ಪಾಕ್‌ ನಂಟಿನ ವಿಚಾರಣೆ ವೇಳೆ ಬೆಳಕಿಗೆ ಬಂತು ಮದುವೆ ಪ್ರಸಂಗ


Team Udayavani, May 28, 2017, 12:05 PM IST

pak-investigation.jpg

ಬೆಂಗಳೂರು: ನಗರದಲ್ಲಿ ಅಕ್ರಮವಾಗಿ ನೆಲೆಸಿದ್ದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಕೇರಳ ಮೂಲದ ಶಿಹಾಬ್‌ ಮತ್ತು ಪಾಕಿಸ್ತಾನ ಪ್ರಜೆಗಳ ವಿಚಾರಣೆ ವೇಳೆ ಮತ್ತೂಂದು “ಮದುವೆ ಪ್ರಸಂಗ’ ಬೆಳಕಿಗೆ ಬಂದಿದೆ. ಪಾಕಿಸ್ತಾನದ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದ ಕೇರಳದ ಮೊಹಮದ್‌ ಶಿಹಾಬ್‌ಗ ಈ ಮೊದಲು ಕೇರಳದಲ್ಲಿ ಯುವತಿಯೊಬ್ಬಳನ್ನು ವಿವಾಹವಾಗಿದ್ದ ಎಂಬುದು ಗೊತ್ತಾಗಿದೆ. 

ಕೇಂದ್ರ ತನಿಖಾ ಸಂಸ್ಥೆಗಳ ಜತೆಗೆ ಕೇರಳ ಪೊಲೀಸರು ಕೂಡ ಬೆಂಗಳೂರಿಗೆ ಧಾವಿಸಿ ವಿಚಾರಣೆ ನಡೆಸುತ್ತಿದ್ದು, ಇವರೊಂದಿಗೆ ಶಿಹಾಬ್‌ ಸಹೋದರ ಶಿಬ್ಲಿನ್‌ ಕೂಡ ಕೇರಳ ಪೊಲೀಸರ ಜತೆಗೆ ಬೆಂಗಳೂರಿಗೆ ಬಂದಿದ್ದಾನೆ. ಅಲ್ಲದೇ ಪೊಲೀಸರ ವಿಚಾರಣೆಗೆ ಸಹಕಾರ ನೀಡುತ್ತಿರುವ ಆತ, ಸಹೋದರನ ಮತ್ತೂಂದು ಮದುವೆ ಸುದ್ದಿಯನ್ನೂ ಹೊರಹಾಕಿದ್ದಾನೆ.

ಕೇರಳದಿಂದ ಖತಾರ್‌ಗೆ ತೆರಳಿದ್ದ ಮೊಹಮದ್‌ ಶಿಹಾಬ್‌ ಪಾಕಿಸ್ತಾನದ ನಜ್ಮಾ ಅವರನ್ನು ಪ್ರೀತಿಸಿ ವಿವಾಹವಾಗಿದ್ದ. ಇದಕ್ಕೂ ಮೊದಲು ಶಿಹಾಬ್‌ಗ 2013ರಲ್ಲೇ ಕೇರಳ ಮೂಲದ ಯುವತಿಯ ಜತೆ ಮದುವೆ ಆಗಿತ್ತು. ಮೊದಲ ಪತ್ನಿಗೆ ಹೆಣ್ಣು ಮಗು ಕೂಡ ಇದೆ. ಆದರೆ, ಖತಾರ್‌ನಲ್ಲಿ ಕೆಲಸಕ್ಕೆಂದು ತಂದೆಯ ಜತೆ ಹೋಗಿದ್ದ ಶಿಹಾಬ್‌, ತಂದೆ ಭಾರತಕ್ಕೆ ವಾಪಾಸಾದರೂ ಆತ ಮಾತ್ರ ಹಿಂದಿರುಗಲಿಲ್ಲ.

ಆಗ ಶಿಹಾಬ್‌ ಹಾಗೂ ಪಾಕಿಸ್ತಾನದ ಯುವತಿ ನಡುವೆ ಪ್ರೇಮಾಂಕುರವಾಗಿದ್ದು. ಮದುವೆ ಕೂಡ ಆಗಿದ್ದ. ಈ ವಿಚಾರ ಮನೆಯವರಿಗೆ ತಿಳಿದಿತ್ತು. ಬಳಿಕ ಕೇರಳಕ್ಕೆ ಬಂದು ಮೊದಲ ಪತ್ನಿಯಿಂದ ವಿಚ್ಛೇದ‌ನ ಪಡೆದುಕೊಂಡಿದ್ದ. ಆದರೆ, ಖತಾರ್‌ನಿಂದ ಬೆಂಗಳೂರಿಗೆ ಬಂದು ನೆಲೆಸಿರುವುದು ತಿಳಿದಿರಲಿಲ್ಲ. ಮಾಧ್ಯಮಗಳ ಮೂಲಕ ತಿಳಿಯಿತು ಎಂದು ಸಹೋದರ ಶಿಬ್ಲಿನ್‌ ಹೇಳಿರುವುದಾಗಿ ಪೊಲೀಸ್‌ ಮೂಲಗಳು ತಿಳಿಸಿವೆ.

ಪಾಕಿಸ್ತಾನದಿಂದ ಭಾರತಕ್ಕೆ ಆಗಮಿಸಿ ಇಲ್ಲಿನ ದಾಖಲೆಗಳನ್ನು ಸೃಷ್ಟಿಸಿಕೊಂಡು ಅಕ್ರಮವಾಗಿ ನೆಲೆಸಿದ್ದರು ಎನ್ನುವ ಆರೋಪದ ಮೇಲೆ ಸಿಸಿಬಿ ಪೊಲೀಸರು, ಕೇರಳದ ಮಹಮದ್‌ ಶಿಹಾಬ್‌ ಈತನ ಪತ್ನಿ ಪಾಕಿಸ್ತಾನದ ನಜ್ಮಾ, ಮಹಮದ್‌ ಖಾಸಿಫ್‌ ಮತ್ತು ಈತನ ಪತ್ನಿ ಝೈನಬ್‌ ಕಿರಣ್‌ ಅವರನ್ನು ಬಂಧಿಸಿದ್ದರು.

500 ರೂ.ಗೆ ಆಧಾರ್‌ ಕಾರ್ಡ್‌
ಆರೋಪಿಗಳು ನಕಲಿ ದಾಖಲೆಗಳನ್ನು ಕೊಟ್ಟು 500 ರೂಪಾಯಿಗೆ ಆಧಾರ ಕಾರ್ಡ್‌ ಪಡೆದುಕೊಂಡಿದ್ದಾರೆ. ಆಧಾರ್‌ ಪಡೆಯುವ ವೇಳೆ ಯಾವ ದಾಖಲೆಗಳನ್ನು ಕೊಟ್ಟಿದ್ದರು ಎಂಬ ಬಗ್ಗೆ ಆರೋಪಿಗಳು ಸರಿಯಾಗಿ ಉತ್ತರಿಸುತ್ತಿಲ್ಲ. ದಕ್ಷಿಣ ವಿಭಾಗದಲ್ಲೇ ಆಧಾರ್‌ ಮಾಡಿಸಿರುವುದು ಖಚಿತವಾಗಿದೆ. ಆದರೆ,ಯಾವ ಸೆಂಟರ್‌ನಲ್ಲಿ ಮಾಡಿಸಿದ್ದಾರೆ ಎನ್ನುವುದು ಗೊತ್ತಾಗುತ್ತಿಲ್ಲ ಎಂದು ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

mangalore international airport

Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ

ಬಿಗ್‌ಬಾಸ್‌ ವಿಜೇತ ಎಲ್ವಿಶ್‌ ಯಾದವ್‌ ವಿರುದ್ಧ ಅಕ್ರಮ ವರ್ಗಾವಣೆ ಕೇಸ್‌ ದಾಖಲಿಸಿದ ಇ.ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್‌ ಮನೆಗೆ ಕನ್ನ

Theft Case: ನಕಲಿ ಕೀ ಬಳಸಿ ಬ್ಯೂಟಿಷಿಯನ್‌ ಮನೆಗೆ ಕನ್ನ

Arrested: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ 9 ವರ್ಷ ಬಳಿಕ ಬಂಧನ

Arrested: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ 9 ವರ್ಷ ಬಳಿಕ ಬಂಧನ

Crime: ರೌಡಿಶೀಟರ್‌ನಿಂದ ಆಟೋ ಚಾಲಕನ ಹತ್ಯೆ

Crime: ರೌಡಿಶೀಟರ್‌ನಿಂದ ಆಟೋ ಚಾಲಕನ ಹತ್ಯೆ

Theft Case: ಕೆಲಸಕ್ಕಿದ್ದ ಮನೆಯಲ್ಲೇ 34 ಲಕ್ಷ ಒಡವೆ ಕದ್ದ ಕಳ್ಳಿ

Theft Case: ಕೆಲಸಕ್ಕಿದ್ದ ಮನೆಯಲ್ಲೇ 34 ಲಕ್ಷ ಒಡವೆ ಕದ್ದ ಕಳ್ಳಿ

Bengaluru: ನಗರದಲ್ಲಿ ಝೀರೋ ಬ್ಯಾಕ್ಟೀರಿಯ ಸಂಸ್ಕರಿಸಿದ ನೀರಿಗೆ ಭಾರಿ ಬೇಡಿಕೆ

Bengaluru: ನಗರದಲ್ಲಿ ಝೀರೋ ಬ್ಯಾಕ್ಟೀರಿಯ ಸಂಸ್ಕರಿಸಿದ ನೀರಿಗೆ ಭಾರಿ ಬೇಡಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

Mussoorie: ಭೀಕರ ರಸ್ತೆ ಅಪಘಾತ… 5 ವಿದ್ಯಾರ್ಥಿಗಳ ದುರಂತ ಅಂತ್ಯ, ಓರ್ವಳ ಸ್ಥಿತಿ ಗಂಭೀರ

mangalore international airport

Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

Pen drive case; ಪ್ರಜ್ವಲ್ ರೇವಣ್ಣ ಹಾಸನ ನಿವಾಸದಲ್ಲಿ ಎಸ್ಐಟಿ ಪರಿಶೀಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.