![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಪೊಲೀಸ್ ಬಲೆಗೆ ಬಿದ್ದ ಗಾಂಜಾ ವ್ಯಾಪಾರಿ
Team Udayavani, Aug 23, 2018, 10:56 AM IST
![blore-2.jpg](https://www.udayavani.com/wp-content/uploads/2018/08/23/blore-2-332x465.jpg)
ಬೆಂಗಳೂರು: ರಾಜಧಾನಿ “ಉಡ್ತಾ ಬೆಂಗಳೂರು’ ಆಗುತ್ತಿದೆ ಎಂಬ ಆರೋಪದ ಬೆನ್ನಲ್ಲೇ ನಗರ ಪೊಲೀಸರು ಮಾದಕ ವಸ್ತು ಮಾರಾಟಗಾರು ಹಾಗೂ ಗ್ರಾಹಕರ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ. ಪೊಲೀಸ್ ಆಯುಕ್ತ ಟಿ.ಸುನಿಲ್ ಕುಮಾರ್ ಸೂಚನೆ ಮೇರೆಗೆ ಮಫಿಯಲ್ಲಿ ವಿಶೇಷ ಕಾರ್ಯಾಚರಣೆ ನಡೆಸುತ್ತಿರುವ ಆಗ್ನೇಯ ವಿಭಾಗದ ಪೊಲೀಸರು ತಮಿಳುನಾಡು ಮೂಲದ ಮಾದಕ ವಸ್ತು ಗಾಂಜಾ ಸರಬರಾಜುದಾರರನ್ನು ಬಂಧಿಸಿದ್ದಾರೆ.
ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಶ್ರೀನಿವಾಸ್ (42) ಬಂಧಿತ. ಆರೋಪಿ ಆಂಧ್ರಪ್ರದೇಶ ಮತ್ತು ಚಿಕ್ಕಬಳ್ಳಾಪುರದಿಂದ ಕೆಜಿಗಟ್ಟಲೆ ಗಾಂಜಾ ತಂದು ನಗರದಲ್ಲಿ ಮಾರಾಟ ಮಾಡುತ್ತಿದ್ದ. ಇತ್ತೀಚೆಗೆ ಪರಪ್ಪನ ಅಗ್ರಹಾರದ ಗೋವಿಂದಶೆಟ್ಟಿಹಳ್ಳಿ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಹೊಸೂರಿನಲ್ಲಿ ಶ್ರೀನಿವಾಸ್ ವಾಸವಾಗಿದ್ದು, ಆಂಧ್ರಪ್ರದೇಶದ ಮಹಿಳೆ ಹಾಗೂ ಚಿಕ್ಕಬಳ್ಳಾಪುರ ಮೂಲದ ಒಬ್ಬ ವ್ಯಕ್ತಿ ಮೂಲಕ ಕಡಿಮೆ ಬೆಲೆಗೆ ಗಾಂಜಾ ಖರೀದಿಸುತ್ತಿದ್ದ. ಬಳಿಕ ಅದನ್ನು ಗೋಣಿಚೀಲದಲ್ಲಿ ತುಂಬಿಕೊಂಡು ಬಸ್ನಲ್ಲಿ ನಗರಕ್ಕೆ ಬರುತ್ತಿದ್ದ. ಗಾಂಜಾ ವಾಸನೆ ಬಾರದಂತೆ ಎಚ್ಚರಿಕೆ ವಹಿಸಿದ್ದ ಆರೋಪಿ ಈ ಚೀಲಗಳಲ್ಲಿ ಹೊಗೆಸೊಪ್ಪು ತುಂಬಿಕೊಂಡು ಯಾಮಾರಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಶ್ರೀನಿವಾಸ್ ವಿರುದ್ಧ ಕೊಲೆ ಆರೋಪ: 6 ವರ್ಷಗಳ ಹಿಂದೆ ಹೊಸೂರಿನ ಸಿಪ್ ಕಾಟ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮಹಿಳೆ ಕೊಲೆ ಪ್ರಕರಣದಲ್ಲಿ ಶ್ರೀನಿವಾಸ್ ಜೈಲು ಸೇರಿದ್ದ. ಜೈಲಿನಿಂದ ಬಿಡುಗಡೆಯಾಗಿ ಬಂದ ನಂತರ ಚಿಲ್ಲರೆ ಅಂಗಡಿ ನಡೆಸುತ್ತಿದ್ದ ಈತ, ದುಶ್ಚಟಗಳ ದಾಸನಾಗಿ, ಸಂಸಾರ ನಿರ್ವಹಣೆ ಮಾಡಲು ಹಣವಿಲ್ಲದೇ, ಗಾಂಜಾ ಮಾರಾಟ ದಂಧೆಯಲ್ಲಿ ತೊಡಗಿದ್ದಾನೆ. ನಗರದಲ್ಲಿ ಈತನಿಂದ ಗಾಂಜಾ ಖರೀದಿಸುತ್ತಿದ್ದ ಇತರೆ ಮಂದಿಯ ಬಗ್ಗೆಯೂ ಮಾಹಿತಿ ನೀಡಿದ್ದು, ಕಾರ್ಯಾಚರಣೆ ಮುಂದುವರಿದಿದೆ ಎಂದು
ಪೊಲೀಸರು ತಿಳಿಸಿದ್ದಾರೆ.
ನಗರದ ಹಲವಡೆ ಮಾಹಿತಿ ಪೆಟಿಗೆ
ಮಾದಕ ವಸ್ತು ದಂಧೆಕೋರರ ಬಗ್ಗೆ ಮಾಹಿತಿ ಸಂಗ್ರಹಿಸಲು ವೈಟ್ಫೀಲ್ಡ್ ವಲಯದ ಎಲ್ಲ ಠಾಣೆಗಳ ವ್ಯಾಪ್ತಿಗಳಲ್ಲಿ ಸುಮಾರು 35 ಮಾಹಿತಿ ಪೆಟ್ಟಿಗೆಗಳನ್ನು ಅಳವಡಿಸಲಾಗಿದೆ. ಶಾಲಾ-ಕಾಲೇಜುಗಳು, ಪ್ರತಿಷ್ಠಿತ ಕಂಪನಿಗಳ ಕಚೇರಿ ಬಳಿ ಮಾಹಿತಿ ಪೆಟ್ಟಿಗೆಗಳನ್ನು ಇರಿಸಿದ್ದು, ಮಾಹಿತಿ ನೀಡುವವರು ತಮ್ಮ ವೈಯಕ್ತಿಕ ವಿಳಾಸ ಅಥವಾ ಸಂಪರ್ಕ ಸಂಖ್ಯೆ ನಮೂದಿಸುವ ಅಗತ್ಯವಿಲ್ಲ. ಮಾರಾಟಗಾರ ಹಾಗೂ ಸ್ಥಳದ ಬಗ್ಗೆ ಮಾಹಿತಿ ನೀಡಿದರೆ ಸಾಕು. ಇದನ್ನೇ ಆಧಾರವಾಗಿಟ್ಟುಕೊಂಡು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಉಳಿದವರ ಪತ್ತೆಗಾಗಿ ವಿಶೇಷ ತಂಬಂಧಿತ ಆರೋಪಿಗಳಾದ ಸಾದಿಕ್, ಸಯ್ಯದ್ ಹಾಗೂ ಇತರೆ 12 ಮಂದಿ ಆರೋಪಿಗಳು ನಗರದಲ್ಲಿ ಇತರೆಡೆ ಅವ್ಯಾಹತವಾಗಿ ಮಾದಕ ವಸ್ತು ಮಾರಾಟ ಮಾಡುವ ಸುಮಾರು 35 ಮಂದಿಯ ಬಗ್ಗೆ ಮಾಹಿತಿ ನೀಡಿದ್ದರು. ಆದರೆ, ಆ ಆರೋಪಿಗಳು ಪೊಲೀಸರು ನಮ್ಮ ಮೇಲೂ ಗುಂಡು ಹಾರಿಸುತ್ತಾರೆ ಎಂಬ ಭಯದಲ್ಲಿ ನೆರೆ ರಾಜ್ಯಗಳಲ್ಲಿ ತಲೆಮರೆಸಿಕೊಂಡಿದ್ದಾರೆ. ಇವರ ಪತ್ತೆಗಾಗಿ ವಿಶೇಷ ತಂಡ ರಚಿಸಲಾಗಿದೆ ಎಂದು ಪೊಲೀಸರು ತಿಳಿಸಿದರು.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ](https://www.udayavani.com/wp-content/uploads/2024/07/8-20-150x90.jpg)
Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ
![Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್ನಲ್ಲೇ ಚಾಕು, ಡ್ಯಾಗರ್ ಹಿಡಿದು ಹೊಡೆದಾಟ!](https://www.udayavani.com/wp-content/uploads/2024/07/7-21-150x90.jpg)
Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್ನಲ್ಲೇ ಚಾಕು, ಡ್ಯಾಗರ್ ಹಿಡಿದು ಹೊಡೆದಾಟ!
![ಸ್ನೇಹಿತನ ಪತ್ನಿಯ ಕ್ಯಾನ್ಸರ್ ಚಿಕಿತ್ಸೆಗಾಗಿ ಬೈಕ್ ಕಳ್ಳತನಕ್ಕಿಳಿದ ಕುಚುಕು ಗೆಳೆಯ!](https://www.udayavani.com/wp-content/uploads/2024/07/5-24-150x90.jpg)
ಸ್ನೇಹಿತನ ಪತ್ನಿಯ ಕ್ಯಾನ್ಸರ್ ಚಿಕಿತ್ಸೆಗಾಗಿ ಬೈಕ್ ಕಳ್ಳತನಕ್ಕಿಳಿದ ಕುಚುಕು ಗೆಳೆಯ!
![Shivakumar](https://www.udayavani.com/wp-content/uploads/2024/07/Shivakumar-150x90.jpg)
Bengaluru: ಅಧಿವೇಶನದ ಬಳಿಕ ಕಾವೇರಿ ನೀರಿನ ದರ ಪರಿಷ್ಕರಣೆ: ಡಿ.ಕೆ.ಶಿವಕುಮಾರ್
![Bengaluru: ಕೋರ್ಟ್ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ](https://www.udayavani.com/wp-content/uploads/2024/07/8-19-150x90.jpg)
Bengaluru: ಕೋರ್ಟ್ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.