ಕೊಲಂಬಿಯಾ ಮೂಲದ ಯುವತಿ ಅನುಮಾನಾಸ್ಪದ ಸಾವು
Team Udayavani, Dec 10, 2018, 11:20 AM IST
ಬೆಂಗಳೂರು: ಕೊಲಂಬಿಯಾ ಮೂಲದ ಯುವತಿ ತಾನು ವಾಸವಿದ್ದ ಅಪಾರ್ಟ್ಮೆಂಟ್ನ ಮೂರನೇ ಮಹಡಿಯಿಂದ ಅನುಮಾನಾಸ್ಪದ ರೀತಿಯಲ್ಲಿ ಕೆಳಗೆ ಬಿದ್ದು ಮೃತಪಟ್ಟ ಘಟನೆ ಹಳೆ ವಿಮಾನ ನಿಲ್ದಾಣ ರಸ್ತೆಯ ಸಮೀಪ ಭಾನುವಾರ ಮುಂಜಾನೆ ನಡೆದಿದೆ.
ಕರೆನ್ ಡ್ಯಾನಿಯಲ್ (25) ಮೃತರು. ಈ ಕುರಿತು ಮಾರಿಯಾ ಎಂಬುವವರು ನೀಡಿರುವ ದೂರಿನ ಅನ್ವಯ ಜೀವನ್ ಭೀಮಾ ನಗರ ಠಾಣೆ ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಕಳೆದ ಒಂದು ವರ್ಷದಿಂದ ಪ್ರತಿಷ್ಠಿತ ಹೋಟೆಲ್ ಒಂದರಲ್ಲಿ ಭಾಷಾಂತರಕಾರರಾಗಿ ಕಾರ್ಯನಿರ್ವಹಿಸುತ್ತಿದ್ದ ಕರೆನ್ ಹಳೇ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ವೈಲ್ಡ್ ಫ್ಲವರ್ ಅಪಾರ್ಟ್ ಮೆಂಟ್ನ ಎರಡನೇ ಫ್ಲೋರ್ನ ಫ್ಲ್ಯಾಟ್ನಲ್ಲಿ ಸ್ನೇಹಿತೆ ಜತೆ ವಾಸವಿದ್ದರು. ಶನಿವಾರ ರಾತ್ರಿ ಸ್ಪೇನ್ ಮೂಲದ ಮಾರಿಯಾ ಹಾಗೂ ಇತರೆ ಸ್ನೇಹಿತರ ಜತೆಗೂಡಿ ವೈಟ್ಫಿಲ್ಡ್ನಲ್ಲಿ ತಡರಾತ್ರಿಯವರೆಗೂ ಪಾರ್ಟಿ ಮಾಡಿದ್ದಾರೆ. ಮೂರು ಗಂಟೆ ಸುಮಾರಿಗೆ ಮಾರಿಯಾ ಜತೆ ಫ್ಲ್ಯಾಟ್ಗೆ ಆಗಮಿಸಿದ್ದಾರೆ.
ಕೆಲ ಹೊತ್ತಿನ ಬಳಿಕ ಕರೆನ್ ಮೂರನೇ ಮಹಡಿಗೆ ತೆರಳಿದ್ದು, ಕೆಲವೇ ನಿಮಿಷಗಳಲ್ಲಿ ಕೂಗಿ ಕೊಂಡಿದ್ದಾರೆ. ಕೂಗು ಕೇಳಿ ಕೊಠಡಿಯಿಂದ ಹೊರಗೆ ಬಂದ ಮಾರಿಯಾ, ನೋಡು ನೋಡುತ್ತಿದ್ದಂತೆ ಕರೆನ್ ಕೆಳಗೆ ಬಿದ್ದಿದ್ದಾರೆ. ಕೆಳಗಡೆ ಇಳಿದು ಬಂದು ನೋಡುವಷ್ಟರಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಕರೆನ್ ಡ್ಯಾನಿಯಲ್ ಸ್ಥಳದಲ್ಲೇ ಮೃತ ಪಟ್ಟಿದ್ದರು ಎಂದು ಮಾರಿಯಾ ದೂರಿನಲ್ಲಿ ತಿಳಿಸಿದ್ದಾರೆ ಎಂದು ಹಿರಿಯ ಪೊಲೀಸ್ ಆಧಿಕಾರಿಯೊಬ್ಬರು ಮಾಹಿತಿ ನೀಡಿದರು.
ಕರೆನ್ ಯಾವ ಉದ್ದೇಶಕ್ಕೆ ಮೂರನೇ ಮಹಡಿಗೆ ತೆರಳಿದ್ದರು ಎಂಬ ಬಗ್ಗೆ ಇನ್ನೂ ಗೊತ್ತಾಗಿಲ್ಲ. ಪ್ರಾಥಮಿಕ ತನಿಖೆಯಲ್ಲಿ ಆಯತಪ್ಪಿ ಕೆಳಗೆ ಬಿದ್ದಿರುವುದು ಗೊತ್ತಾಗಿದೆ. ಆಕೆಯ ಸ್ನೇಹಿತರನ್ನು ವಿಚಾರಣೆ ನಡೆಸಿ ಹೇಳಿಕೆ ದಾಖಲಿಸಿಕೊಳ್ಳಬೇಕಿದೆ. ಮೃತ ಯುವತಿಯ ಮರಣೋತ್ತರ ಪರೀಕ್ಷಾ ವರದಿ ಬರಬೇಕಿದೆ ಎಂದು ಅಧಿಕಾರಿ ಹೇಳಿದರು.
ವಿದೇಶಿಯರ ಪ್ರಾದೇಶಿಕ ನೋಂದಣಿ (ಎಫ್ಆರ್ಆರ್ಒ) ಕಚೇರಿ ಮೂಲಕ ಕೆರನ್ ಪೋಷಕರಿಗೆ ಮಾಹಿತಿ ನೀಡಲಾಗಿದೆ. ಅವರು ಬಂದ ಬಳಿಕ ಮರಣೋತ್ತರ ಪರೀಕ್ಷೆ ನಡೆಯಲಿದೆ ಎಂದು ಅಧಿಕಾರಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Dr Rajkumar: ಇಂದು ರಾಜ್ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ