ನಂದಿನಿ ಹಾಲಿನಲ್ಲಿ ಎ, ಡಿ ವಿಟಮಿನ್ಸ್‌


Team Udayavani, Jul 31, 2019, 3:06 AM IST

nandibni

ಬೆಂಗಳೂರು: ಜನಸಾಮಾನ್ಯರಲ್ಲಿ ಹೆಚ್ಚುತ್ತಿರುವ ವಿಟಮಿನ್‌ ಎ ಮತ್ತು ಡಿ ಕೊರತೆಯನ್ನು ನೀಗಿಸುವ ನಿಟ್ಟಿನಲ್ಲಿ ಕೆಎಂಎಫ್ ತನ್ನ ಎಲ್ಲಾ ಮಾದರಿಯ ಹಾಲಿನಲ್ಲಿ ವಿಟಮಿನ್‌ ಎ ಮತ್ತು ಡಿ ಸಾರವರ್ಧನೆ ಮಾಡಿದೆ. ಕರ್ನಾಟಕ ಹಾಲು ಮಹಾಮಂಡಳಿ (ಕೆಎಂಎಫ್)ಕೇಂದ್ರ ಕಚೇರಿಯಲ್ಲಿ ಮಂಗಳವಾರ ವಿಟಮಿನ್‌ ಎ ಮತ್ತು ಡಿ ಸಾರವರ್ಧನೆಗೊಂಡ ನಂದಿನಿ ಹಾಲಿನ ನೂತನ ಪ್ಯಾಕೆಟ್‌ಗಳನ್ನು ಜಯದೇವ ಹೃದ್ರೋಗ ವಿಜ್ಞಾನ ಹಾಗೂ ಸಂಶೋಧನ ಸಂಸ್ಥೆಯ ನಿರ್ದೇಶಕ ಡಾ.ಸಿ.ಎನ್‌.ಮಂಜುನಾಥ್‌ ಬಿಡುಗಡೆಗೊಳಿಸಿದರು.

ಜನರಲ್ಲಿ ಆರೋಗ್ಯ ಸಮಸ್ಯೆ: ಈ ವೇಳೆ ಮಾತನಾಡಿದ ಅವರು, ಜನರ ಜೀವನ ಶೈಲಿ ಬದಲಾಗಿ ಸೂರ್ಯನ ಕಿರಣಗಳು ದೇಹದ ಮೇಲೆ ಬೀಳುತ್ತಿಲ್ಲ. ಹೀಗಾಗಿ, ಮಕ್ಕಳನ್ನು ಸೇರಿದಂತೆ ಎಲ್ಲ ವಯೋಮಾನದವರು ವಿಟಮಿನ್‌ ಡಿ ಕೊರತೆಯಿಂದ ಬಳಲಿ ಮೂಳೆ ಸಮಸ್ಯೆಗೆ ತುತ್ತಾಗುತ್ತಿದ್ದಾರೆ. ಇತ್ತೀಚೆಗೆ ಜಯದೇವ ಸಂಸ್ಥೆಯಿಂದ ನಡೆಸಿದ ಸಂಶೋಧನೆಯಲ್ಲಿ ವಿಟಮಿನ್‌ ಡಿ ಕೊರತೆಯಿಂದ ಮೂಳೆ ಸಮಸ್ಯೆ ಮಾತ್ರವಲ್ಲದೇ ಹೃದ್ರೋಗ, ರಕ್ತದ ಒತ್ತಡ, ಮಧುಮೇಹ ಬರುತ್ತದೆ ಎಂದು ತಿಳಿದುಬಂದಿದೆ.

ಹೀಗಾಗಿ, ಬಮೂಲ್‌ಗೆ ಕೆಲ ವರ್ಷಗಳ ಹಿಂದೆ ಪತ್ರ ಬರೆದು ಜನ ಸಾಮಾನ್ಯರಿಗೆ ಹಾಲಿನ ಮೂಲಕ ಡಿ ವಿಟಮಿನ್‌ ಪೂರೈಸುವ ಕುರಿತು ಪ್ರಸ್ತಾಪಿಸಿದೆ. ಸದ್ಯ ಈ ಕಾರ್ಯಕ್ಕೆ ಕೆಎಂಎಫ್ ಮುಂದಾಗಿರುವುದು ಸಂತಸದ ವಿಚಾರ. ವಿಟಮಿನ್‌ ಡಿ ಜತೆಗೆ ವಿಟಮಿನ್‌ ಎ ಕೂಡಾ ಸೇರಿಸಿರುವುದರಿಂದ ಕಣ್ಣಿನ ದೃಷ್ಟಿಗೆ ನೆರವಾಗಲಿದೆ ಎಂದು ಹೇಳಿದರು.

ಉತ್ತಮ ನಡೆ: ಭಾರತದಲ್ಲಿ ಶೇ.50ರಷ್ಟು ಜನ ಜೀವನ ಶೈಲಿ ಬದಲಾವಣೆ, ಶೇ.25ರಷ್ಟು ಜನ ಹೃದ್ರೋಗ ಸಮಸ್ಯೆಯಿಂದ ಸಾವಿಗೀಡಾಗುತ್ತಿದ್ದಾರೆ. ಸದ್ಯ ಭಾರತದಲ್ಲಿ ಶೇ.40 ರಷ್ಟು ಜನರಿಗೆ ಅಧಿಕ ರಕ್ತದೊತ್ತಡ ಸಮಸ್ಯೆ ಇದೆ. ಹಾಲೆಂಡ್‌, ಕೆನಡಾ, ಅಮೆರಿಕ ದೇಶಗಳಲ್ಲಿ ಬಹಳ ವರ್ಷಗಳಿಂದಲೇ ಹಾಲಿನಲ್ಲಿ ಡಿ ವಿಟಮಿನ್‌ ಪೂರೈಕೆ ಮಾಡಲಾಗುತ್ತಿದೆ. ಭಾರತದಲ್ಲೂ ಈ ಪ್ರವೃತ್ತಿ ಆರಂಭವಾಗಿರುವುದು ಜನರ ಆರೋಗ್ಯ ದೃಷ್ಟಿಯಿಂದ ಉತ್ತಮ ನಡೆ ಎಂದು ತಿಳಿಸಿದರು.

ಕರ್ನಾಟಕ ಹಾಲು ಮಹಾಮಂಡಳಿ ಮಾರುಕಟ್ಟೆ ವಿಭಾಗದ ನಿರ್ದೇಶಕ ಮೃತ್ಯುಂಜಯ ಟಿ.ಕುಲಕರ್ಣಿ ಮಾತನಾಡಿ, ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ವರದಿ ಹಾಗೂ ರಾಷ್ಟ್ರೀಯ ಪೋಷಕಾಂಶ ನಿರ್ವಹಣಾ ಪ್ರಾಧಿಕಾರದ ಸಮೀಕ್ಷೆ ಪ್ರಕಾರ ದೇಶದಲ್ಲಿ ಶೇ.70 ರಿಂದ 80 ರಷ್ಟು ಜನರು ವಿಟಮಿನ್‌ ಎ ಮತ್ತು ಡಿ ಜೀವಸತ್ವಗಳ ಕೊರತೆಯಿಂದ ಬಳಲುತ್ತಿದ್ದಾರೆ. ಪ್ರಸ್ತುತ ಜೀವನ ಶೈಲಿಯಿಂದ ನಿಯಮಿತವಾಗಿ ಎ ಮತ್ತು ಡಿ ವಿಟಮಿನ್‌ಗಳನ್ನು ಪಡೆಯಲು ಜನಸಾಮಾನ್ಯರಿಗೆ ಸಾಧ್ಯವಾಗುತ್ತಿಲ್ಲ.

ಹೀಗಾಗಿ, ಎಲ್ಲಾ ವಯೋಮಾನ ಜನರು ನಿತ್ಯ ಬಳಸುವ ಹಾಲಿನಲ್ಲಿ ವಿಟಮಿನ್‌ ಪೂರೈಕೆ ಮಾಡಲು ಭಾರತ ಆಹಾರ ಸುರಕ್ಷತೆ ಹಾಗೂ ಮಾನದಂಡಗಳ ಪ್ರಾಧಿಕಾರ ಮುಂದಾಗಿದೆ. ಪ್ರಾಧಿಕಾರದ ಸೂಚನೆ ಹಾಗೂ ಮಾರ್ಗದರ್ಶನದಲ್ಲಿ ರಾಷ್ಟ್ರದ 2ನೇ ಅತೀ ದೊಡ್ಡ ಸಹಕಾರಿ ಹಾಲು ಮಹಾ ಮಂಡಳಿ ಕೆ.ಎಂಎಫ್ನಿಂದಲೇ ನಿತ್ಯ ಪೂರೈಕೆಯಾಗುವ ನಂದಿನಿ ಹೆಸರಿನ ಎಲ್ಲಾ ಮಾದರಿಯ ಹಾಲಿನಲ್ಲಿ ಎ ಮತ್ತು ಡಿ ವಿಟಮಿನ್‌ ಸಾರವರ್ಧನೆ ಮಾಡಲಾಗಿದೆ ಎಂದು ತಿಳಿಸಿದರು.

ಸಾಮಾಜಿಕ ಹೊಣೆಗಾರಿಕೆ: ನಿತ್ಯ 45 ಲಕ್ಷ ಲೀಟರ್‌ ಹಾಲನ್ನು ಕೆಎಂಎಫ್ ಮಾರಾಟ ಮಾಡುತ್ತಿದ್ದು, ಅಷ್ಟು ಪ್ರಮಾಣದ ಹಾಲಿನಲ್ಲೂ ವಿಟಮಿನ್‌ ಸೇರಲಿದೆ. ಮುಂದಿನ ದಿನಗಳಲ್ಲಿ ಹಾಲಿನ ಉತ್ಪನ್ನಗಳಲ್ಲೂ ಜೀವಸತ್ವ ಸೇರಿಸಲು ಸಂಶೋಧನೆ ನಡೆಸಲಾಗುತ್ತಿದೆ. ವಿಟಮಿನ್‌ ಸೇರ್ಪಡೆಯಿಂದ ಪ್ರತಿ ಲೀ. ಹಾಲಿಗೆ 3 ರಿಂದ 4 ಪೈಸೆ ಹೆಚ್ಚುವರಿ ವೆಚ್ಚ ತಗುಲಲಿದೆ. ಗ್ರಾಹಕರಿಗೆ ಹೊರೆಯಾಗಬಾರದು ಎಂದು ಆ ವೆಚ್ಚವನ್ನು ಕೆಎಂಎಫ್ನಿಂದಲೇ ಭರಿಸಲಿದೆ. ಮೊದಲ ಆರು ತಿಂಗಳು ಹಾಲಿಗೆ ವಿಟಮಿನ್‌ ಸೇರಿಸುವ ವೆಚ್ಚವನ್ನು ಭರಿಸಲು ಕಾರ್ಪೊರೇಟ್‌ ಸಾಮಾಜಿಕ ಹೊಣೆಗಾರಿಕೆ ಚಟುವಟಿಕೆಯಲ್ಲಿ ಟಾಟಾ ಟ್ರಸ್ಟ್‌ ಕೆಎಂಎಫ್ ಜತೆ ಕೈಜೋಡಿಸಿದೆ ಎಂದರು.

ಸಿರಿಧಾನ್ಯ ಲಡ್ಡು, ಸಿರಿಧಾನ್ಯ ಶಕ್ತಿ ಬಿಡುಗಡೆ: ಎಲ್ಲೆಡೆ ಸಿರಿಧಾನ್ಯ ಬೇಡಿಕೆ ಹೆಚ್ಚಾಗಿರುವುದರಿಂದ ಕೆಎಂಎಫ್ ನೂತನವಾಗಿ ಸಿರಿಧಾನ್ಯ ಉತ್ಪನ್ನಗಳನ್ನು ಸಿದ್ಧಪಡಿಸಿದೆ. ಸಿರಿಧಾನ್ಯದಿಂದ ತಯಾರಿಸಿದ ನಂದಿನಿ ಲಡ್ಡು, ಸಿರಿಧಾನ್ಯ ಫೌಡರ್‌ “ನಂದಿನಿ ಶಕ್ತಿ’ ಇದೇ ವೇಳೆ ಬಿಡುಗಡೆ ಮಾಡಲಾಯಿತು. “ಮತ್ತೆ ಹಿಂದಿನ ಆಹಾರ ಪದ್ಧತಿ ರೂಢಿಗೆ ಬರುತ್ತಿದ್ದು, ಸಿರಿಧಾನ್ಯ ಸೇವನೆ ಹೆಚ್ಚಾಗಿದೆ. ಸಿರಿಧಾನ್ಯ ಸೇವನೆಯು ದೇಹದಲ್ಲಿ ಗ್ಲೂಕೋಸ್‌ ಬಿಡುಗಡೆ ಅವಧಿ ನಿಧಾನವಾಗಿಸುತ್ತದೆ. ಮಧುಮೇಹ ಹತೋಟಿಗೆ ಸಹಕಾರಿಯಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.