Fraud: ಸೆಕೆಂಡ್ ಹ್ಯಾಂಡ್ ಕಾರು ಕೊಡಿಸುವುದಾಗಿ ವೈದ್ಯನಿಗೆ ಮಹಿಳೆಯಿಂದ 6 ಕೋಟಿ ವಂಚನೆ
Team Udayavani, Feb 8, 2024, 1:01 PM IST
ಬೆಂಗಳೂರು: ಕಾಸ್ಮೆಟಿಕ್ ಸರ್ಜರಿಗೆ ಬಂದ ಮಹಿಳೆಯೊಬ್ಬರು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರಿಗೆ ಸೆಕೆಂಡ್ ಹ್ಯಾಂಡ್ ಐಷಾರಾಮಿ ಕಾರು ಕೊಡಿಸುವುದಾಗಿ ನಂಬಿಸಿ ಬರೋಬರಿ 6.02 ಕೋಟಿ ರೂ. ಪಡೆದು ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.
ವಿಜಯನಗರದ ನಿವಾಸಿ ಡಾ.ಗಿರೀಶ್ ಎಂಬವರು ನೀಡಿದ ದೂರಿನ ಮೇರೆಗೆ ರಾಜರಾಜೇಶ್ವರಿನಗರದ ಬಿಇಎಂಎಲ್ ಲೇಔಟ್ ನಿವಾಸಿ ಐಶ್ವರ್ಯಗೌಡ(32) ಎಂಬಾಕೆ ವಿರುದ್ಧ ವಂಚನೆ ಆರೋಪದಡಿ ವಿಜಯನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ಮುಂದುವರಿಸಿದ್ದಾರೆ.
2022ರ ಮಾರ್ಚ್ನಲ್ಲಿ ಕಾಸ್ಮೆಟಿಕ್ ಸರ್ಜರಿ ಮಾಡಿಸಿಕೊಳ್ಳಲು ಡಾ.ಗಿರೀಶ್ ಅವರ ಆಸ್ಪತ್ರೆಗೆ ಐಶ್ವರ್ಯ ಗೌಡ ಬಂದಿದ್ದರು. ಆ ನಂತರದ ದಿನಗಳಲ್ಲಿ ತಾನು ರಿಯಲ್ ಎಸ್ಟೇಟ್ ಫೈನಾನ್ಸ್ ವ್ಯವಹಾರದ ಜತೆಗೆ ಸೆಕೆಂಡ್ ಹ್ಯಾಂಡ್ ಐಷಾರಾಮಿ ಕಾರುಗಳ ವ್ಯವಹಾರ ನಡೆಸುತ್ತಿದ್ದೇನೆ ಎಂದು ತಿಳಿಸಿದ್ದಳು. ಐಷಾರಾಮಿ ಕಾರನ್ನು ಖರೀದಿಸಲು ಯೋಚಿಸುತ್ತಿದ್ದ ಗಿರೀಶ್, ಕೆಲ ದಿನಗಳ ಬಳಿಕ ಆರೋಪಿಯನ್ನು ಸಂಪರ್ಕಿಸಿದ್ದರು. ಈ ವೇಳೆ ಕಡಿಮೆ ಬೆಲೆಗೆ ಕಾರು ಕೊಡಿಸುವುದಾಗಿ ನಂಬಿಸಿದ್ದ ಆಕೆ 2.75 ಕೋಟಿ ರೂ. ಅನ್ನು ಆನ್ಲೈನ್ ಆರ್ಟಿಜಿಎಸ್ ಮೂಲಕ ಮತ್ತು 3.25 ಕೋಟಿ ರೂ.ಅನ್ನು ನಗದಾಗಿ ಪಡೆದುಕೊಂಡಿದ್ದಳು. ಆದರೆ, ಕಾರನ್ನು ಕೊಡಿಸಿರಲಿಲ್ಲ. ಹಣ ವಾಪಸ್ ಕೊಡುವಂತೆ ಕೇಳಿದಾಗ ಸಬೂಬುಗಳನ್ನು ಹೇಳಿ, ದಿನದೂಡುತ್ತಿದ್ದಳು. 2023ರ ಡಿಸೆಂಬರ್ನಲ್ಲಿ ಹಣ ಹಿಂದಿರುಗಿಸುವಂತೆ ಕೇಳಿದಾಗ ವಿಜಯನಗರ ಕ್ಲಬ್ ಬಳಿ ಬರಲು ಸೂಚಿಸಿದ್ದಾಳೆ. ಅದರಂತೆ ಗಿರೀಶ್ ಮತ್ತು ಅವರ ಪತ್ನಿ ಕ್ಲಬ್ ಬಳಿ ಹೋದಾಗ, ಅವಾಚ್ಯವಾಗಿ ನಿಂದಿಸಿ, ಇದೇ ರೀತಿ ಹಣ ವಾಪಸ್ ಕೇಳಿದರೆ ನಿನ್ನ ವಿರುದ್ಧ ಅತ್ಯಾಚಾರದ ಸುಳ್ಳು ದೂರು ಕೊಡುತ್ತೇನೆ ಎಂದು ಬೆದರಿಸಿದ್ದಾಳೆ. ಅಲ್ಲದೆ ವಿಷಯವನ್ನು ಕೈ ಬಿಡಬೇಕಾದರೆ ಮತ್ತೆ 5 ಲಕ್ಷ ರೂ. ನೀಡುವಂತೆ ಬೆದರಿಕೆ ಹಾಕಿ 2 ಲಕ್ಷ ರೂ. ಸುಲಿಗೆ ಮಾಡಿದ್ದಾಳೆ ಎಂದು ವೈದ್ಯ ಗಿರೀಶ್ ದೂರಿನಲ್ಲಿ ಆರೋಪಿಸಿದ್ದಾರೆ. ತನಿಖೆ ಮುಂದುವರಿದಿದೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
Bengaluru: ಇನ್ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್; ಅಪರಿಚಿತನ ಮೇಲೆ ಕೇಸು
Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ
Bengaluru: ಬ್ರೇಕ್ ಬದಲು ಆ್ಯಕ್ಸಿಲೇಟರ್ ಒತ್ತಿದ ಆ್ಯಂಬುಲೆನ್ಸ್ ಚಾಲಕ: ಸರಣಿ ಅಪಘಾತ
Bengaluru: ಬಿಸಿಲು; ಹೋಟೆಲ್ ವ್ಯಾಪಾರ ಶೇ.30 ಕುಸಿತ
MUST WATCH
ಹೊಸ ಸೇರ್ಪಡೆ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Bengaluru: ಇನ್ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್; ಅಪರಿಚಿತನ ಮೇಲೆ ಕೇಸು
Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ
Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ