ರಾಷ್ಟ್ರಕ್ಕೆ ಮಾರ್ಗದರ್ಶಕ


Team Udayavani, Dec 30, 2019, 3:13 AM IST

rashtrakke

ಬೆಂಗಳೂರು: ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಗಳಲ್ಲಿ ಪರಂಪರೆಯ ಚಿಂತನೆಗಳು ಬೇರೂರಿದ್ದರೂ, ಅವರು ಪ್ರಗತಿಶೀಲ ವಿಚಾರಗಳಿಗೆ ಸ್ಪಂದಿಸುತ್ತಿದ್ದರು ಎಂದು ನಿಡುಮಾಮಿಡಿ ಮಠದ ವೀರಭದ್ರ ಚನ್ನಮಲ್ಲ ಸ್ವಾಮೀಜಿ ಸ್ಮರಿಸುತ್ತಾರೆ. ಪರಂಪರೆ ಹಾಗೂ ಬದಲಾವಣೆ ನಡುವೆ ಸಮನ್ವಯ ದೃಷ್ಟಿ ಮೂಡಬೇಕೆಂಬ ಆಶಯ ಅವರದಾಗಿತ್ತು. ಅವೈದಿಕ ಪರಂಪರೆಯ ಹಲವು ಸದಾಶಯಗಳಿಗೂ ಶ್ರೀಗಳು ಸ್ಪಂದಿಸಿದ್ದಾರೆ. ಹೀಗಾಗಿ ಅವರ ಬಗ್ಗೆ ಅಪಾರ ಗೌರವವಿದೆ ಎಂದರು.

ಶ್ರೀಗಳು ಬದಲಾವಣೆ, ಸುಧಾರಣೆ ಪರವಾಗಿದ್ದರು. ಮಾಧ್ವ ಪರಂಪರೆಯಲ್ಲಿ ಅವರ ಸ್ಥಾನ ದೊಡ್ಡದು. ರಾಷ್ಟ್ರಕ್ಕೆ, ನಾಡಿಗೆ ಮಾರ್ಗದರ್ಶನ ಮಾಡುವ ಬೆರಳೆಣಿಕೆಯ ಯತಿಗಳಲ್ಲಿ ಅವರೂ ಒಬ್ಬರಾಗಿದ್ದರು. ನೇರ ಸಂವಾದದಲ್ಲಿ ನಾವು ಎರಡು ಬಾರಿ ಭೇಟಿಯಾಗಿದ್ದೆವು. ಮಡೆ ಮಡೆ ಸ್ನಾನದ ವಿಷಯ ಬಂದಾಗ ಅವರು ಮುಕ್ತ ಮನಸ್ಸಿನೊಂದಿಗೆ ಚರ್ಚೆಯಲ್ಲಿ ಪಾಲ್ಗೊಂಡಿದ್ದರು ಎಂದು ಹೇಳಿದ್ದಾರೆ.

ತಾತ್ವಿಕ ಭಿನ್ನಾಭಿಪ್ರಾಯಗಳಷ್ಟೇ: ಕೆಲವು ವಿಚಾರಗಳಲ್ಲಿ ನಮ್ಮಿಬ್ಬರ ನಡುವೆ ಭಿನ್ನಾಭಿಪ್ರಾಯವಿತ್ತು. ಅದು ತಾತ್ವಿಕ ಭಿನ್ನಾಭಿಪ್ರಾಯಗಳಷ್ಟೇ, ವೈಯಕ್ತಿಕವಾಗಿ ಅವರೊಂದಿಗೆ ಉತ್ತಮ ಸಂಬಂಧವಿತ್ತು. ಶ್ರೀಗಳು ಮಡೆಸ್ನಾನದ ಬದಲಿಗೆ ಎಡೆ ಸ್ನಾನದ ಪರಿಕಲ್ಪನೆಗೆ ಒಲವು ತೋರಿದ್ದರು. “ನಾನು ಮಡೆ ಸ್ನಾನ ಮಾಡದಿರುವಾಗ ಬೇರೆಯವರಿಗೆ ಮಾಡಿ ಎಂದು ಹೇಳಲು ಹೇಗೆ ಸಾಧ್ಯ’ ಎಂದು ಶ್ರೀಗಳು ಪ್ರಶ್ನೆ ಮಾಡಿದ್ದರು. ನಾನು ಒಪ್ಪುವುದಿಲ್ಲ, ಏಕಕಾಲಕ್ಕೆ ಬಿಡುವುದು ಬೇಡ ಎಂದಿದ್ದರು.

ಆದರೆ, ಒಮ್ಮೆಗೆ ಮಡೆ ಮಡೆ ಸ್ನಾನ ಸಂಪ್ರದಾಯವನ್ನು ತೆಗೆದು ಹಾಕಿದರೆ ಸಂಪ್ರದಾಯಸ್ಥರ ಮನಸ್ಸಿಗೆ ನೋವಾಗುತ್ತದೆ. ಇದರ ಬದಲಿಗೆ ಎಡೆ ಸ್ನಾನ ಮುಂದುವರಿಸಿ ಎಂಬ ಸಲಹೆ ನೀಡಿದ್ದರು. ಶ್ರೀಗಳ ಈ ನಿರ್ಧಾರದಿಂದ ಮುಂದೆ ಉಡುಪಿಯಲ್ಲಿನ ಪರ್ಯಾಯ ಪೀಠದ ಶ್ರೀಗಳು ಮಡೆ ಮಡೆ ಸ್ನಾನ ನಿಲ್ಲಿಸಿದರು. ಬದಲಾವಣೆ ಹಂತ ಹಂತವಾಗಿ ಆಗಬೇಕು. ಒಮ್ಮೆಗೆ ಮಾಡುವುದು ಬೇಡ ಎಂಬ ಮನೋಭಾವ ಪೇಜಾವರ ಶ್ರೀಗಳದ್ದಾಗಿತ್ತು.

ಮಿತಿ ಮತ್ತು ವಿಶೇಷ: ಸಂಪ್ರದಾಯಸ್ಥರ ಮನಸ್ಸಿಗೆ ನೋವಾಗಬಾರದು. ಹಾಗೇ ಆಧುನಿಕ ಮನೋಭಾವದ ಜನರಿಗೂ ಸಮಾಧಾನವಾಗಬೇಕು ಮಧ್ಯ ಮಾರ್ಗದಲ್ಲಿ ಸಾಗುವ ನಿಲುವನ್ನು ಶ್ರೀಗಳು ಹೊಂದಿದ್ದರು ಎಂದು ವೀರಭದ್ರ ಚನ್ನಮಲ್ಲ ಸ್ವಾಮೀಜಿ ನೆನಪಿಸಿಕೊಂಡರು.

ಹಲವು ಬಾರಿ ಶ್ರೀಗಳ ಆಶೀರ್ವಾದ ಪಡೆಯುವ ಅವಕಾಶ ನನಗೆ ಸಿಕ್ಕಿತ್ತು. ಸಾಮಾಜಿಕ ಸುಧಾರಣೆ ಹಾಗೂ ಧಾರ್ಮಿಕ ಸಮಾಜದ ಉದ್ಧಾರ ಕ್ಕಾಗಿ ತಮ್ಮ ಜೀವನವನ್ನು ಶ್ರೀಗಳು ಮೀಸಲಿಟ್ಟಿದ್ದರು.
-ನಿರ್ಮಲಾ ಸೀತಾರಾಮನ್‌, ಕೇಂದ್ರ ಸಚಿವೆ

ಪೇಜಾವರ ಶ್ರೀಗಳ ಅಗಲಿಕೆ ಯಿಂದ ನನಗೆ ತೀವ್ರ ನೋವಾಗಿದೆ. ಅವರು ತಮ್ಮ ಜೀವನವನ್ನು ಸಮಾಜದ ಒಳಿತಿಗಾಗಿ ಮುಡಿಪಿಟ್ಟಿದ್ದರು. ಸಮಾಜದ ಕಲ್ಯಾಣಕ್ಕಾಗಿ ಅವರ ನಿಸ್ವಾರ್ಥ ಸೇವೆ ಎಲ್ಲರಿಗೂ ಪ್ರೇರಕವಾಗಿದೆ.
-ಜೆ.ಪಿ.ನಡ್ಡಾ, ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ

ಭಾರತವು ದೇಶದ ಅತೀ ಹಿರಿಯ ಸಂತರನ್ನು ಕಳೆದುಕೊಂಡಿದೆ. ಅವರ ಉತ್ತಮವಾದ ಕಾರ್ಯಗಳು ಸಮಾಜದ ಮೇಲೆ ಬಹಳಷ್ಟು ಪ್ರಭಾವ ಬೀರಿರುತ್ತದೆ.
-ರಾಜನಾಥ್‌ ಸಿಂಗ್‌, ಕೇಂದ್ರ ಸಚಿವ

ಸದಾ ಜೀವನೋತ್ಸಾಹದ ಚಿಲುಮೆಯಂತಿದ್ದ ಶ್ರೀಗಳು ಸಮಾಜಮುಖೀ ನಿಲುವಿನ ಶ್ರೇಷ್ಠ ಸಂತರಾಗಿದ್ದರು. ಸಮಾಜಕ್ಕೆ ಮಾರ್ಗದರ್ಶಕರಾಗಿದ್ದ ಶ್ರೀಗಳ ನಿಧನದಿಂದ ನಾಡು ಬಡವಾಗಿದೆ.
-ಎಚ್‌.ಡಿ.ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ

ಹಿಂದೂ ಸಮಾಜವನ್ನು ಒಗ್ಗೂಡಿಸಿ, ರಾಮ ಜನ್ಮಭೂಮಿಯ ನೇತೃತ್ವ ವಹಿಸಿ, ನಮಗೆಲ್ಲರಿಗೂ ಮಾರ್ಗದರ್ಶಕರಾಗಿದ್ದ ಋಷಿ ಶ್ರೇಷ್ಠರ ಅಗಲಿಕೆ ದೇಶಕ್ಕೆ ತುಂಬಲಾರದ ನಷ್ಟ.
-ಶೋಭಾ ಕರಂದ್ಲಾಜೆ, ಸಂಸದೆ

* ಹಿತೇಶ್‌ ವೈ

ಟಾಪ್ ನ್ಯೂಸ್

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.