Crime: ವಾಮಾಚಾರ ಮಾಡಿ ಕುಟುಂಬಕ್ಕೆ ಜೀವ ಬೆದರಿಕೆ ಉದ್ಯಮಿಯಿಂದ ಪತ್ನಿ ವಿರುದ್ಧ ಕೇಸ್
Team Udayavani, Sep 6, 2023, 1:31 PM IST
ಬೆಂಗಳೂರು: ವಾಮಾಚಾರ ಮಾಡಿ ಕುಟುಂಬಕ್ಕೆ ಜೀವ ಬೆದರಿಕೆ ಹುಟ್ಟಿಸುತ್ತಿರುವ ಪತ್ನಿ ವಿರುದ್ಧ ಉದ್ಯಮಿಯೊಬ್ಬರು ಕಬ್ಬನ್ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ನಗರದ ಉದ್ಯಮಿ ದೇವ್ ಕುಮಾರ್(39) ಎಂಬವರು ನೀಡಿದ ದೂರಿನ ಮೇರೆಗೆ ಪತ್ನಿ, ವೈದ್ಯೆ ಎಂ.ಪಿ.ಐಶ್ವರ್ಯ, ಅತ್ತೆ ಮಹಾಲಕ್ಷ್ಮೀ ಮತ್ತು ಮಾವ ಮಂಜುನಾಥ್ ವಿರುದ್ಧ ಎಫ್ ಐಆರ್ ದಾಖಲಿಸಿದ್ದಾರೆ.
ದೂರುದಾರ ಉದ್ಯಮಿ ದೇವ್ ಕುಮಾರ್ 2022ರ ಜೂ.1ರಂದು ಐಶ್ವರ್ಯ ಅವರನ್ನು ಮದುವೆಯಾಗಿದ್ದು, 2023ರ ಫೆ.22ರಂದು ಬಿಜಿನೆಸ್ ಟ್ರಿಪ್ ಮುಗಿಸಿಕೊಂಡು ಮನೆಗೆ ಬಂದಿದ್ದಾರೆ. ಆಗ, ಮನೆಯ ಶೌಚಾಲಯದಲ್ಲಿ ಬೂದಿ, ಕರ್ಪೂರ ಹರಡಿರುವುದು ಕಂಡು ಬಂದಿದೆ.
ಅಲ್ಲದೆ, ಪತ್ನಿ ಐಶ್ವರ್ಯ ತಮ್ಮ ಎರಡು ಹೆಬ್ಬರಳನ್ನು ಕತ್ತರಿಸಿಕೊಂಡಿದ್ದರು. ಮನೆಯ ಹಲವು ಕಡೆ ನಿಂಬೆಹಣ್ಣಿನ ತಂಡುಗಳು, ಪೂಜೆ ಮಾಡಿದ ತೆಂಗಿನ ಕಾಯಿಗಳು ಪತ್ತೆಯಾಗಿವೆ. ಈ ಬಗ್ಗೆ ಅನುಮಾನಗೊಂಡು ಖಾಸಗಿ ತನಿಖಾ ಸಂಸ್ಥೆಗೆ ಪತ್ನಿಯ ಮಾಹಿತಿ ಸಂಗ್ರಹಿ ಸಲು ಸೂಚಿಸಲಾಗಿತ್ತು. ಈ ಸಂಸ್ಥೆ ನನ್ನ ಪತ್ನಿ ಐಶ್ವರ್ಯ ಮತ್ತು ಅತ್ತೆ ಮಹಾಲಕ್ಷ್ಮೀ ಅತ್ತಿ ಗುಪ್ಪೆಯ ಜ್ಯೋತಿಷಿ ನಾಗೇಂದ್ರ ಮತ್ತು ಸ್ಮಶಾನದಲ್ಲಿ ಪೂಜೆ ಮಾಡುವ ಬಾಬು ಎಂಬವರನ್ನು ಭೇಟಿಯಾಗಿರುವುದು ಗೊತ್ತಾಗಿದೆ ಎಂದು ದೇವ್ ಕುಮಾರ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಇನ್ನು ಜೂ.22ರಂದು ಪತ್ನಿ ತವರು ಮನೆಯಿಂದ ವಾಪಸ್ ತಮ್ಮ ಮನೆಗೆ ಬಂದಿದ್ದರು. ಆಗ ತಮಗೆ ಕೊಡುವ ಊಟಕ್ಕೆ ವಿವಿಧ ಎಣ್ಣೆ, ಬೂದಿ, ಉಗುಳು ಬೆರೆಯಿಸಿ ನನಗೆ ಮತ್ತು ನನ್ನ ಕುಟುಂಬದವರಿಗೆ ನೀಡುತ್ತಿದ್ದಳು. ಅದರಿಂದ ಗಾಬರಿಗೊಂಡು ಜು.5ರಂದು ಆಕೆಯನ್ನು ತವರು ಮನೆಗೆ ಕಳುಹಿಸಿದ್ದೆ. ಈ ನಡುವೆ ನಮ್ಮ ತಂದೆ ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದಾರೆ. ನಮ್ಮ ಮನೆಯ ನಾಯಿ ಕೂಡ ಸತ್ತಿದೆ. ವಾಮಾಚಾರ ಮಾಡಿ ನನಗೆ ಮತ್ತು ನನ್ನ ಕುಟುಂಬಕ್ಕೆ ಜೀವಭಯ ಹುಟ್ಟಿಸಿರುವ ಪತ್ನಿ ಐಶ್ವರ್ಯ ಹಾಗೂ ಆಕೆ ಪೋಷಕರ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳುವಂತೆ ದೇವ್ ಕುಮಾರ್ ಮನವಿ ಮಾಡಿದ್ದಾರೆ. ತನಿಖೆ ಮುಂದುವರಿದಿದೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!
LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ