5 ತಿಂಗಳಲ್ಲಿ 63.91ಲಕ್ಷ ರೂ. ದಂಡ ಸಂಗ್ರಹ


Team Udayavani, Jan 26, 2020, 3:09 AM IST

5tinga

ಬೆಂಗಳೂರು: ಸ್ವಚ್ಛ ನಗರ ಪಟ್ಟಿಯಲ್ಲಿ ಉತ್ತಮ ಸ್ಥಾನ ಪಡೆಯಲು ಬಿಬಿಎಂಪಿ ಸ್ವಚ್ಛ ಸರ್ವೆಕ್ಷಣ್‌ ಅಭಿಯಾನ ಮಾಡುತ್ತಿದ್ದರೆ ಅದಕ್ಕೆ ಪೂರಕವಾಗಿ ಸಾರ್ವಜನಿಕರ ಸ್ಪಂದನೆ ಸಿಗುತ್ತಿಲ್ಲ. ಸಾಕಷ್ಟು ಜಾಗೃತಿಯ ನಂತರವೂ ರಸ್ತೆಗೆ ಕಸ ಎಸೆಯುವುದು, ಮನೆಗಳಲ್ಲಿ ಸಂಗ್ರಹವಾಗುವ ಹಸಿ ಹಾಗೂ ಒಣ ಕಸ ಬೇರ್ಪಡಿಸದೆ ಮಿಶ್ರ ಕಸ ನೀಡುವುದು ನಿಂತಿಲ್ಲ.

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ಹಾಕಲು ಮಾರ್ಷಲ್‌ಗ‌ಳನ್ನು ನೇಮಿಸಿದ್ದರೂ ಪ್ರಯೋಜನವಾಗಿಲ್ಲ. ಐದು ತಿಂಗಳಲ್ಲಿ ರಸ್ತೆ ಬದಿ ಕಸ ಹಾಕುವವರಿಂದ 63.91 ಲಕ್ಷ ರೂ. ದಂಡ ವಸೂಲಾಗಿರುವುದೇ ಇದಕ್ಕೆ ಸಾಕ್ಷಿ. ಜಾಹೀರಾತು, ಬೀದಿ ನಾಟಕ, ಜಾಗೃತಿ ಜಾಥಾ ಸೇರಿದಂತೆ ವಿವಿಧ ಅಭಿಯಾನ ಮೂಲಕ ಜಾಗೃತಿ ಮೂಡಿಸಿ 2019 ಸೆಪ್ಟೆಂಬರ್‌ನಲ್ಲಿ 198 ವಾರ್ಡ್‌ಗಳಿಗೆ 230ಕ್ಕೂ ಅಧಿಕ ಮಾರ್ಷಲ್‌ಗ‌ಳನ್ನು ನೇಮಿಸಲಾಗಿತ್ತು.

ಮಾರ್ಷಲ್‌ಗ‌ಳು ಬ್ಲಾಕ್‌ಸ್ಪಾಟ್‌ ತಡೆಗಟ್ಟಲು ಹಾಗೂ ಸಮರ್ಪಕ ಕಸ ವಿಲೇವಾರಿಗೆ ವಾರ್ಡ್‌ಗಳಲ್ಲಿ ಸಂಚರಿಸಿ ದಂಡ ಹಾಕಲು ಆರಂಭಿಸಿದ್ದು, ಪ್ರತಿ ತಿಂಗಳು ಸಾವಿರಾರು ಜನರಿಗೆ ದಂಡ ಹಾಕುವ ಮೂಲಕ ಬಿಸಿ ಮುಟ್ಟಿಸುತ್ತಿ ದ್ದಾರೆ. ಈ ಮೊದಲು ನಗರದಲ್ಲಿ ಸುಮಾರು 1350 ಬ್ಲಾಕ್‌ಸ್ಪಾಟ್‌ಗಳಿದ್ದು, ಮಾರ್ಷಲ್‌ಗ‌ಳು ದಂಡ ವಿಧಿಸುವುದರಿಂದಾಗಿ ಆರು ತಿಂಗಳಲ್ಲಿ 550ಕ್ಕೂ ಅಧಿಕ ಬ್ಲಾಕ್‌ಸ್ಪಾಟ್‌ಗಳು ಕಡಿಮೆಯಾಗಿವೆಯಾದರೂ ನಿರೀಕ್ಷಿತ ಪ್ರಮಾಣದಲ್ಲಿ ಪಾಲಿಕೆಯ ಉದ್ದೇಶ ಸಾಕಾರವಾಗಿಲ್ಲ.

ಎಲೆಕ್ಟ್ರಾನಿಕ್‌ ಯಂತ್ರ ವಿತರಣೆ: ಐದು ತಿಂಗಳಿಂದ ಮಾರ್ಷಲ್‌ಗ‌ಳು ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಿ ಚಲನ್‌ ನೀಡುತ್ತಿದ್ದರು. ಇದೀಗ ಅವರಿಗೆ ದಂಡ ವಸೂಲು ಮಾಡಲು ಎಲೆಕ್ಟ್ರಾನಿಕ್‌ ಯಂತ್ರ ವಿತರಣೆ ಮಾಡಲು ಪಾಲಿಕೆ ಮುಂದಾಗಿದೆ. ಫೆಬ್ರವರಿಯಲ್ಲಿ ಎಲ್ಲ ಮಾರ್ಷಲ್‌ಗ‌ಳ ಕೈಗೆ ಈ ಯಂತ್ರ ಸೇರಲಿದೆ. ಜತೆಗೆ, 198 ವಾರ್ಡ್‌ಗಳಲ್ಲಿ ಶೇ. 20ಕ್ಕೂ ಅಧಿಕ ವಾರ್ಡ್‌ಗಳ ವ್ಯಾಪ್ತಿ ದೊಡ್ಡದಿದ್ದು, ಒಬ್ಬರೇ ಮಾರ್ಷಲ್‌ ವಾರ್ಡ್‌ ಪೂರ್ತಿ ಸಂಚರಿಸುವುದು ತೊಂದರೆಯಾಗುವುದರಿಂದ ಹೆಚ್ಚುವರಿ 50ಕ್ಕೂ ಅಧಿಕ ಮಾರ್ಷಲ್‌ಗ‌ಳ ನೇಮಕದ ಬಗ್ಗೆ ಪ್ರಸ್ತಾಪವಿದೆ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.

ಮಾರ್ಷಲ್‌ಗ‌ಳು ದಾಖಲಿಸಿದ ಪ್ರಕರಣ, ಸಂಗ್ರಹಿಸಿರುವ ದಂಡ?
ತಿಂಗಳು ಪ್ರಕರಣ ಸಂಗ್ರಹ
ಸೆಪ್ಟೆಂಬರ್‌ 1959 14,33,495
ಅಕ್ಟೋಬರ್‌ 2370 12,13,110
ನವೆಂಬರ್‌ 2887 13,91,195
ಡಿಸೆಂಬರ್‌ 813 10,52,260
ಜನವರಿ(22) 1278 13,01,640
ಒಟ್ಟು 9,307 63,91,700

ಕಸ ರಸ್ತೆಗೆ ಎಸೆಯದಂತೆ, ಕಸ ವಿಂಗಡಿಸುವ ಬಗ್ಗೆ ನಿರಂತರ ಜಾಗೃತಿ ಮೂಡಿಸಲಾಗುತ್ತಿದೆ. ಆದರೂ, ಬ್ಲಾಕ್‌ಸ್ಪಾರ್ಟ್‌ಗಳು ನಿರ್ಮಾಣವಾಗುತ್ತಿದ್ದು, ನಿಯಮ ಉಲ್ಲಂಘಿಸಿ ಕಸ ರಸ್ತೆ ಬದಿ ಹಾಕಿದರೆ ದಂಡ ವಿಧಿಸಲು ಆರಂಭಿಸಲಾಗಿದೆ.
-ರಂದೀಪ್‌, ವಿಶೇಷ ಆಯುಕ್ತ (ಘನತ್ಯಾಜ್ಯ)

* ಮಂಜುನಾಥ ಗಂಗಾವತಿ

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.