Arrested: ನೌಕರಿ, ಪಿಂಚಣಿ ಆಸೆ ತೋರಿಸಿ 60 ಮಂದಿಗೆ 15 ಲಕ ವಂಚಿಸಿದ್ದ ಇಬ್ದರ ಸೆರೆ
Team Udayavani, Feb 7, 2024, 10:49 AM IST
ಬೆಂಗಳೂರು: ವಿಧವೆಯರು, ಗೃಹಿಣಿಯರು ಹಾಗೂ ನಿರುದ್ಯೋಗಿ ಯುವಕರನ್ನು ಗುರಿಯಾಗಿಸಿಕೊಂಡು ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಕೆಲಸ ಹಾಗೂ ಸರ್ಕಾರದ ವಿವಿಧ ಸೌಲಭ್ಯ ಕೊಡಿಸುವುದಾಗಿ ನಂಬಿಸಿ ಬರೋಬ್ಬರಿ 60 ಮಂದಿಯಿಂದ ಲಕ್ಷಾಂತರ ರೂ. ದೋಚಿದ ಇಬ್ಬರು ವಂಚಕರು ಉತ್ತರ ವಿಭಾಗದ ಸಿಇಎನ್ ಠಾಣೆ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಶ್ರೀನಗರ ನಿವಾಸಿ ದೀಪಕ್ (22) ಮತ್ತು ವಿದ್ಯಾರಣ್ಯಪುರ ನಿವಾಸಿ ಹರೀಶ್ (21) ಬಂಧಿತರು. ಆರೋಪಿಗಳು ಇತ್ತೀಚೆಗೆ ಮಹಿಳೆಯೊಬ್ಬರಿಗೆ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಕಂಪ್ಯೂಟರ್ ಆಪರೇಟರ್ ಕೆಲಸ ಕೊಡಿಸುವುದಾಗಿ ನಂಬಿಸಿ 8 ಸಾವಿರ ರೂ. ಪಡೆದು ವಂಚಿಸಿದ್ದರು.
ಮತ್ತೂಂದೆಡೆ ಆರೋಪಿಗಳ ವಿಚಾರಣೆಯಲ್ಲಿ ಬರೋಬ್ಬರಿ 60 ಮಂದಿಗೆ 15 ಲಕ್ಷ ರೂ. ವಂಚಿಸಿರುವುದು ಪತ್ತೆಯಾಗಿದೆ. ಆದರೆ, ಈ ರೀತಿ ವಂಚನೆಗೊಳಪಟ್ಟವರು ಇದುವರೆಗೂ ಯಾವುದೇ ದೂರು ದಾಖಲಿಸಿಲ್ಲ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಆರೋಪಿಗಳಿಬ್ಬರು ಎಸ್ಎಸ್ಎಲ್ಸಿ ಓದಿದ್ದು, ಯಾವುದೇ ಕೆಲಸಕ್ಕೆ ಹೋಗುತ್ತಿರಲಿಲ್ಲ. ಈ ಮಧ್ಯೆ ಕೆಲವರು ಉದ್ಯೋಗ ಕೊಡಿಸುವುದಾಗಿ ವಂಚಿಸುತ್ತಿರುವುದನ್ನು ಕೇಳಿ, ಈ ಅಪರಾಧ ಕೃತ್ಯವೆಸಗುತ್ತಿದ್ದರು. ಪರಿಚಯಸ್ಥರಿಗೆ ಬಿಬಿಎಂಪಿ ಕಚೇರಿಯಲ್ಲಿ ಕೆಲಸ, ಸರ್ಕಾರದ ಸೌಲಭ್ಯ ಕೊಡಿಸುತ್ತೇವೆ ಎಂದು ಹೇಳಿ, ತಾವೇ ಪ್ರಚಾರ ಮಾಡುತ್ತಿದ್ದರು. ಬಳಿಕ ಚೈಲ್ಲಿಂಕ್ ಮಾದರಿಯಲ್ಲಿ ನಂಬರ್ ಪಡೆದು ವಿಧವೆಯರಿಗೆ ವಿಧವಾ ವೇತನ, ಕೆಲ ಹಿರಿಯರಿಗೆ ನಿಮ್ಮ ಮಕ್ಕಳಿಗೆ ಉದ್ಯೋಗ ಕೊಡಿಸುತ್ತೇವೆ, ಯುವಕರಿಗೆ ಸಬ್ಸಿಡಿಯಲ್ಲಿ ಕಾರು ಕೊಡಿಸುತ್ತೇವೆ ಅಥವಾ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಕೆಲಸ ಕೊಡಿಸುತ್ತೇವೆ ಎಂದು ನಂಬಿಸುತ್ತಿದ್ದರು. ಎಂದು ಆಯುಕ್ತರು ಹೇಳಿದರು.
ಪ್ರಕರಣ ದೂರುದಾರ ಮಹಿಳೆಯಿಂದ ಆರೋಪಿಗಳು ಹೋಟೆಲ್ವೊಂದರ ಸಪ್ಲೆಯರ್ ಖಾತೆಗೆ ಹಣ ವರ್ಗಾವಣೆ ಮಾಡಿಸಿಕೊಂಡು ವಂಚಿಸಿದ್ದಾರೆ. ಹೀಗೆ 2023ರ ಆಗಸ್ಟ್ನಿಂದ ಇದುವರೆಗೂ 60 ಮಂದಿಗೆ 15 ಲಕ್ಷ ರೂ. ವಂಚಿಸಿದ್ದಾರೆ ಎಂದು ಪೊಲೀಸ್ ಆಯುಕ್ತರು ಮಾಹಿತಿ ನೀಡಿದರು.
ಉತ್ತರ ವಿಭಾಗದ ಸಿಇಎನ್ ಠಾಣೆಯ ಇನ್ಸ್ಪೆಕ್ಟರ್ ಎಸ್.ಶಿವರತ್ನ ನೇತೃತ್ವದಲ್ಲಿ ಪಿಎಸ್ಐ ರೋಹಿಣಿ ಹಾಗೂ ಇತರೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಹೆಚ್ಚುವರಿ ಪೊಲೀಸ್ ಆಯುಕ್ತ ಸತೀಶ್ ಕುಮಾರ್, ರಮಣ್ ಗುಪ್ತಾ, ಸಿಸಿಬಿ ಮುಖ್ಯಸ್ಥ ಚಂದ್ರಗುಪ್ತ, ಉತ್ತರ ವಿಭಾಗ ಡಿಸಿಪಿ ಸೈದುಲು ಅಡಾವತ್ ಹಾಗೂ ಇತರೆ ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ
ಚಾಕೋಲೆಟ್ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ
Bengaluru: ಚೆಕ್ ದುರ್ಬಳಕೆ; ಕ್ಯಾಷಿಯರ್, ಎಲ್ಐಸಿ ಏಜೆಂಟ್ಗೆ ಜೈಲು
MUST WATCH
ಹೊಸ ಸೇರ್ಪಡೆ
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್