ಸಂಸದ ಮುನಿಯಪ್ಪ ವಿರುದ್ಧ ದಲಿತ ಮುಖಂಡರ ಸಭೆ
Team Udayavani, Oct 1, 2018, 6:40 AM IST
ಬೆಂಗಳೂರು: ಕೋಲಾರ ಸಂಸದ ಹಾಗೂ ಕೇಂದ್ರದ ಮಾಜಿ ಸಚಿವ ಕೆ.ಎಚ್.ಮುನಿಯಪ್ಪ ವಿರುದ್ಧ ಸ್ಥಳೀಯ ದಲಿತ ಮುಖಂಡರು ಸಭೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಗರದ ಖಾಸಗಿ ಹೊಟೇಲ್ನಲ್ಲಿ ಭಾನುವಾರ ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ದಲಿತ ನಾಯಕರು ಸಭೆ ನಡೆಸಿ, ಕೆ.ಎಚ್. ಮುನಿಯಪ್ಪ 27 ವರ್ಷಗಳಿಂದ ಲೋಕಸಭೆ ಸದಸ್ಯರಾಗಿದ್ದರೂ, ದಲಿತ ಸಮುದಾಯಕ್ಕೆ ಯಾವುದೇ ಅನುಕೂಲ ಮಾಡಿಲ್ಲ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಮುನಿಯಪ್ಪ ಅವರನ್ನು ಸೋಲಿಸಲು ಮುನಿಯಪ್ಪ ಹಠಾವೋ ಕೋಲಾರ ಬಚಾವೊ ಎಂಬ ಘೋಷ ವಾಕ್ಯದಡಿ ಕಾರ್ಯತಂತ್ರ ರೂಪಿಸಲು ಸಭೆಯಲ್ಲಿ ಚರ್ಚಿಸಲಾಯಿತು ಎಂದು ಹೇಳಲಾಗಿದೆ. ಮುಖಂಡರಾದ ಸಿ.ಎಂ. ಮುನಿಯಪ್ಪ, ಟಿ. ವಿಜಯಕುಮಾರ್, ಬಾಲಾಜಿ ಚೆನ್ನಯ್ಯ, ಜೆ. ಶ್ರೀನಿವಾಸ್, ಎಂ.ಶ್ರೀನಿವಾಸನ್ ಹಾಜರಿದ್ದರು ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pen Drive Case; ಪ್ರಜ್ವಲ್ ರೇವಣ್ಣ ವಿರುದ್ಧ ಲುಕ್ಔಟ್ ನೋಟಿಸ್ ಹೊರಡಿಸಿದ ಎಸ್ಐಟಿ
Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ
Lok Sabha Election: ಕಾಂಗ್ರೆಸ್ ಅಭ್ಯರ್ಥಿಗೆ ಸೋಲಿನ ಭೀತಿ: ಗಾಯತ್ರಿ ಸಿದ್ದೇಶ್ವರ
Shivamogga: ಕಚೇರಿ ಮುಂದೆ ವಾಮಾಚಾರ… ಆಕ್ರೋಶ ಹೊರಹಾಕಿದ ಈಶ್ವರಪ್ಪ
ಬೆನಕಟ್ಟಿ: SC/ST ಯ 200ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ