ಸಚಿವ ಎಚ್.ಎಂ.ರೇವಣ್ಣ ವಿರುದ್ಧ ಎಸಿಬಿಗೆ ದೂರು
Team Udayavani, Mar 17, 2018, 6:25 AM IST
ಬೆಂಗಳೂರು: ಸರ್ಕಾರಿ ಸಾರಿಗೆ ಬಸ್ಗಳ ಖರೀದಿ ಹಾಗೂ ಅವುಗಳ ನಿರ್ವಹಣೆ ಹೆಸರಿನಲ್ಲಿ 1,577 ಕೋಟಿ ರೂ. ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಸಾರಿಗೆ ಸಚಿವ ಎಚ್.ಎಂ.ರೇವಣ್ಣ ಮತ್ತು ಸಾರಿಗೆ ಸಂಸ್ಥೆಗಳ ಹಿರಿಯ ಅಧಿಕಾರಿಗಳ ವಿರುದ್ಧ ಬಿಜೆಪಿ ನಗರ ಘಟಕ ವಕ್ತಾರ ಎನ್.ಆರ್.ರಮೇಶ್ ಶುಕ್ರವಾರ ಎಸಿಬಿಗೆ ದೂರು ನೀಡಿದ್ದಾರೆ.
ಸಾರಿಗೆ ಸಚಿವ ಎಚ್.ಎಂ.ರೇವಣ್ಣ, ಸಾರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಬಿ.ಬಸವರಾಜು, ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಎಸ್.ಆರ್ ಉಮಾಶಂಕರ್, ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ.ಪೊನ್ನುರಾಜ್, ಎನ್.ಇ.ಕೆ.ಆರ್.ಟಿ.ಸಿಯ ವ್ಯವಸ್ಥಾಪಕ ನಿರ್ದೇಶಕ ಎಚ್.ಎಸ್ ಅಶೋಕ್ ಆನಂದ್, ಎನ್ಡಬು ಕೆಆರ್ಟಿಸಿಯ ವ್ಯವಸ್ಥಾಪಕ ನಿರ್ದೇಶಕ ಪಾಂಡುರಂಗ ಬೊಮ್ಮಯ್ಯ ನಾಯ್ಕ ಅಧಿಕಾರ ದುರುಪಯೋಗಪಡಿಸಿಕೊಂಡು ಭ್ರಷ್ಟಾಚಾರ ಎಸಗಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಸಚಿವ ರೇವಣ್ಣ ಸಾರಿಗೆ ಸಚಿವರಾಗಿ ಅಧಿಕಾರ ಸ್ವೀಕರಿಸಿ ಕೇವಲ ಆರೂವರೆ ತಿಂಗಳಾಗಿದ್ದು, ನಂತರ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ , ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಮತ್ತು ಬೆಂಗಳೂರು ಮಹಾ ನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ)ಗಳಿಗೆ ಬಸ್ಗಳನ್ನು ಖರೀದಿಸುವ ಸಲುವಾಗಿ 970 ಕೋಟಿಗೂ ಅಧಿಕ ಹಣ ಖರ್ಚು ಮಾಡಲಾಗಿದೆ.
ಇತರೆ ವಾಹನ ನಿರ್ವಹಣೆ ಮತ್ತು ದುರಸ್ಥಿ ಕಾರ್ಯಗಳಿಗೆಂದು 607 ಕೋಟಿ ರೂ.ಗೂ ಅಧಿಕ ಹಣ ಬಳಸಿಕೊಳ್ಳಲಾಗಿದೆ. ಒಟ್ಟಾರೆ ಬಸ್ ಖರೀದಿ ಮತ್ತು ನಿರ್ವಹಣೆಗೆ 1,577 ಕೋಟಿ ವ್ಯಯಿಸಲಾಗಿದೆ. ಈ ಹಣದಲ್ಲಿ ಅವ್ಯವಹಾರ ನಡೆದಿದ್ದು, ಸೂಕ್ತ ತನಿಖೆ ನಡೆಸುವಂತೆ ದೂರಿನಲ್ಲಿ ರಮೇಶ್ ಒತ್ತಾಯಿಸಿದ್ದಾರೆ.
ಲೋಕಾಯುಕ್ತಕ್ಕೂ ದೂರು
ಇದೇ ವೇಳೆ ಬಿಎಂಟಿಸಿ ಮತ್ತು ಕೆಎಸ್ಆರ್ಟಿಸಿ ಸಂಸ್ಥೆಗಳ ಬಳಕೆಗೆಂದು ಇತ್ತೀಚೆಗೆ ಸ್ವೀಡನ್ ದೇಶದ ಸ್ಕ್ಯಾನಿಯಾ ಹೆಸರಿನ 300ಕ್ಕೂ ಅಧಿಕ ಬಸ್ಗಳನ್ನು ಖರೀದಿಸಿರುವ ಪ್ರಕ್ರಿಯೆಗಳಲ್ಲೂ ಅವ್ಯವಹಾರ ನಡೆದಿದೆ. ಶೇ.75 ರಷ್ಟು ಪ್ರಮಾಣದ ಬಸ್ಗಳಲ್ಲಿ ಸಾಕಷ್ಟು ತೊಂದರೆ ಕಂಡು ಬಂದಿದೆ. ಈ ಬಗ್ಗೆ ತನಿಖೆ ನಡೆಸುವಂತೆ ಸಚಿವರು ಹಾಗೂ ಐವರು ಅಧಿಕಾರಿಗಳ ವಿರುದ್ಧ ಬಿ.ಗಣೇಶ್ ಸಿಂಗ್ ಎಂಬುವವರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ