7 ಲ್ಯಾಪ್ಟಾಪ್, 7 ಮೊಬೈಲ್ಗಳಿದ್ದ ಬ್ಯಾಗ್ ಬಿಟ್ಟು ಪರಾರಿಯಾಗಿದ್ದ ಪ್ರಯಾಣಿಕ
ಬಸ್ನಲ್ಲಿ ತಪಾಸಣೆ ವೇಳೆ ಓಡಿ ಹೋದ ಸಂಶಯಾಸ್ಪದ ವ್ಯಕಿ
Team Udayavani, May 5, 2022, 9:38 AM IST
ಬೆಂಗಳೂರು: ಬಸ್ನಲ್ಲಿ ಲ್ಯಾಪ್ಟಾಪ್, ಮೊಬೈಲ್ ಗಳಿದ್ದ ವಸ್ತುಗಳಿದ್ದ ಬ್ಯಾಗ್ ಬಿಟ್ಟು ಪರಾರಿಯಾಗಿದ್ದ ಅನುಮಾನಾಸ್ಪದ ವ್ಯಕ್ತಿಯ ವಸ್ತುಗಳನ್ನು ಕೆಎಸ್ಆರ್ ಟಿಸಿ ನಿರ್ವಾಹಕ, ಪೊಲೀಸರಿಗೆ ಹಸ್ತಾಂತರಿಸುವ ಮೂಲಕ ಪ್ರಾಮಾಣಿಕತೆ ಮೆರೆದಿದ್ದಾರೆ.
ಬೆಂಗಳೂರು- ವೇಲೂರು ಮಾರ್ಗದ ಬಸ್ನಲ್ಲಿ ಭಾನುವಾರ ಮಧ್ಯಾಹ್ನ 2.30ರ ಸುಮಾರಿಗೆ ಈ ಘಟನೆ ನಡೆದಿದೆ. ನಿರ್ವಾಹಕ ಬಿ.ಸಿ. ಮಂಜುನಾಥ್, ಬಸ್ನಲ್ಲಿ ಅನುಮಾನಾಸ್ಪದ ವ್ಯಕ್ತಿ ಬಿಟ್ಟುಹೋದ ಏಳು ವಿವಿಧ ಕಂಪನಿಗಳ ಲ್ಯಾಪ್ಟಾಪ್ ಮತ್ತು ಏಳು ಮೊಬೈಲ್ಗಳನ್ನು ಕೆಎಸ್ಆರ್ಟಿಸಿ ಕೇಂದ್ರೀಯ ವಿಭಾಗೀಯ ನಿಯಂತ್ರಣಾಧಿಕಾರಿ ಸಮ್ಮುಖದಲ್ಲಿ ಬಸವನಗುಡಿ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.
ಬೆಂಗಳೂರಿನಿಂದ ವೇಲೂರು ಕಡೆಗೆ ಹೊರಟ ಬಸ್ (ಕೆಎ- 57 ಎಫ್- 985)ನಲ್ಲಿ ಲಾಲ್ಬಾಗ್ ಬಳಿ ಹತ್ತಿದ ವ್ಯಕ್ತಿಯ ನಡೆ ಅನುಮಾನಾಸ್ಪದವಾಗಿ ಕಂಡು ಬಂದಿತು. ಈ ವೇಳೆ ನಿರ್ವಾಹಕ ಮಂಜುನಾಥ್, ಪ್ರಯಾಣಿಕನ ಬ್ಯಾಗ್ ತಪಾಸಣೆಗೆ ಮುಂದಾಗಿದ್ದಾರೆ. ಇದಕ್ಕೆ ವಿರೋಧ ವ್ಯಕ್ತಪಡಿಸಿದ ವ್ಯಕ್ತಿ, ಮುಂದೆ ಮಡಿವಾಳದ ಬಳಿ ಪ್ರಯಾಣಿಕರ ಮಧ್ಯೆ ನುಸುಳಿ ಪರಾರಿಯಾಗಿದ್ದಾನೆ.
ಇದನ್ನೂ ಓದಿ:ಗರ್ಭಪಾತ ತೀರ್ಪು ಸೋರಿಕೆ: ಅಮೆರಿಕದಲ್ಲಿ ಭಾರೀ ಸಂಚಲನ
ಹಿಡಿಯಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ. ಆಗ ತಕ್ಷಣ ಈ ಬಗ್ಗೆ ನಿರ್ವಾಹಕ, ಘಟಕ ವ್ಯವಸ್ಥಾಪಕರ (ಡಿಪೋ- 6) ಗಮನಕ್ಕೆ ತಂದಿದ್ದಾರೆ. ನಂತರ ಅವರು ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ದೂರವಾಣಿ ಮೂಲಕ ಸುದ್ದಿ ಮುಟ್ಟಿಸಿ, ಬಸವನಗುಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಬಳಿಕ ಠಾಣೆಯ ಇನ್ಸ್ಪೆಕ್ಟರ್ ವಿಭಾಗೀಯ ಕಚೇರಿಗೆ ಆಗಮಿಸಿದ್ದು, ನಿರ್ವಾಹಕರ ಸಮ್ಮುಖದಲ್ಲಿ ಬ್ಯಾಗ್ ಹಸ್ತಾಂತರಿಸಲಾಯಿತು.
ಅಭಿನಂದನಾ ಪತ್ರ: ನಿರ್ವಾಹಕ ಮಂಜುನಾಥ್ ಅವರ ಸಮಯಪ್ರಜ್ಞೆಗೆ ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ. ಅನ್ಬುಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿ, ಅಭಿನಂದನಾ ಪತ್ರ ಪ್ರದಾನ ಮಾಡಿದ್ದಾರೆ. ಜತೆಗೆ ಮಂಜುನಾಥ್ ಸೇವೆ ಇತರರಿಗೆ ಮಾದರಿಯಾಗಿದ್ದು, ಇಂತಹ ಪ್ರಾಮಾಣಿಕ ಸಿಬ್ಬಂದಿಯಿಂದಲೇ ಸಂಸ್ಥೆಯು ವಿಶ್ವಾಸಾರ್ಹ ಸೇವೆಗೆ ಪಾತ್ರವಾಗಿದೆ ಎಂದು ಶ್ಲಾಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ