ವರ್ತಕರು ಸಹಕರಿಸಿದರೆ ಸ್ವಚ್ಛ ಮಾರುಕಟ್ಟೆ


Team Udayavani, Feb 1, 2019, 6:12 AM IST

vartakaru11.jpg

ಬೆಂಗಳೂರು: ಚೆಲ್ಲಾಪಿಲ್ಲಿಯಾಗಿ ಬಿದ್ದಿರುವ ತ್ಯಾಜ್ಯ ರಾಶಿ, ಮೂಗು ಮುಚ್ಚಿಕೊಂಡು ವ್ಯಾಪಾರ ನಡೆಸುತ್ತಿರುವ ಗ್ರಾಹಕರು, ಕೊಳೆತ ತ್ಯಾಜ್ಯದ ಕೊಳಕು ನೀರು ರಸ್ತೆಯಲ್ಲಿ ಹರಿದ ಪರಿಣಾಮ ಹರಡಿರುವ ದುರ್ವಾಸನೆ, ಜನರಿಗೆ ಓಡಾಡಲೂ ಜಾಗವಿಲ್ಲದಂತೆ ಒತ್ತುವರಿಯಾಗಿರುವ ಪಾದಚಾರಿ ಮಾರ್ಗಗಳು, ಒಮ್ಮೆಲೆ ಜನರ ಕಡೆ ನುಗ್ಗಿ ಹೆದರಿಸುವ ಬೀಡಾಡಿ ಹಸುಗಳು…

ವ್ಯಾಪಾರಿಗಳ ಅಸಡ್ಡೆ ಹಾಗೂ ಅಧಿಕಾರಿಗಳ ವೈಫ‌ಲ್ಯದಿಂದಾಗಿ ರಾಜಧಾನಿ ಬೆಂಗಳೂರಿನಲ್ಲಿ ಮೈಸೂರು ಮಹಾರಾಜರು ನಿರ್ಮಿಸಿದ ಪಾರಂಪರಿಕ ಕೃಷ್ಣರಾಜೇಂದ್ರ ಮಾರುಕಟ್ಟೆಯಲ್ಲಿ ಪ್ರವೇಶಿಸಿದಾಗ ಕಂಡುಬರುವ ದೃಶ್ಯಗಳಿವು…

ಬಿಬಿಎಂಪಿ ಮೇಯರ್‌ ಆಗಿ ಆಯ್ಕೆಯಾಗುವ ಪ್ರತಿಯೊಬ್ಬರೂ ಕೆ.ಆರ್‌.ಮಾರುಕಟ್ಟೆ ಸ್ವಚ್ಛಗೊಳಿಸುತ್ತೇವೆ ಎಂದು ಹೇಳುತ್ತಲೇ ಇದ್ದಾರೆ. ಆದರೆ, ಮಾರುಕಟ್ಟೆ ಮಾತ್ರ ಕೆಟ್ಟ ಪರಿಸ್ಥಿತಿಯಿಂದ ಹೊರಬರಲು ಸಾಧ್ಯವಾಗುತ್ತಿಲ್ಲ. ಕಾರಣ ಸಮರ್ಪಕ ತ್ಯಾಜ್ಯ ವಿಲೇವಾರಿಯ ಕುರಿತು ಹಲವಾರು ಬಾರಿ ಜಾಗೃತಿ ಮೂಡಿಸಿದರೂ ವ್ಯಾಪಾರಿಗಳು ಮಾತ್ರ ಅಸಡ್ಡೆ ಮನೋಭಾವ ಹೊಂದಿದ್ದಾರೆ. ಇನ್ನೂ ಸಮರ್ಪಕವಾಗಿ ತ್ಯಾಜ್ಯ ವಿಲೇವಾರಿ, ಸ್ವಚ್ಛತೆಗೆ ಆದ್ಯತೆ ನೀಡದ ಹಿನ್ನೆಲೆಯಲ್ಲಿ ಕೆ.ಆರ್‌.ಮಾರುಕಟ್ಟೆ ಕಸದ ಮಾರುಕಟ್ಟೆ ಎಂಬ ಕುಖ್ಯಾತಿ ಪಡೆಯುವಂತಾಗಿದೆ.

ಕೆ.ಆರ್‌.ಮಾರುಕಟ್ಟೆಯಲ್ಲಿ ಬೆಳಗಿನ ಜಾವ 3 ಗಂಟೆಯಿಂದಲೇ ವಹಿವಾಟು ಆರಂಭವಾಗಿ, ಬೆಳಗ್ಗೆ 9ರವರೆಗೆ ಸಗಟು ವ್ಯಾಪಾರ ನಡೆಯುತ್ತದೆ. ಅಲ್ಲಿಂದ ರಾತ್ರಿ 11ರವರೆಗೂ ಮಳಿಗೆ ವ್ಯಾಪಾರ ನಡೆಯುತ್ತದೆ. ಆದರೆ, ಪಾಲಿಕೆಯಿಂದ ತ್ಯಾಜ್ಯ ವಿಲೇವಾರಿ ನಡೆಯುವುದು ಕೇವಲ ಒಂದೇ ಬಾರಿ. ಹೀಗಾಗಿ ಎಲ್ಲೆಂದರಲ್ಲಿ ತ್ಯಾಜ್ಯ ರಾಶಿ ಸೃಷ್ಟಿಯಾಗುತ್ತಿದೆ.

ಸಿಬ್ಬಂದಿ, ಕಾಂಪ್ಯಾಕ್ಟರ್‌ ಕೊರತೆ!?: ಮಾಜಿ ಮೇಯರ್‌ಗಳು ಹೇಳುವ ಪ್ರಕಾರ ತ್ಯಾಜ್ಯ ಸಮಸ್ಯೆಗೆ ಕಾರಣ ನಿಗದಿತ ಪ್ರಮಾಣದಲ್ಲಿ ಪೌರಕಾರ್ಮಿಕರು ಹಾಗೂ ಕಾಂಪ್ಯಾಕ್ಟರ್‌ ಕಾರ್ಯನಿರ್ವಹಿಸುತ್ತಿಲ್ಲ. ಮಾರುಕಟ್ಟೆಯಲ್ಲಿ ನಿತ್ಯ 35-40 ಟನ್‌ ತ್ಯಾಜ್ಯ ಸೃಷ್ಟಿಯಾಗುತ್ತದೆ. ಆದರೆ, ಗುತ್ತಿಗೆದಾರರು ಕೇವಲ ಒಂದು ಕಾಂಪ್ಯಾಕ್ಟರ್‌ನಿಂದ ವಿಲೇವಾರಿ ಕಾರ್ಯ ನಡೆಸುತ್ತಿರುವುದರಿಂದ ಅಗಾಧ ಪ್ರಮಾಣದ ತ್ಯಾಜ್ಯ ಮಾರುಕಟ್ಟೆಯಲ್ಲೇ ಉಳಿಯುವಂತಾಗಿದೆ.

ಸ್ವಚ್ಛತೆಗೆ ವ್ಯಾಪಾರಿಗಳ ಅಸಡ್ಡೆ: ಪಾಲಿಕೆಯಿಂದ ಮಾರುಕಟ್ಟೆ ಸ್ವಚ್ಛಗೊಳಿಸಲು ಹಲವಾರು ಬಾರಿ ಅಭಿಯಾನ ಕೈಗೊಂಡು, ವ್ಯಾಪಾರಿಗಳು ತಾವಿರುವ ಜಾಗವನ್ನು ಸ್ವಚ್ಛವಾಗಿಟ್ಟುಕೊಳ್ಳುವಂತೆ ತಿಳಿಸಲಾಗಿದೆ. ಆದರೆ, ವ್ಯಾಪಾರಿಗಳು ಮಾತ್ರ ತ್ಯಾಜ್ಯವನ್ನು ಅಲ್ಲೇ ಬಿಟ್ಟು ಹೋಗುತ್ತಾರೆ. ಇನ್ನು ತರಕಾರಿ ವ್ಯಾಪಾರಿಗಳು ಕೊಚ್ಚೆಯ ನಡುವೆಯೇ ವ್ಯಾಪಾರ ವಹಿವಾಟಿನಲ್ಲಿ ತೊಡಗುತ್ತಿರುವುದು ಮಾರುಕಟ್ಟೆ ಸ್ಥಿತಿ ಮತ್ತಷ್ಟು ಹದಗೆಡುವಂತೆ ಮಾಡಿದೆ.

ವಾರ್ಷಿಕ 2.40 ಕೋಟಿ ಆದಾಯ: ಮಾರುಕಟ್ಟೆಯಲ್ಲಿ ಪಾಲಿಕೆಯಿಂದ ಅನುಮತಿ ಪಡೆದಿರುವ 1,510 ಮಳಿಗೆಗಳಿದ್ದು, ಇವುಗಳಿಂದ ಹಳೆಯ ದರದಂತೆ ಮಾಸಿಕ 18ರಿಂದ 20 ಲಕ್ಷ ರೂ.ವರೆಗೆ, ವಾರ್ಷಿಕ ಸುಮಾರು 2.40 ಕೋಟಿ ರೂ. ಬಾಡಿಗೆ ಸಂಗ್ರಹವಾಗುತ್ತಿದೆ. ಆದರೆ, ಮಳಿಗೆಗಳ ಮುಂದೆ ಹಾಗೂ ಪಾದಚಾರಿ ಮಾರ್ಗದಲ್ಲಿ ಸಾವಿರಾರು ವ್ಯಾಪಾರಿಗಳು ವ್ಯಾಪಾರ ನಡೆಸುತ್ತಿದ್ದು, ಆದಾಯ ಮಾತ್ರ ಅಧಿಕಾರಿಗಳು ಹಾಗೂ ಕಾಣದ ಕೈಗಳ ಪಾಲಾಗುತ್ತಿದೆ. ಇನ್ನು ನಿವೃತ್ತರಾಗಿರುವ ಪಾಲಿಕೆ ಅಧಿಕಾರಿಗಳು ಸಹ ಇಂದಿಗೂ ಕೆಲಸದಲ್ಲಿ ತೊಡಗಿಕೊಳ್ಳುತ್ತಿರುವುದು ವಿಪರ್ಯಾಸ ಎಂಬುದು ಮಾಜಿ ಮೇಯರ್‌ ಒಬ್ಬರ ಆರೋಪ.

ತ್ಯಾಜ್ಯ ಸುರಿವ ಜಾಗದಲ್ಲೂ ಮಳಿಗೆ!: ನಿಯಮದಂತೆ ಪೌರಕಾರ್ಮಿಕರು ನಿತ್ಯ 11 ಗಂಟೆಯೊಳಗೆ ಮಾರುಕಟ್ಟೆಯಲ್ಲಿ ಸ್ವಚ್ಛತಾ ಕಾರ್ಯ ನಡೆಸುತ್ತಾರೆ. ಆ ನಂತರದಲ್ಲಿ ಉತ್ಪತ್ತಿಯಾಗುವ ತ್ಯಾಜ್ಯವನ್ನು ಹಾಕಲು ಪಾಲಿಕೆಯಿಂದ ಮೂರು ಜಾಗಗಳನ್ನು ಗುರುತಿಸಲಾಗಿತ್ತು. ವ್ಯಾಪಾರಿಗಳು 11ರ ನಂತರ ಸೃಷ್ಟಿಯಾಗುವ ತ್ಯಾಜ್ಯವನ್ನು ಆ ಜಾಗಗಳಲ್ಲಿ ಹಾಕಿದರೆ ಪೌರಕಾರ್ಮಿಕರು ಮರು ದಿನ ಬೆಳಗ್ಗೆ ತೆರವು ಮಾಡುತ್ತಾರೆ. ಆದರೆ, ತ್ಯಾಜ್ಯ ಹಾಕಲು ಗುರುತಿಸಿದ್ದ ಮೂರೂ ಜಾಗಗಳಲ್ಲಿ ಮಳಿಗೆಗಳು ನಿರ್ಮಾಣವಾಗಿವೆ. ಪರಿಣಾಮ, ತ್ಯಾಜ್ಯ ರಸ್ತೆಗೆ ಬೀಳುತ್ತಿದೆ.

ಅಧಿಕಾರಿಗಳು ಮಾಲ್‌ಗೆ, ಮೇಯರ್‌ ಮಾರುಕಟ್ಟೆಗೆ: ಪಾಲಿಕೆ ಅಧಿಕಾರಿಗಳು ಮಾಲ್‌ಗ‌ಳಿಗೆ ಹೋಗಿ ಖುಷಿಯಾಗಿ ಕಾಲ ಕಳೆಯುತ್ತಾರೆ. ಆದರೆ, ಗ್ರಾಹಕರು ಸಹ ಮಾರುಕಟ್ಟೆಗಳಿಗೆ ಅಷ್ಟೇ ಖುಷಿಯಿಂದ ಬರಲಿ ಎಂದು ಮಾರುಕಟ್ಟೆ ಸ್ವಚ್ಛತೆಗೆ ಮುಂದಾಗುವುದಿಲ್ಲ. ಮಾರುಕಟ್ಟೆಯಲ್ಲಿ ಉತ್ಪತ್ತಿಯಾಗುವ ಹಸಿ ತ್ಯಾಜ್ಯ ಸಂಸ್ಕರಣೆಗೆ ಬಯೋಮಿಥನೈಸೇಷನ್‌ ಘಟಕ ನಿರ್ಮಿಸಲು ಅಧಿಕಾರಿಗಳಿಗೆ ಅದನ್ನು ನಿರ್ಮಿಸಲು ಕಷ್ಟವಾಗಿದೆ ಎಂದು ಮಾಜಿ ಮೇಯರ್‌ ಕಟ್ಟೆ ಸತ್ಯನಾರಾಯಣ ಆರೋಪಿಸಿದರು.

ಮೈಸೂರು ಮಹಾರಾಜರು ನಿರ್ಮಿಸಿದ ಮಾರುಕಟ್ಟೆ ಸ್ವಚ್ಛಗೊಳಿಸಬೇಕೆಂದು 42 ವಾರ ಮಾರುಕಟ್ಟೆಗೆ ಭೇಟಿ ನೀಡಿದ್ದೇನೆ. ಆದರೆ, ಇಂದು ಮಾರುಕಟ್ಟೆ ನೋಡಲಾಗದಂತಹ ದುಸ್ಥಿತಿಯಲ್ಲಿದೆ. ಮಾರಕಟ್ಟೆ ಸ್ವಚ್ಛತೆ ಕಾಪಾಡಬೇಕಾದ ಅಧಿಕಾರಿಗಳು ಬೇರೆಯದೇ ಕೆಲಸದಲ್ಲಿ ನಿರತರಾಗಿರುತ್ತಾರೆ. ಮಾರುಕಟ್ಟೆ ಸಂಪೂರ್ಣವಾಗಿ ಸ್ವಚ್ಛವಾಗಬೇಕಾದರೆ, ದಕ್ಷ ಅಧಿಕಾರಿಗಳು ಉಪ ಆಯುಕ್ತರು, ಕಂದಾಯ ಅಧಿಕಾರಿ ಹಾಗೂ ಸಹಾಯಕ ಇಂಜಿನಿಯರ್‌ಗಳನ್ನು ನೇಮಿಸಬೇಕು ಎಂದಿದ್ದಾರೆ.

* ವೆಂ. ಸುನೀಲ್‌ಕುಮಾರ್‌

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.