ವಿಚಾರವಾದಿಗಳಿಲ್ಲದೆ ಸೊರಗಿದ ಚರ್ಚೆ


Team Udayavani, Aug 3, 2019, 3:05 AM IST

vicharavadi

ಬೆಂಗಳೂರು: ವಿಧಾನಸಭೆ, ಪರಿಷತ್‌ಗಳಲ್ಲಿ ವಿಚಾರವಾದಿಗಳ ಕೊರತೆಯಿಂದ ನಾಡು, ನುಡಿ, ಸರ್ಕಾರಿ ಶಾಲೆಗಳ ಸ್ಥಿತಿಗತಿ ಕುರಿತು ಗಂಭೀರ ಚರ್ಚೆಗಳಾಗುತ್ತಿಲ್ಲ ಎಂದು ಚಿತ್ರಕಲಾ ಪರಿಷತ್‌ ಅಧ್ಯಕ್ಷ ಡಾ.ಬಿ.ಎಲ್‌.ಶಂಕರ್‌ ಬೇಸರ ವ್ಯಕ್ತಪಡಿಸಿದರು.

ಸಪ್ನ ಬುಕ್‌ ಹೌಸ್‌ ಹಾಗೂ ಕರ್ನಾಟಕ ವಿಕಾಸ ರಂಗ ಶುಕ್ರವಾರ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಂತೋಷ ಹಾನಗಲ್ಲ ಸಂಪಾದಿಸಿದ “ಸದನದಲ್ಲಿ ಸಿದ್ದಲಿಂಗಯ್ಯ; ನೆಲ ಕನ್ನಡ ನುಡಿ ಕನ್ನಡ’ ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದ ಅವರು, ಶತಮಾನದ ಇತಿಹಾಸವಿರುವ ಕರ್ನಾಟಕ ವಿಧಾನ ಪರಿಷತ್‌ ಒಂದು ಕಾಲದಲ್ಲಿ ಗಂಭೀರ ವಿಚಾರಗಳ ಚರ್ಚೆಗೆ ವೇದಿಕೆಯಾಗಿತ್ತು. ನಾಡಿನ ಜನರ ಧ್ವನಿಯಾಗಿ ಕೆಲಸ ಮಾಡುತ್ತಿತ್ತು. ಆದರೆ, ಇತ್ತೀಚಿನ ದಿನಗಳಲ್ಲಿ ಹಳೆಯ ಸ್ವರೂಪ ಮರೆಯಾಗಿದೆ ಎಂದು ಹೇಳಿದರು.

ವಿಧಾನ ಸಭೆಯಲ್ಲಿ ಚರ್ಚೆಯಾಗುವ ವಿಷಯಗಳೇ ವಿಧಾನ ಪರಿಷತ್‌ನಲ್ಲೂ ಚರ್ಚೆಯಾಗಿ ಕಾಲಹರಣವಾಗುತ್ತಿದೆ. ಇದಕ್ಕೆ ಕಾರಣ ವಿಧಾನ ಪರಿಷತ್ತಿನಲ್ಲಿ ಚಿಂತಕರು, ವಿಚಾರವಾದಿಗಳು, ಹೋರಾಟಗಾರರ ಕೊರತೆ, ಎಂ.ಸಿ.ನಾಣಯ್ಯ, ಸಿದ್ದಲಿಂಗಯ್ಯ ಒಳಗೊಂಡು ಅನೇಕರು ವಿಧಾನಪರಿಷತ್ತಿನಿಂದ ಹೊರಗುಳಿದಿರುವುದು ಕಾರಣ ಎಂದರು.

ಹೋರಾಟದ ಮೆಲಕು:ಹಿರಿಯ ಕವಿ ಡಾ.ಸಿದ್ದಲಿಂಗಯ್ಯ ಮಾತನಾಡಿ, ಸದನದಲ್ಲಿ ಯಾರಾದರೂ ಆಂಗ್ಲ ಭಾಷೆ ಮಾತನಾಡಿದ ಕೂಡಲೇ ನಾನು ಎದ್ದು ನಿಂತು ಕನ್ನಡ ಮರೆಯಾಗುತ್ತಿದೆ. ಕರ್ನಾಟಕದಲ್ಲಿ ಆಡಳಿತ ಭಾಷೆ ಕನ್ನಡ, ಏಕೀಕರಣ ಹೋರಾಟಕ್ಕೆ ಅದರ ಧ್ಯೇಯಕ್ಕೆ ಬೆಲೆಯಿಲ್ಲವೇ ಎಂದು ಘೋಷಣೆ ಕೂಗುತ್ತಿದೆ. ನನಗೆ ಬೆಂಬಲ ಕೊಡಲೆಂದೇ ಪ್ರತಿ ಕಲಾಪದಲ್ಲೂ ಸದಸ್ಯ ಬಳಗ ಇರುತ್ತಿತ್ತು.

ಆ ಬಳಗವು ಆಂಗ್ಲ ಭಾಷೆ ಮಾತನಾಡಿದ ಸದಸ್ಯರಿಗೆ ನೇರವಾಗಿ ಆಡು ಭಾಷೆಯಲ್ಲಿಯೇ “ಇಂಗ್ಲೆಂಡಿನಿಂದ ಇಳಿದುಬಂದಿದ್ದೀಯಾ? ನೀನೇನು ಬ್ರಿಟಿಷರ ಕೊನೆಯ ತುಂಡಾ? ಎಂದೆಲ್ಲ ಹೀಯಾಳಿಸಿ ನನಗೆ ಬೆಂಬಲ ನೀಡುತ್ತಿದ್ದರು ಎಂದು ಸ್ಮರಿಸಿಕೊಂಡರು. ಲೇಖಕಿ ಡಾ.ವಸುಂಧರಾ ಭೂಪತಿ ಮಾತನಾಡಿ, ಸಮಾಜದ ಅಭಿವೃದ್ಧಿಗೆ ಉತ್ತಮರನ್ನು ಆಯ್ಕೆ ಮಾಡುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ರಾಜಕೀಯ ಪ್ರಜ್ಞೆ ಹೊಂದಿರಬೇಕಾಗುತ್ತದೆ ಎಂದು ಹೇಳಿದರು.

ಟಾಪ್ ನ್ಯೂಸ್

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.