ಬಸ್‌ ಬಿಟ್ಟು ತೊಂದ್ರೆ ಕೊಡಬೇಡಿ ಎಂದು ಸಾರಿಗೆ ನಿಗಮಕ್ಕೆ ಪತ್ರ


Team Udayavani, May 25, 2018, 6:45 AM IST

ban25051807medn.jpg

ಬೆಂಗಳೂರು: ಜನರ ಅನುಕೂಲಕ್ಕಾಗಿ ತಮ್ಮ ಊರಿಗೊಂದು ಬಸ್‌ ಬಿಡುವಂತೆ ಮನವಿ ಸಲ್ಲಿಸುವುದು ಮಾಮೂಲು. ಆದರೆ, ಇಲ್ಲೊಬ್ಬರು ಸರ್ಕಾರಿ ಬಸ್‌ಗಳಿಂದಲೇ ತಮಗೆ ತೊಂದರೆ ಆಗುತ್ತಿದೆ. ಆದ್ದರಿಂದ “ಬಸ್‌ಗಳನ್ನು ಹಾಕಿ, ಅನಗತ್ಯವಾಗಿ ತೊಂದರೆ ಕೊಡಬೇಡಿ’ ಎಂದು ಕೆಎಸ್‌ಆರ್‌ಟಿಸಿಗೆ ಪತ್ರ ಬರೆದಿದ್ದಾರೆ!

ಅಷ್ಟೇ ಅಲ್ಲ, ನಿಗಮದ ಈ ಅನಗತ್ಯ ತೊಂದರೆಯಿಂದ ತಮ್ಮ ಆದಾಯದಲ್ಲಿ ಕುಸಿತ ಕಂಡುಬರುತ್ತಿದೆ. ಇದರಿಂದ ಹೊರಬರಲು 15 ಕೋಟಿ ರೂ. ಬಡ್ಡಿರಹಿತ ಸಾಲ ನೀಡುವಂತೆಯೂ ಮನವಿ ಮಾಡಿದ್ದಾರೆ.

ನಾಲ್ಕೈದು ವರ್ಷಗಳಿಂದ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ)ವು ಹೊಸ ಬಸ್‌ ಗಳನ್ನು ಖರೀದಿಸುತ್ತಿದೆ. ಆದರೆ, ಅವುಗಳನ್ನು ರಾಷ್ಟ್ರೀಯ ಮಾರ್ಗಗಳಲ್ಲಿ ಬಿಡದೆ, ಉತ್ತಮವಾಗಿ ಸಾರಿಗೆ ನೀಡುತ್ತಿರುವ ಗಜಾನನ ಮೋಟಾರ್‌ ಟ್ರಾನ್ಸ್‌ಪೋರ್ಟ್ ಕಂಪನಿ ಬಸ್‌ಗಳ ಹಿಂದೆ-ಮುಂದೆ ಪರವಾನಗಿ ಇಲ್ಲದೆ, ಕೆಎಸ್‌ಆರ್‌ಟಿಸಿ ಬಸ್‌ಗಳನ್ನು
ಕಾರ್ಯಾಚರಣೆ ಮಾಡಿಸುತ್ತಿದ್ದಾರೆ.

ಇದರಿಂದ ತಮ್ಮ ಸಂಸ್ಥೆಗೆ ಸಾಕಷ್ಟು ನಷ್ಟವಾಗುತ್ತಿದೆ. ಕಂಪನಿ ನೌಕರರಿಗೆ ಸಮರ್ಪಕ ಸೌಲಭ್ಯ ಕಲ್ಪಿಸಲು ಆಗುತ್ತಿಲ್ಲ
ಎಂದು ಕಂಪನಿ ಮಾಲೀಕರು ಅಲವತ್ತುಕೊಂಡಿದ್ದಾರೆ.

ಸ್ವಾತಂತ್ರ್ಯಪೂರ್ವ ಸಂಸ್ಥೆ: ಗಜಾನನ ಮೋಟಾರ್‌ ಟ್ರಾನ್ಸ್‌ಪೋರ್ಟ್ 1944ರಲ್ಲೇ ಪ್ರಾರಂಭವಾಗಿದ್ದು, ಅಂದಿನಿಂದ ಇಂದಿನವರೆಗೂ ಕಾರ್ಮಿಕರಿಗೆ ಎಲ್ಲ ಸೌಲಭ್ಯಗಳನ್ನು ಒದಗಿಸುತ್ತಾ ಬಂದಿದೆ.

ಸಂಸ್ಥೆಯಲ್ಲಿ 370 ಜನ ಕಾರ್ಮಿಕರಿದ್ದು, 103 ವಾಹನಗಳಿಗೆ ಪರವಾನಗಿ ಪಡೆಯಲಾಗಿದೆ. ರಾಜ್ಯದ ಎಂಟು ಜಿಲ್ಲೆಗಳಲ್ಲಿ ಸೇವೆ ಕಲ್ಪಿಸಲಾಗುತ್ತಿದೆ. ಶಾಲಾ ಮಕ್ಕಳು, ಹಿರಿಯ ನಾಗರಿಕರಿಗೆ ರಿಯಾಯ್ತಿ ದರದಲ್ಲಿ ಸೇವೆ ಕೂಡ
ನೀಡಲಾಗುತ್ತಿದೆ.

ತಾರತಮ್ಯವೇಕೆ?: ಇತ್ತೀಚಿನ ದಿನಗಳಲ್ಲಿ ಕೆಎಸ್‌ಆರ್‌ಟಿಸಿ ಹೊಸ ಬಸ್‌ಗಳನ್ನು ಖರೀದಿಸಿ, ಅವುಗಳನ್ನು ಅನಗತ್ಯವಾಗಿ ತಮ್ಮ ಬಸ್‌ಗಳ ಮಾರ್ಗದಲ್ಲೇ ಕಾರ್ಯಾಚರಣೆ ಮಾಡಲಾಗುತ್ತಿದೆ. ಅಷ್ಟಕ್ಕೂ ಹೆಚ್ಚು ಬೇಡಿಕೆ ಇರುವ ಕಡೆಗೆ ನಿಗಮವು ಬಸ್‌ ಸೇವೆ ನೀಡುತ್ತಿಲ್ಲ. ಅಷ್ಟೇ ಯಾಕೆ, ಶಿವಮೊಗ್ಗ-ಆನವಟ್ಟಿ ಮಾರ್ಗದಲ್ಲಿ ಪ್ರಯಾಣಿಕರ ಒತ್ತಡ ಇದ್ದರೂ ಬಸ್‌ ಸೇವೆ ನೀಡುತ್ತಿಲ್ಲ. ಉಳಿದ ಟ್ರಾನ್ಸ್‌ಪೋರ್ಟ್  ಕಂಪನಿಗಳ ಹಿಂದೆ-ಮುಂದೆ ಒಂದೇ ಒಂದು ಸರ್ಕಾರಿ ಬಸ್‌ ಸೇವೆ ಇಲ್ಲ. ಕೆಲ ತಿಂಗಳ ಹಿಂದೆ ಶಿವಮೊಗ್ಗ ಸಾರಿಗೆ ಪ್ರಾಧಿಕಾರವು 50 ಹೊಸ ಪರವಾನಗಿಗಳನ್ನು ಕೆಎಸ್‌ಆರ್‌ಟಿಸಿಗೆ ನೀಡಿದೆ. ಅದರಲ್ಲಿ 20ಕ್ಕೂ ಹೆಚ್ಚು ನಮ್ಮ ಕಂಪನಿಯ ಬಸ್‌ಗಳ ಹಿಂದೆ-ಮುಂದೆಯೇ ಕಾರ್ಯಾಚರಣೆ ಮಾಡುತ್ತವೆ. ಈ ತಾರತಮ್ಯ ಯಾಕೆ ಎಂದು ಕಂಪನಿ ಮಾಲೀಕರು ಪತ್ರದಲ್ಲಿ ಪ್ರಶ್ನಿಸಿದ್ದಾರೆ.

ಈ ಧೋರಣೆಯಿಂದ ತಮಗೆ ಆದಾಯ ನಷ್ಟವಾಗುತ್ತಿದ್ದು, ಹೊಸ ಬಸ್‌ಗಳ ಸಾಲ ಮರುಪಾವತಿಯೂ ಕಷ್ಟವಾಗುತ್ತಿದೆ. ಆದ್ದರಿಂದ 15 ಕೋಟಿ ರೂ. ಬಡ್ಡಿರಹಿತ ಸಾಲವನ್ನು ನೀಡಿದರೆ, 2-3 ವರ್ಷಗಳಲ್ಲಿ ಮರುಪಾವತಿಸಲಾಗುವುದು. ಇಲ್ಲವೇ ಸಂಸ್ಥೆಯನ್ನು ವಶಕ್ಕೆ ಪಡೆಯುವುದಾದರೆ, ಅದಕ್ಕೂ ತಾವು ಸಿದಟಛಿ ಎಂದು ವಿವರಿಸಿದ್ದಾರೆ.

ನಿಗಮದ ಉತ್ತರ
ಕೆಎಸ್‌ಆರ್‌ಟಿಸಿ ಇದಕ್ಕೆ ಪ್ರತಿಯಾಗಿ ಪತ್ರ ಬರೆದಿದ್ದು, ಕೆಎಸ್‌ಆರ್‌ಟಿಸಿಯು ಪ್ರಯಾಣಿಕರ ಬೇಡಿಕೆಗೆ ಅನುಗುಣವಾಗಿ ಮತ್ತು ಅವರ ಹಿತದೃಷ್ಟಿಯಿಂದ ವಿವಿಧ ಮಾರ್ಗಗಳಲ್ಲಿ ಸಾರಿಗೆ ಸೇವೆ ಒದಗಿಸಲಾಗಿದೆ. ಈ ಹಿನ್ನೆಲೆಯಲ್ಲಿ ನಿಗಮ ಪಡೆದ ಹೊಸ ಬಸ್‌ ಪರವಾನಗಿಗಳನ್ನು ಉಪಯೋಗಿಸಬಾರದು ಎಂದು ಹೇಳುವುದು ಸೂಕ್ತವಲ್ಲ. ಅಷ್ಟಕ್ಕೂ ಸಾರಿಗೆ ಪ್ರಾಧಿಕಾರದಿಂದ ಅಧಿಕೃತವಾಗಿ ಪಡೆದ ಪರವಾನಗಿಗಳಾಗಿದೆ. ಅಲ್ಲದೆ, ಬಡ್ಡಿರಹಿತ ಸಾಲ ನೀಡುವ ಮತ್ತು ತಮ್ಮ ಸಂಸ್ಥೆಯನ್ನು ಕೆಎಸ್‌ಆರ್‌ಟಿಸಿಯು ಸ್ವಾಧೀನ ಪಡಿಸಿಕೊಳ್ಳಲು ನಿಯಮಾನುಸಾರ ಯಾವುದೇ ಅವಕಾಶ ಇಲ್ಲ ಎಂದೂ ನಿಗಮವು ಸ್ಪಷ್ಟಪಡಿಸಿದೆ.

– ವಿಜಯಕುಮಾರ್‌ ಚಂದರಗಿ

ಟಾಪ್ ನ್ಯೂಸ್

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.