ರಾಜಧಾನಿಯಲ್ಲಿ ಶೇ.54.72 ಮತದಾನ


Team Udayavani, May 14, 2018, 11:54 AM IST

rajadhani.jpg

ಬೆಂಗಳೂರು: ಚುನಾವಣಾ ಆಯೋಗದಿಂದ ಹಲವಾರು ಪ್ರಚಾರಾಂದೋಲನಗಳನ್ನು ಕೈಗೊಂಡರೂ ಬೆಂಗಳೂರು ನಗರದಲ್ಲಿ ಮತದಾನ ಪ್ರಮಾಣ ರಾಜ್ಯ ಸರಾಸರಿಯ ಸಮೀಪಕ್ಕೂ ಸುಳಿಯದಿರುವ ಬಗ್ಗೆ ತೀವ್ರ ಟೀಕೆಗಳು ವ್ಯಕ್ತವಾಗಿವೆ. 

ಮತದಾನ ಪ್ರಮಾಣ ಹೆಚ್ಚಿಸುವ ಉದ್ದೇಶದಿಂದ ಆಯೋಗವು ನಗರದಲ್ಲಿ ಹಲವಾರು ಜಾಗೃತಿ ಕಾರ್ಯಕ್ರಮಗಳನ್ನು ಕೈಗೊಂಡಿತ್ತು. ಆದರೂ, ಬೆಂಗಳೂರಿನ ಮತದಾರರದಿಂದ ಹೆಚ್ಚಿನ ರೀತಿ ಸ್ಪಂದನೆ ದೊರೆಕಿಲ್ಲ. ಶನಿವಾರ ಬೆಂಗಳೂರು ನಗರ ಜಿಲ್ಲೆಯ 26 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಅಂತಿಮವಾಗಿ ಶೇ.54.72ರಷ್ಟು ಮತದಾನ ದಾಖಲಾಗಿರುವುದು ಇದಕ್ಕೆ ನಿದರ್ಶನವಾಗಿದೆ. 

ಚುನಾವಣಾ ಆಯೋಗದ ವತಿಯಿಂದ ಮತದಾನದ ಕುರಿತು ಜನರಿಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಇದೇ ಮೊದಲ ಬಾರಿಗೆ 2 ಕೋಟಿ ರೂ. ವೆಚ್ಚದಲ್ಲಿ ಚುನಾವಣಾ ಗೀತೆ ರಚಿಸಲಾಗಿತ್ತು. ಇದರೊಂದಿಗೆ ಸಾರ್ವಜನಿಕರಿಗೆ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರುಗಳನ್ನು ಪರಿಶೀಲಿಸಿಕೊಳ್ಳಲು ಸುಲಭ ವಿಧಾನಗಳನ್ನು ಮಾಡಲಾಗಿತ್ತು. ಅಲ್ಲದೆ, ಮತಗಟ್ಟೆ ವಿವರಗಳನ್ನು ಸಂದೇಶದ ಮೂಲಕ ಪಡೆಯುವ ವ್ಯವಸ್ಥೆ ಸಹ ಮಾಡಲಾಗಿತ್ತು.

ಮತಗಟ್ಟೆಗಳಿಗೆ ಸುಲಭವಾಗಿ ತೆರಳಲು ಅನುಕೂಲವಾಗುವಂತೆ ಪೋಲಿಂಗ್‌ ಸ್ಟೇಷನ್‌ ಲೊಕೇಟರ್‌ ಆ್ಯಪ್‌ ಸಹ ಮಾಡಲಾಗಿತ್ತು. ಈ ಆ್ಯಪ್‌ನಲ್ಲಿ ಗುರುತಿನ ಚೀಟಿ ಸಂಖ್ಯೆ ದಾಖಲಿಸಿದರೆ ಮತಗಟ್ಟೆಯ ವಿವರದೊಂದಿಗೆ ನೇರವಾಗಿ ಗೂಗಲ್‌ ಮ್ಯಾಪ್‌ ಮೂಲಕ ಮತಗಟ್ಟೆ ತಲುಪುವ ವ್ಯವಸ್ಥೆ ಮಾಡಲಾಗಿತ್ತು. ಇದರೊಂದಿಗೆ ಯುವಕರಲ್ಲಿ ಮತದಾನ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಕಾಲೇಜು ರಾಯಭಾರಿಗಳನ್ನು ನೇಮಿಸಲಾಗಿತ್ತು.

ಇದರೊಂದಿಗೆ ಶಾಂತಿಯುತ ಹಾಗೂ ಭಯಮುಕ್ತ ಮತದಾನಕ್ಕಾಗಿ ಎಲ್ಲ ಕ್ಷೇತ್ರಗಳಲ್ಲಿ ಯೋಧರ ಮುಂದಾಳತ್ವದಲ್ಲಿ ಕ್ಯಾಂಡಲ್‌ ಲೈಟ್‌ ಫ‌ತ ಸಂಚಲನ ನಡೆಸಲಾಯಿತು. ಇದರೊಂದಿಗೆ ನಗರದ ಜನರಿಗೆ ಮತದಾನ ಮಾಡುವಂತೆ ಕೋರುವ ಉದ್ದೇಶದಿಂದ ಹಲವ ವಾಕಥಾನ್‌ ನಡೆಸಲಾಯಿತು. ಆದರೆ, ಕಳೆದ ಬಾರಿಗಿಂತಲೂ ಶೇ.3ರಷ್ಟು ಮತದಾನ ಕಡಿಮೆಯಾಗಿದ್ದು,

ಕೆಲ ಖಾಸಗಿ ಹೋಟೆಲ್‌ಗ‌ಳು ಸ್ವಯಂ ಪ್ರೇರಿತರಾಗಿ ಮತ ಚಲಾಯಿಸಿದವರಿಗೆ ರಿಯಾಯ್ತಿ ನೀಡುವುದಾಗಿ ತಿಳಿಸಿದರೂ ಪ್ರಾಯೋಜನವಾಗಿಲ್ಲ. ಬಿಬಿಎಂಪಿ ಸೇರಿದಂತೆ ಬೆಂಗಳೂರು ನಗರ ಜಿಲ್ಲೆಯಲ್ಲಿ ಒಟ್ಟಾರೆ ಶೇ. 54.72ರಷ್ಟು ಮತದಾನವಾಗಿದೆ. ಈ ಪೈಕಿ ಆನೇಕಲ್‌ ಕ್ಷೇತ್ರದಲ್ಲಿ ಅತಿ ಹೆಚ್ಚು ಅಂದರೆ ಶೇ. 63.99ರಷ್ಟು ಮತದಾನವಾಗಿದ್ದರೆ, ದಾಸರಹಳ್ಳಿಯಲ್ಲಿ ಅತಿ ಕಡಿಮೆ ಅಂದರೆ ಶೇ. 48.03ರಷ್ಟು ಮಂದಿ ಮಾತ್ರ ತಮ್ಮ ಹಕ್ಕು ಚಲಾಯಿಸಿದ್ದಾರೆ.

ಕ್ಷೇತ್ರವಾರು ಅಂತಿಮ ಮತದಾನ ಪ್ರಮಾಣ
ಕ್ಷೇತ್ರ    ಪ್ರಮಾಣ (ಶೇಡವಾರು)

ಶಿವಾಜಿನಗರ    ಶೇ. 54.10
ಶಾಂತಿನಗರ    ಶೇ. 55.12
ಗಾಂಧಿನಗರ    ಶೇ. 55.38
ರಾಜಾಜಿನಗರ    ಶೇ. 57.10
ಚಾಮರಾಜಪೇಟೆ    ಶೇ. 54.33
ಚಿಕ್ಕಪೇಟೆ    ಶೇ. 57.66
ಕೆ.ಆರ್‌.ಪುರ    ಶೇ. 53.08
ಮಹಾಲಕ್ಷ್ಮೀ ಬಡಾವಣೆ    ಶೇ. 54.72
ಮಲ್ಲೇಶ್ವರ    ಶೇ. 56.29
ಹೆಬ್ಟಾಳ    ಶೇ. 54.98
ಪುಲಿಕೇಶಿನಗರ    ಶೇ. 53.24
ಸರ್ವಜ್ಞನಗರ    ಶೇ. 51.19
ಸಿ.ವಿ.ರಾಮನ್‌ ನಗರ    ಶೇ. 48.98
ಗೋವಿಂದರಾಜನಗರ    ಶೇ. 53.91
ವಿಜಯನಗರ    ಶೇ. 55
ಬಸವನಗುಡಿ    ಶೇ. 52.80
ಪದ್ಮನಾಭನಗರ    ಶೇ. 53
ಬಿಟಿಎಂ ಬಡಾವಣೆ    ಶೇ. 50.09
ಬೊಮ್ಮನಹಳ್ಳಿ    ಶೇ. 52
ಯಲಹಂಕ    ಶೇ. 63.01
ಬ್ಯಾಟರಾಯನಪುರ    ಶೇ. 57.39
ಯಶವಂತಪುರ    ಶೇ. 60.19
ದಾಸರಹಳ್ಳಿ    ಶೇ. 48.03
ಮಹದೇವಪುರ    ಶೇ. 55
ಬೆಂಗಳೂರು ದಕ್ಷಿಣ    ಶೇ. 53.17
ಆನೇಕಲ್‌    ಶೇ. 63.99

ಟಾಪ್ ನ್ಯೂಸ್

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.