ವೃತ್ತಿ ಸಂಹಿತೆ ಇಲ್ಲದ ವೈದ್ಯಕೀಯ ಕ್ಷೇತ್ರ


Team Udayavani, Mar 6, 2017, 12:03 PM IST

ramesh-kumar.jpg

ಬೆಂಗಳೂರು: “ವೈದ್ಯಕೀಯ ಕ್ಷೇತ್ರದಲ್ಲಿ ವೃತ್ತಿ ಸಂಹಿತೆ ಕೊರತೆಯಿದ್ದು ಹಿರಿಯ ವೈದ್ಯರು ಕಿರಿಯರಿಗೆ ಈ ಬಗ್ಗೆ ತಿಳಿವಳಿಕೆ ನೀಡುವ ಅಗತ್ಯವಿದೆ,” ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಕೆ.ಆರ್‌. ರಮೇಶ್‌ ಕುಮಾರ್‌ ತಿಳಿಸಿದ್ದಾರೆ.

ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಭಾನುವಾರ ಹೋಮಿಯೊಪತಿ ವೈದ್ಯ ಡಾ.ಬಿ.ಟಿ. ರುದ್ರೇಶ್‌ ಅವರ “ಡಾ.ಬಿ.ಟಿ. ರುದ್ರೇಶ್‌ ಡೈರಿ’ ಬಿಡುಗಡೆ ಮಾಡಿ ಮಾತನಾಡಿದ ಅವರು,  “ಆಸ್ಪತ್ರೆಯಲ್ಲಿ ರೋಗಿ ಸಾವನ್ನಪ್ಪಿದರೆ, ಪೂರ್ತಿ ಹಣ ಪಾವತಿಸುವವರೆಗೂ ಮೃತ ದೇಹ ಕೊಡುವುದಿಲ್ಲ ಎಂದು ಹೇಳುವ ಮಟ್ಟಿಗೆ ವೈದ್ಯಕೀಯ ಕ್ಷೇತ್ರದಲ್ಲಿ ವೃತ್ತಿ ಸಂಹಿತೆ ಕುಸಿದಿದೆ,” ಎಂದು ಅವರು ಬೇಸರ ವ್ಯಕ್ತಪಡಿಸಿದರು.  

“ಜನ ಸಾಮಾನ್ಯರಲ್ಲಿ ತಿಳಿವಳಿಕೆ ಕೊರತೆ ಇರುವುದನ್ನೆ ದುರ್ಬಳಕೆ ಮಾಡಿಕೊಳ್ಳುವವರು ವೈದ್ಯ ವೃತ್ತಿಗೆ ನಾಲಾಯಕ್ಕು. ಇಂಥವರು ವೈದ್ಯಕೀಯ ಪದವೀಧರರಷ್ಟೇ ಹೊರತು, ವೈದ್ಯರಲ್ಲ,” ಎಂದು ಆಕ್ರೋಶ ವ್ಯಕ್ತಪಡಿಸಿದರು.  “ವೈದ್ಯಕೀಯ ಕ್ಷೇತ್ರದಲ್ಲಿ ಇಂದು ಸಾಕಷ್ಟು ಸಂಶೋಧನೆಗಳು, ಅನ್ವೇಷಣೆಗಳು ನಡೆದಿವೆ. ಆದರೆ, ಅವು ರೋಗಿಗಳಿಗೆ ಎಟುಕದೆ ಹೋದರೆ ಏನು ಪ್ರಯೋಜನ. ಬರೀ ಲಾಭ-ನಷ್ಟ ಲೆಕ್ಕಾಚಾರವೇ ವೃತ್ತಿ ಆಗಬಾರದು,” ಎಂದರು.

“ಒಂದೆಡೆ ಎಂಬಿಬಿಎಸ್‌ ವೈದ್ಯರು ಹಳ್ಳಿಗಳಿಗೆ ಹೋಗುವುದಿಲ್ಲ ಎನ್ನುತ್ತಾರೆ. ಮತ್ತೂಂದೆಡೆ ಇತರೆ ವೈದ್ಯ ಪದ್ಧತಿಗಳನ್ನು ಅನುಸರಿಸುತ್ತಿರುವ ವೈದ್ಯರನ್ನು ನಿಯೋಜಿಸಲಿಕ್ಕೂ ಬಿಡುತ್ತಿಲ್ಲ. ಹಾಗಾದರೆ, ಹಳ್ಳಿಯ ರೋಗಿಗಳು ಎಲ್ಲಿಗೆ ಹೋಗಬೇಕು ಎಂದು ಪ್ರಶ್ನಿಸಿದ ಅವರು, ವೈದ್ಯರ ಈ ಮನಃಸ್ಥಿತಿ ಬದಲಾಗಬೇಕು. ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು,” ಎಂದು ಕಿವಿಮಾತು ಹೇಳಿದರು. 

ಸಾಹಿತಿ ಡಾ.ಚಂದ್ರಶೇಖರ ಕಂಬಾರ ಮಾತನಾಡಿ, “ಸಾವನ್ನು ನೇರವಾಗಿ ಎದುರಿಸುವವರು ವೈದ್ಯ ಮಾತ್ರ. ಆದ್ದರಿಂದ ಸಾವಿನ ಜತೆಗೆ ಹೋರಾಡುತ್ತಿರುವ ರೋಗಿಯ ಕಾಯಿಲೆಯನ್ನು ಸವಾಲಾಗಿ ಸ್ವೀಕರಿಸಿ ಗುಣಪಡಿಸುವುದು ನಿಜವಾದ ವೈದ್ಯನ ಕರ್ತವ್ಯ,” ಎಂದು ತಿಳಿಸಿದರು. “ನಮಗೆ ಗೊತ್ತಿಲ್ಲದೆ ವೈದ್ಯಕೀಯ ಕ್ಷೇತ್ರದಲ್ಲಿ ಮತ್ತೂಂದು ಪರ್ಯಾಯ ಇದೆ ಎಂಬುದನ್ನು ತೋರಿಸಿಕೊಟ್ಟವರು ಡಾ.ಬಿ.ಟಿ. ರುದ್ರೇಶ್‌.

ಸಾವಿನ ಜತೆ ಗಂಭೀರ ಸಂಭಾಷಣೆಯಲ್ಲಿ ತೊಡಗಿರುವ ವೈದ್ಯ ಡಾ.ರುದ್ರೇಶ್‌. 20 ಲಕ್ಷಕ್ಕೂ ಅಧಿಕ ರೋಗಿಗಳಿಗೆ ಅವರು ಚಿಕಿತ್ಸೆ ನೀಡಿದ್ದಾರೆ. ಆ ಪೈಕಿ 16 ಸಂಗತಿಗಳನ್ನು ಮಾತ್ರ ಅವರ ಪುಸ್ತಕದಲ್ಲಿ ಕಾಣಬಹುದು. ಹಾಗಾಗಿ, ಇವು ಅತ್ಯಂತ ಅಪರೂಪದ ಸಂಗತಿಗಳಾಗಿವೆ,” ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಕೇಂದ್ರ ಮಾಜಿ ಸಚಿವ ಎಂ.ವಿ. ರಾಜಶೇಖರನ್‌, ಸಪ್ನ ಬುಕ್‌ ಹೌಸ್‌ ವ್ಯವಸ್ಥಾಪಕ ನಿರ್ದೇಶಕ ನಿತಿನ್‌ ಷಾ ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

vJune 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

June 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

Bengaluru: ಬರ್ತ್ ಡೇ ಹೆಸರಲ್ಲಿ ಮಾಡೆಲ್, ಟೆಕ್ಕಿಗಳ ರೇವ್ ಪಾರ್ಟಿ; ಸಿಸಿಬಿ ಪೊಲೀಸರ ದಾಳಿ

Bengaluru: ಬರ್ತ್ ಡೇ ಹೆಸರಲ್ಲಿ ಮಾಡೆಲ್, ಟೆಕ್ಕಿಗಳ ರೇವ್ ಪಾರ್ಟಿ; ಸಿಸಿಬಿ ಪೊಲೀಸರ ದಾಳಿ

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

7

ಇನ್‌ಸ್ಪೆಕ್ಟರ್‌ ಹೆಸರಲ್ಲಿ ಸುಲಿಗೆ: ಬೆಸ್ಕಾಂ ಎಂಜಿನಿಯರ್‌ ಸೆರೆ

Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ

Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

2-bng

Bengaluru ನಗರದಲ್ಲಿ ಮತ್ತೆ ರೇವ್‌ ಪಾರ್ಟಿ ನಶೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.