳಿಸಿದ!: ಈ ಮಧ್ಯೆ ಕೆಲ ಹೊತ್ತಿನ ಬಳಿಕ ಮತ್ತೂಬ್ಬ ಅಪರಿಚಿತ ವ್ಯಕ್ತಿ ಶ್ರೀಧರ್‌ ಅವರಿಗೆ ಕರೆ ಮಾಡಿ, “ಕೆಲ ಕ್ಷಣಗಳ ಹಿಂದೆ ನಿಮಗೆ ಕರೆ ಮಾಡಿದ ವ್ಯಕ್ತಿ ಕಳ್ಳನಾಗಿದ್ದು, ಆತನನ್ನು ಬಂಧಿಸುತ್ತೇವೆ. ಹೀಗಾಗಿ ನಮ್ಮ ಖಾತೆಗೆ ಹಣ ವರ್ಗಾಹಿಸಬೇಕು ಎಂದು ಸೂಚಿಸಿ, ಆತನೂ ಕ್ಯೂಆರ್‌ ಕೋಡ್‌ ಕಳುಹಿಸಿದ್ದಾನೆ.

ಆಗ ಇದೊಂದು ಆನ್‌ಲೈನ್‌ ವಂಚನೆ ಜಾಲ ಎಂದು ತಿಳಿದ ನಿವೃತ್ತ ಅಧಿಕಾರಿ, ಆರೋಪಿ ಜತೆಗಿನ ಚಾಟಿಂಗ್‌ ಮತ್ತು ಕ್ಯೂಆರ್‌ ಕೊಡ್‌ ಸಮೇತ ಎಚ್‌ಎಸ್‌ಆರ್‌ ಲೇಔಟ್‌ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಆನ್‌ಲೈನ್‌ ವಂಚನೆಯಾದರಿಂದ ನಗರ ಪೊಲೀಸ್‌ ಆಯುಕ್ತರ ಕಚೇರಿ ಆವರಣದಲ್ಲಿರುವ ಸಿಇಎನ್‌ ಠಾಣೆಗೆ ಪ್ರಕರಣ ವರ್ಗಾವಣೆ ಮಾಡಲಾಗಿದೆ. ಪ್ರಾಥಮಿಕ ವಿಚಾರಣೆಯಲ್ಲಿ ಆರೋಪಿಯೂ ಹರಿಯಾಣದಿಂದ ಕರೆ ಮಾಡಿರುವುದು ಗೊತ್ತಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದರು.

ಡಿಪಿಯಲ್ಲಿ ಭಾಸ್ಕರ್‌ ರಾವ್‌ ಫೋಟೋ: ಟ್ರೆಡ್ಮಿಲ್‌ ಖರೀದಿಸುವುದಾಗಿ ಕರೆ ಮಾಡಿದ ವ್ಯಕ್ತಿ ಟ್ರೂಕಾಲರ್‌ನಲ್ಲಿ ತನ್ನ ಹೆಸರನ್ನು “ಭಾಸ್ಕರ್‌ ರಾವ್‌ ಐಪಿಎಸ್‌’ ಎಂದು ಬರೆದುಕೊಂಡಿದ್ದ. ಅಲ್ಲದೆ, ತನ್ನ ವಾಟ್ಸ್‌ಆ್ಯಪ್‌ ಡಿಪಿಯಲ್ಲಿಯೂ ಭಾಸ್ಕರ್‌ ರಾವ್‌ ಅವರ ಭಾವಚಿತ್ರ ಹಾಕಿಕೊಂಡಿದ್ದ. ಹೀಗಾಗಿ ಶ್ರೀಧರ್‌ ಆರೋಪಿಯ ಜತೆ ವ್ಯವಹಾರ ನಡೆಸಿದ್ದರು. ನಂತರದ ಬೆಳವಣಿಗೆಗಳಿಂದ ವಂಚನೆಗೊಳಗಾಗಿರುವುದು ಗೊತ್ತಾಗಿ ದೂರು ನೀಡಿದ್ದಾರೆ. ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

15-uv-fusion

Government School: ಸರಕಾರಿ ಶಾಲೆಯನ್ನು ಉಳಿಸಿ-ಬೆಳೆಸೋಣ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

14-uv-fusion

Role: ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ನಮ್ಮ ಪಾತ್ರ

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

Sandalwood: ಶೈನ್‌ ಶೆಟ್ಟಿ ಹೊಸ ಚಿತ್ರಕ್ಕೆ “ಜಸ್ಟ್‌ ಮ್ಯಾರೀಡ್‌” ಟೈಟಲ್

13-sister

Elder Sister: ಅಕ್ಕ ಅನ್ನೋ ಮಾತೃ ಸ್ವರೂಪಿಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.