ಕಲಬುರ್ಗಿ ಕೊಲೆ ಕುರಿತು ಸಮಗ್ರ ತನಿಖೆಯಾಗಲಿ


Team Udayavani, Apr 28, 2019, 3:01 AM IST

kalburgi

ಬೆಂಗಳೂರು: ಹಿರಿಯ ಸಂಶೋಧಕ ಎಂ.ಎಂ.ಕಲಬುರ್ಗಿ ಅವರ ಕೊಲೆ ಪ್ರಕರಣದ ಹಿಂದಿರುವ ಸಂಚುಕೋರರು ಮತ್ತು ಸಂಘಟನೆಗಳ ಕುರಿತಂತೆ ಸಮಗ್ರ ತನಿಖೆ ನಡೆಯಬೇಕು ಎಂದು ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧ್ಯಕ್ಷ ಕೆ.ಮರುಳಸಿದ್ದಪ್ಪ ಒತ್ತಾಯಿಸಿದರು.

ಜಯನಗರದ ಶ್ರೀ ಶಿವರಾತ್ರಿ ರಾಜೇಂದ್ರ ಚಿಂತನ ಮಂಟಪದಲ್ಲಿ ಬಸವ ಅಂತಾರಾಷ್ಟ್ರೀಯ ಪ್ರತಿಷ್ಠಾನ ಶನಿವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಲೇಖಕಿ ಡಾ.ಎಂ.ಎಸ್‌.ಆಶಾದೇವಿ ಅವರಿಗೆ “ಡಾ.ಎಂ.ಎಂ.ಕಲಬುರ್ಗಿ ರಾಷ್ಟ್ರೀಯ ಪ್ರಶಸ್ತಿ’ ಪ್ರದಾನ ಮಾಡಿ ಮಾತನಾಡಿದ ಅವರು, ಸಮಗ್ರ ತನಿಖೆ ಮೂಲಕ ಕಲಬುರ್ಗಿ ಅವರ ಕೊಲೆ ಹಿಂದಿರುವವರು ಯಾರು ಎಂಬುದು ಗೊತ್ತಾಗಬೇಕಿದೆ ಎಂದು ಹೇಳಿದರು.

ಕಲಬುರ್ಗಿ ಅವರ ಸಾಹಿತ್ಯ ಸ್ವರೂಪವನ್ನು ಕೊಂಡಾಡಿದ ಮರುಳಸಿದ್ದಪ್ಪ, ಶರಣ ಸಾಹಿತ್ಯದ ಅನನ್ಯತೆ ಮತ್ತು ಮೂಲ ಸ್ವರೂಪವನ್ನು ಜಗತ್ತಿಗೆ ಅನಾವರಣಗೊಳಿಸಿದವರಲ್ಲಿ ಎಂ.ಎಂ.ಕಲಬುರ್ಗಿ ಅವರು ಪ್ರಮುಖರಾಗಿದ್ದರು. ಶರಣ ಧರ್ಮವನ್ನು ಅವರು ಪ್ರತಿಪಾದಿಸಿದ್ದರು. ಶರಣ ಧರ್ಮಕ್ಕಾಗಿ ಅವರು ಹುತಾತ್ಮರಾದರು ಎಂದರು.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಎಸ್‌.ಜಿ.ಸಿದ್ದರಾಮಯ್ಯ ಮಾತನಾಡಿ, ಪ್ರಜಾಪ್ರಭುತ್ವ ರಾಷ್ಟ್ರವೊಂದರಲ್ಲಿ ಅಭಿವ್ಯಕ್ತಿ ಸ್ವಾತಂತ್ರವನ್ನು ಅನುಭವಿಸಲು ಸಾಧ್ಯವಿಲ್ಲ ಎಂಬುದನ್ನು ಪ್ರೊ.ಎಂ.ಎಂ.ಕಲಬುರ್ಗಿ ಹಾಗೂ ಗೌರಿ ಲಂಕೇಶ್‌ ಹತ್ಯೆಗಳು ತೋರಿಸುತ್ತಿವೆ ಎಂದು ದೂರಿದರು.

ಚಿತ್ರದುರ್ಗದ ಶ್ರೀ ಮುರುಘರಾಜೇಂದ್ರ ಮಠದ ಡಾ.ಶಿವಮೂರ್ತಿ ಮುರುಘಾ ಶರಣರು ಮಾತನಾಡಿ, ಬಸವಣ್ಣನ ಅನುಯಾಯಿಗಳಲ್ಲೂ ಮೂಲಭೂತವಾದಿಗಳಿದ್ದಾರೆ. ಹದಿವಾರು ವರ್ಷಗಳ ಹಿಂದೆ ನಮ್ಮ ಮಠದಲ್ಲಿ ಎಂ.ಎಂ.ಕಲಬುರ್ಗಿ ಅವರ ನೇತೃತ್ವದಲ್ಲಿ ಶರಣ ಧರ್ಮ ಸ್ಥಾಪನೆ ಬಗ್ಗೆ ಚರ್ಚೆ ನಡೆಯುತ್ತಿತ್ತು ಎಂದರು.

ಪ್ರೊ.ಎಂ.ಎಂ.ಕಲಬುರ್ಗಿಯವರ ಪತ್ನಿ ಉಮಾದೇವಿ, ಪ್ರತಿಷ್ಠಾನದ ಅಧ್ಯಕ್ಷ ಎಂ.ಮಹಾದೇವಯ್ಯ, ಬೆಂಗಳೂರು ನಗರ ಜಿಲ್ಲಾ ಶರಣ ಸಾಹಿತ್ಯ ಪರಿಷತ್‌ ಅಧ್ಯಕ್ಷ ಕೆ.ವಿ.ನಾಗರಾಜಮೂರ್ತಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.