ಅರ್ಧ ರಸ್ತೆ ನುಂಗಿದ ಮಣ್ಣಿನ ಗುಡ್ಡೆ


Team Udayavani, Sep 20, 2019, 10:47 AM IST

bng-tdy-3

ಬೆಂಗಳೂರು: ನಗರದ ಪ್ರಮುಖ ಭಾಗಗಳಿಗೆ ಸಂಪರ್ಕ ಕೊಂಡಿಯಾಗಿರುವ ಗಾಂಧಿನಗರದ ವೈ.ರಾಮಚಂದ್ರ ರಸ್ತೆ ಈಗ ಅಕ್ಷರಶಃ ಕಸದ ತೊಟ್ಟಿಯಾಗಿದೆ. ಕಾಮಗಾರಿ (ಅನುಪಯುಕ್ತ ತ್ಯಾಜ್ಯವನ್ನು) ಮಣ್ಣನ್ನು ಇಲ್ಲಿ ಸುರಿದಿರುವುದರಿಂದ ಇಡೀ ಮಾರ್ಗ ಮಣ್ಣಿನ

ಗುಡ್ಡಗಳಿಂದ ತುಂಬಿಕೊಂಡಿದೆ. ರಸ್ತೆಯ ಅರ್ಧಭಾಗಕ್ಕೆ ಮಣ್ಣು ಸುರಿದಿದ್ದು, ಇದರ ನಡುವೆಯೇ ಆಟೋ ಮತ್ತು ಕಾರ್‌ ಗಳ ಪಾರ್ಕಿಂಗ್‌ ಮಾಡುವುದರಿಂದ ವಾಹನ ಸವಾರರು ಪರದಾಡುವಂತಾಗಿದೆ. ಕೊಳಚೆ ನೀರಿನ ಸಂಗ್ರಹ ಮತ್ತು ಕೊಳಚೆ ನೀರು ಮರುಬಳಕೆ ಉದ್ದೇಶದಿಂದ ಕೇಂದ್ರ ಸರ್ಕಾರದ ಅಮೃತ್‌ ಯೋಜನೆಯಡಿ ಜಲಮಂಡಳಿಯು 100 ಕೋಟಿ ರೂ. ವೆಚ್ಚದಲ್ಲಿ ನಗರದ ಹಲವು ಪ್ರದೇಶಗಳಲ್ಲಿ 24 ವಿಭಾಗೀಯ ಕಾಮಗಾರಿ ಆರಂಭಿಸಿದೆ.

ಇದೇ ಯೋಜನೆಯಡಿ ಗಾಂಧಿನಗರದ ವೈ.ರಾಮಚಂದ್ರ ರಸ್ತೆಯ ಒಂದು ಕಿ.ಮೀ ಮಾರ್ಗವನ್ನು ಅಂದಾಜು 5 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿದೆ. ಈ ಕಾಮಗಾರಿ ಪ್ರಾರಂಭವಾದಾಗಿನಿಂದ ಇಲ್ಲಿನ ಜನ ಧೂಳಿನಲ್ಲಿ ಮಿಂದೇಳುತ್ತಿದ್ದಾರೆ. ಆದರೆ, ಕಾಮಗಾರಿಗಾಗಿ ರಸ್ತೆ ಅಗೆಯಲಾಗಿತ್ತು. ಅಗೆದ ಭಾಗಗಳನ್ನು ಬಹುತೇಕ ಮುಚ್ಚಲಾಗಿದೆ. ಇಲ್ಲಿ ಸುರಿಯಲಾಗಿರುವ ಮಣ್ಣು ಜಲ ಮಂಡಳಿಯ ಕಾಮಗಾರಿಯದ್ದಲ್ಲ. ನಾವು ವ್ಯವಸ್ಥಿತವಾಗಿ ಕಾಮಗಾರಿ ನಡೆಸುತ್ತಿದ್ದೇವೆ ಎಂದು ಈ ಭಾಗದ ಸ್ಥಳೀಯ ಎಂಜಿನಿಯರ್‌ ಪ್ರಸನ್ನ ಹೇಳುತ್ತಾರೆ.

ರಾತ್ರಿ ವೇಳೆ ಬಸ್‌ಗಳ ಪಾರ್ಕಿಂಗ್‌ ಪ್ರದೇಶ: ಖಾಸಗಿ ಬಸ್‌ ಏಜೆನ್ಸಿಗಳು ಈ ರಸ್ತೆಯನ್ನು ಪಾರ್ಕಿಂಗ್‌ ಪ್ರದೇಶವಾಗಿ ಬದಲಾಯಿಸಿಕೊಳ್ಳುತ್ತವೆ. ಹೀಗಾಗಿ, ರಾತ್ರಿ ವೇಳೆ ಇಲ್ಲಿ ಕಾಮಗಾರಿ ನಡೆಸುವುದಿಲ್ಲ ಎಂದು ಅಧಿಕಾರಿಗಳು ಅಸಹಾಯಕತೆ ವ್ಯಕ್ತಪಡಿಸುತ್ತಾರೆ. ಇದಕ್ಕೆ ಕೆಲ ಪ್ರಭಾವಿಗಳ ಬೆಂಬಲವೂ ಇದೆ. ಜತೆಗೆ ಈ ಭಾಗದಲ್ಲಿ ಟೆಂಡರ್‌ ಶ್ಯೂರ್‌ ಕಾಮಗಾರಿಯೂ ನಡೆಯುತ್ತಿದ್ದು, ಬಿಬಿಎಂಪಿ ಹಾಗೂ ಜಲ ಮಂಡಳಿಗಳ ಕಾಮಗಾರಿಗಳು ಏಕಕಾಲಕ್ಕೆ ನಡೆಯುತ್ತಿರುವುದರಿಂದ ಸಮನ್ವಯ ಸಾಧ್ಯವಾಗುತ್ತಿಲ್ಲ ಎನ್ನುತ್ತಾರೆ.

ಸಂಚಾರ ಪೊಲೀಸರು ಹೈರಾಣ:  ಇಲ್ಲಿ ಸಂಚಾರ ದಟ್ಟಣೆ ನಿಭಾಯಿಸಲು ಸಂಚಾರ ಪೊಲೀಸರು ಹರಸಾಸ ಪಡುತ್ತಾರೆ. ಸದಾ ಒಂದಿಲ್ಲೊಂದು ಕಾಮಗಾರಿ ನಡೆಸುವುದರಿಂದ ಅರ್ಧ ರಸ್ತೆ ಕಾಮಗಾರಿಗೆ ಮೀಸಲಿರುತ್ತದೆ. ಇದರಿಂದ ದ್ವಿಮುಖ ಮಾರ್ಗ ಏಕಮುಖ

ಮಾರ್ಗದಷ್ಟು ಕಿರಿದಾಗುತ್ತದೆ. ಈ ಭಾಗದಲ್ಲಿ ಹೆಚ್ಚು ಶಾಲೆ, ಕಾಲೇಜುಗಳಿದ್ದು ವಿದ್ಯಾರ್ಥಿಗಳು ಏಕಾಏಕಿ ರಸ್ತೆ ದಾಟುತ್ತಾರೆ. ಹಿರಿಯ ಅಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು ವಿಧಾನಸೌಧಕ್ಕೆ ಹೋಗಲು ಇದೇ ಮಾರ್ಗ ಬಳಸುವುದರಿಂದ ಟ್ರ್ಯಾಕ್‌ ಸಮಸ್ಯೆ

ಉಂಟಾದರೆ ಉದ್ಯೋಗಕ್ಕೆ ಕುತ್ತು ಬರುವ ಸಾಧ್ಯತೆಯೂ ಇದೆ ಎಂಬುದು ಸಂಚಾರ ಪೊಲೀಸರ ಅಳಲು.

ಕಾಮಗಾರಿ ನಡೆಸುವುದು ಸವಾಲು :  “ಈ ರಸ್ತೆಗಳಲ್ಲಿ ವಾಹನ ಸಂಚಾರ ಸದಾ ಹೆಚ್ಚಾಗಿರುವ ಕಾರಣ ಕಾಮಗಾರಿ ನಡೆಸುವುದು ಸವಾಲಿನ ಕೆಲಸ. ಕಾಮಗಾರಿ ಬಹುತೇಕ ಮುಗಿದಿದ್ದು, ಆದಷ್ಟು ಬೇಗ ಮಣ್ಣನ್ನು ತೆರವುಗೊಳಿಸಲಾಗುವುದು. “ಈ ಮಾರ್ಗದಲ್ಲಿಹಿಂದೆ ಅಳವಡಿಸಿದ್ದ ಪೈಪ್‌ಗ್ಳು 30 ವರ್ಷಗಳಷ್ಟು ಹಳೆಯವು. ಹೀಗಾಗಿ, ಕೊಳಚೆ ನೀರನ್ನು ಶುದ್ಧೀಕರಿಸುವ ಉದ್ದೇಶದಿಂದ ಈಗ ಉತ್ಕೃಷ್ಟ ಗುಣಮಟ್ಟದ ಪೈಪ್‌ ಅಳವಡಿಸಲಾಗುತ್ತಿದೆ’ ಎಂದು ಜಲ ಮಂಡಳಿಯ ಸಹಾಯಕ ಎಂಜಿನಿಯರ್‌ ರೇಣುಕುಮಾರ್‌ ಮಾಹಿತಿ ನೀಡಿದರು.

ಏನಿದು ಕಾಮಗಾರಿ? : ನಗರದ ಒಳಚರಂಡಿ ಹಾಗೂ ತ್ಯಾಜ್ಯ ನೀರನ್ನು ಮರುಬಳಕೆ ಮಾಡಿಕೊಳ್ಳುವ ಉದ್ದೇಶದಿಂದ ಒಂದು ಅಡಿ ಪೈಪ್‌ಗ್ಳನ್ನು ತೆಗೆದು ಎರಡು ಅಡಿ ಪೈಪ್‌ಗ್ಳನ್ನು ಅಳವಡಿಸಲಾಗುತ್ತಿದೆ. ಈ ಮಾರ್ಗಗಳಲ್ಲಿ ಅಳವಡಿಸಿರುವ ಪೈಪ್‌ಗ್ಳನ್ನು ನೇರವಾಗಿ ನಾಯಂಡಹಳ್ಳಿಯ ಕೊಳಚೆ ನೀರು ಶುದ್ಧೀಕರಣ ಘಟಕಕ್ಕೆ (ಎಸ್‌ ಟಿಪಿ) ಸಂಪರ್ಕಿಸಿ, ಶುದ್ಧೀಕರಿಸಲು ಜಲಮಂಡಳಿ ಯೋಜನೆ ರೂಪಿಸಿದೆ.

 

.ಹಿತೇಶ್‌ ವೈ

ಟಾಪ್ ನ್ಯೂಸ್

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

10-bengaluru’

Bengaluru: ಮಕ್ಕಳ ಅಶ್ಲೀಲ ಫೋಟೋ, ವಿಡಿಯೋ ವೀಕ್ಷಿಸುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಸೆರೆ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wewqewqe

Koratagere; ಗೃಹ ಸಚಿವ ಪರಮೇಶ್ವರ್ ಮತಬೇಟೆ: 40 ಗ್ರಾಮದಲ್ಲಿ ಮಿಂಚಿನ ಸಂಚಾರ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

7

Kundapur: ಬೈಕ್‌ ಢಿಕ್ಕಿ; ಸ್ಕೂಟರ್‌ ಸವಾರೆಗೆ ಗಾಯ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Arrested: ತಂಬಾಕು ಉತ್ಪನ್ನ ಸಹಿತ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.