ಇನ್ನೂ ಸಿಗದ ಯೋಧನ ಸುಳಿವು
Team Udayavani, May 6, 2018, 11:13 AM IST
ಶಿರಸಿ: ಚುನಾವಣಾ ಕರ್ತವ್ಯದಲ್ಲಿದ್ದ ಅರೆಸೇನಾ ಪಡೆಯ ಯೋಧನ ಪತ್ತೆಗೆ ಕರ್ನಾಟಕ ಪೊಲೀಸರು ತೀವ್ರ ಹುಡುಕಾಟ ನಡೆಸಿದರೂ ಶನಿವಾರ ರಾತ್ರಿ ತನಕ ಯೋಧನ ಕುರಿತು ಯಾವುದೇ ಸುಳಿವು ಲಭ್ಯವಾಗಿಲ್ಲ. ಈ ವಿಷಯ ದೃಢಪಡಿಸಿದ ಪೊಲೀಸ್ ಉಪಾಧೀಕ್ಷಕರು, ಯೋಧ ಬಳಸಿದ್ದಾನೆ ಎನ್ನಲಾದ ಬೂಟು ಹಾಗೂ ಸಾಕ್ಸ್ ಸಿಕ್ಕಿದ್ದು ಬಿಟ್ಟರೆ ಇನ್ನಾವುದೇ ಸುಳಿವು ಲಭ್ಯವಾಗಲಿಲ್ಲ.
ಬುಧವಾರ ರಾತ್ರಿ ಮೂತ್ರ ವಿಸರ್ಜನೆಗೆ ಹೋಗಿ ಬರುವುದಾಗಿ ಹೇಳಿ ಹೋದ ಯುವಕ ಕ್ಷಣಾರ್ಧದಲ್ಲಿ ನಾಪತ್ತೆಯಾದ ಕುರಿತು ಬನವಾಸಿ ಠಾಣೆಯಲ್ಲಿ ದೂರು ದಾಖಲಾಗಿತ್ತು. ಯೋಧನ ಹುಡುಕಾಟಕ್ಕೆ ಶ್ವಾನದಳವನ್ನು ಶನಿವಾರ ಕರೆಸಿದರೂ ಪ್ರಯೋಜನವಾಗಲಿಲ್ಲವೆಂದು ತಿಳಿಸಿದ್ದಾರೆ. ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಶಿರಸಿ ತಾಲೂಕಿನ ದಾಸನಕೊಪ್ಪ ತಪಾಸಣಾ ಚೌಕಿಯಲ್ಲಿ ಉತ್ತರ ಪ್ರದೇಶದ 49ನೇ ಬೆಟಾಲಿಯನ್ ಕಾನ್ಸ್ಟೇಬಲ್ ಕೆ.ಗಣೇಶ ಕಾಣೆಯಾಗಿದ್ದಾನೆ. ಈತ ರೈಫಲ್ ಸಹಿತ ಸೇನಾ ಪಡೆಯ ಸಮವಸ್ತ್ರದಲ್ಲಿ ನಾಪತ್ತೆ ಆಗಿದ್ದು, ಈತ ಸ್ವಗ್ರಾಮ ತಲುಪಿದ ಕುರಿತೂ ಯಾವುದೇ ಸಂದೇಶ ಸಿಕ್ಕಿಲ್ಲ ಎನ್ನಲಾಗಿದೆ. ಅರೆಸೇನಾ ಪಡೆಯ ವಿಂಗ್ ಕಮಾಂಡರ್ ಕೂಡ ಘಟನಾ ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ
Gobi Manchurian ಬ್ಯಾನ್ ಎಫೆಕ್ಟ್: ಚಾಟ್ಸ್ ಮಾರಾಟ ಕುಸಿತ
Book Brahma ಸ್ವಾತಂತ್ರ್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
MUST WATCH
ಹೊಸ ಸೇರ್ಪಡೆ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ