ಗಣರಾಜ್ಯೋತ್ಸವ ಮಹತ್ವದ ಅರಿವಿಲ್ಲದಿರುವುದು ಬೇಸರ


Team Udayavani, Jan 27, 2017, 11:30 AM IST

yaddi.jpg

ಬೆಂಗಳೂರು: “ದೇಶದ ಕಟ್ಟಕಡೆಯ ವ್ಯಕ್ತಿಗೂ ಅಭಿವ್ಯಕ್ತಿ ಮತ್ತು ವಾಕ್‌ ಸ್ವಾತಂತ್ರ್ಯ ತಂದುಕೊಟ್ಟ ಸಂವಿಧಾನ ಜಾರಿಗೆ ಬಂದಿರುವ ಗಣರಾಜ್ಯೋತ್ಸವದ ಕುರಿತು ಬಹುತೇಕ ಜನರಿಗೆ ಅರಿವೇ ಇಲ್ಲ,” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಬೇಸರ ವ್ಯಕ್ತಪಡಿಸಿದ್ದಾರೆ.

ಗಣರಾಜ್ಯೋತ್ಸವದ ಅಂಗವಾಗಿ ಬೆಂಗಳೂರಿನ ರಾಜಾಜಿನಗರ ಬಡಾವಣೆಯಲ್ಲಿ ಗುರುವಾರ ಆಯೋಜಿಸಲಾಗಿದ್ದ “ದೇಶ ಮೊದಲು ಧ್ವಜ ಮಿಗಿಲು’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಸಂವಿಧಾನವೇ ನಮ್ಮ ದೇಶದ ಧರ್ಮಗ್ರಂಥ. ಸಂವಿಧಾನದ ಆಶಯವನ್ನು  ಪಾಲಿಸಬೇಕಾಗಿರುವುದು ನಮ್ಮೆಲ್ಲರ ಆದ್ಯ ಕರ್ತವ್ಯ,” ಎಂದರು.

“ಇಂದು ಗಣರಾಜ್ಯೋತ್ಸವದ ಮಹತ್ವದ ಬಗ್ಗೆ ಬಹುತೇಕರಿಗೆ ಅರಿವಿಲ್ಲ. ಗಣರಾಜ್ಯೋತ್ಸವ ನಮಗೆ ಹೆಮ್ಮೆ ತರುವ ರಾಷ್ಟ್ರೀಯ ಹಬ್ಬ. ನಮ್ಮ ದೇಶದ ಜನ ಸಾಮಾನ್ಯರ ಹಕ್ಕುಗಳ ಬಗ್ಗೆ ಜಾಗೃತಿ ಉಂಟು ಮಾಡುವ ದಿನ. ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಇಂದು ಅಭಿವ್ಯಕ್ತಿ ಮತ್ತು ವಾಕ್‌ ಸ್ವಾತಂತ್ರ್ಯ ಇದ್ದರೆ ಅದಕ್ಕೆ ಸಂವಿಧಾನವೇ ಕಾರಣ. ಅದರ ದಿನಾಚರಣೆ ಬಗ್ಗೆ ಜನರಿಗೆ ಮಾಹಿತಿ ಇಲ್ಲದಾಗಿದೆ. ಗಣರಾಜ್ಯೋತ್ಸವ ದಿನ ಎಂದರೆ ಇದೊಂದು ರಜಾ ದಿನ ಎಂಬ ಭಾವನೆ ಬಂದಿದೆ,” ಎಂದು ವಿಷಾದ ವ್ಯಕ್ತಪಡಿಸಿದರು. 

ಆರ್‌ಎಸ್‌ಎಸ್‌ ಕಾರ್ಯಕರ್ತ  ಜಿ.ಆರ್‌.ಸಂತೋಷ್‌ ಅವರು ಬರೆದಿರುವ “ಧ್ವಜ ಎಂದರೆ ಬಟ್ಟೆಯಲ್ಲ’ ಎಂಬ ಕೃತಿಯ 3ನೇ ಆವೃತ್ತಿಯನ್ನು ಯಡಿಯೂರಪ್ಪ ಅವರು ಲೋಕಾರ್ಪಣೆ ಮಾಡಿದರು. ಸಂಗೀತಾ ಕಟ್ಟಿ ಸಂಗೀತ ನಿರ್ದೇಶನ ಮಾಡಿರುವ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಂದ ಪ್ರಶಂಸೆಗೆ ಪಾತ್ರವಾಗಿರುವ “ಜುಲೈ 22, 1947′  ಕನ್ನಡ ಚಲನಚಿತ್ರವನ್ನು ಈ ವೇಳೆ ಪ್ರದರ್ಶಿಸಲಾಯಿತು.

ಟಾಪ್ ನ್ಯೂಸ್

ಬೇಡಿಕೆಗಳ ಈಡೇರಿಕೆಗಾಗಿ ಪ್ರಾಮಾಣಿಕ, ಕ್ರಿಯಾಶೀಲವಾಗಿ ದುಡಿಯುವೆ: ರಘುಪತಿ ಭಟ್‌

ಬೇಡಿಕೆಗಳ ಈಡೇರಿಕೆಗಾಗಿ ಪ್ರಾಮಾಣಿಕ, ಕ್ರಿಯಾಶೀಲವಾಗಿ ದುಡಿಯುವೆ: ರಘುಪತಿ ಭಟ್‌

ಅಭಿವೃದ್ಧಿ ಕಾರ್ಯಗಳಿಗೆ ಕಾಂಗ್ರೆಸ್‌ ಅನುದಾನ ನೀಡಿಲ್ಲ; ಪ್ರತಾಪಸಿಂಹ ನಾಯಕ್‌

ಅಭಿವೃದ್ಧಿ ಕಾರ್ಯಗಳಿಗೆ ಕಾಂಗ್ರೆಸ್‌ ಅನುದಾನ ನೀಡಿಲ್ಲ; ಪ್ರತಾಪಸಿಂಹ ನಾಯಕ್‌

Road Mishap ಸುಳ್ಯ: ಬೊಲೆರೊ -ಕಾರು ಅಪಘಾತ; ಗಾಯ

Road Mishap ಸುಳ್ಯ: ಬೊಲೆರೊ -ಕಾರು ಅಪಘಾತ; ಗಾಯ

Missing Case ಹಲುವಳ್ಳಿ: ಮಹಿಳೆ ನಾಪತ್ತೆ

Missing Case ಹಲುವಳ್ಳಿ: ಮಹಿಳೆ ನಾಪತ್ತೆ

ಕೊಕ್ಕಡದಲ್ಲಿ ಬೆಂಗಳೂರು ಮೂಲದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Kokkada ಬೆಂಗಳೂರು ಮೂಲದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Malpe ಕೆಳಾರ್ಕಳಬೆಟ್ಟು: ಚಿನ್ನ ಕಳವು, ದೂರು ದಾಖಲು

Malpe ಕೆಳಾರ್ಕಳಬೆಟ್ಟು: ಚಿನ್ನ ಕಳವು, ದೂರು ದಾಖಲು

ಉಪ್ಪೂರು ಪಿಡಿಒ ಲೋಕಾಯುಕ್ತ ಬಲೆಗೆ

Brahmavar ಉಪ್ಪೂರು ಪಿಡಿಒ ಲೋಕಾಯುಕ್ತ ಬಲೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರಿಮಿನಲ್‌ಗ‌ಳಿಗೆ ಸಿಡಿಆರ್‌ ಮಾರಾಟ; 10 ಸೆರೆ

Bengaluru: ಕ್ರಿಮಿನಲ್‌ಗ‌ಳಿಗೆ ಸಿಡಿಆರ್‌ ಮಾರಾಟ; 10 ಸೆರೆ

9

Yelahanka: ಸಾವರ್ಕರ್‌ ನಾಮಫಲಕಕ್ಕೆ ಮಸಿ: 3 ವಶ

Theft: ಡಯಾಗ್ನಸ್ಟಿಕ್‌ ಸೆಂಟರ್‌ನಲ್ಲಿ ಕಳವು: ಅಕ್ಕ, ತಮ್ಮ ಬಂಧನ

Theft: ಡಯಾಗ್ನಸ್ಟಿಕ್‌ ಸೆಂಟರ್‌ನಲ್ಲಿ ಕಳವು: ಅಕ್ಕ, ತಮ್ಮ ಬಂಧನ

Arrested: ಐಪಿಎಲ್‌ ಕ್ರಿಕೆಟ್‌ ಪಂದ್ಯ ವೇಳೆ ಮೊಬೈಲ್‌ ಕದ್ದಿದ್ದ ಆರೋಪಿ ಸೆರೆ

Arrested: ಐಪಿಎಲ್‌ ಕ್ರಿಕೆಟ್‌ ಪಂದ್ಯ ವೇಳೆ ಮೊಬೈಲ್‌ ಕದ್ದಿದ್ದ ಆರೋಪಿ ಸೆರೆ

Theft: ದ್ವಿಚಕ್ರ ವಾಹನ ಕಳ್ಳತನ ಆರೋಪಿ ಬಂಧನ

Theft: ದ್ವಿಚಕ್ರ ವಾಹನ ಕಳ್ಳತನ ಆರೋಪಿ ಬಂಧನ

MUST WATCH

udayavani youtube

ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕನ ಆತ್ಮಹ*ತ್ಯೆ ಪ್ರಕರಣ,ಅಧಿಕಾರಿಗಳ ಭೇಟಿ

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

ಹೊಸ ಸೇರ್ಪಡೆ

ಬೇಡಿಕೆಗಳ ಈಡೇರಿಕೆಗಾಗಿ ಪ್ರಾಮಾಣಿಕ, ಕ್ರಿಯಾಶೀಲವಾಗಿ ದುಡಿಯುವೆ: ರಘುಪತಿ ಭಟ್‌

ಬೇಡಿಕೆಗಳ ಈಡೇರಿಕೆಗಾಗಿ ಪ್ರಾಮಾಣಿಕ, ಕ್ರಿಯಾಶೀಲವಾಗಿ ದುಡಿಯುವೆ: ರಘುಪತಿ ಭಟ್‌

ಅಭಿವೃದ್ಧಿ ಕಾರ್ಯಗಳಿಗೆ ಕಾಂಗ್ರೆಸ್‌ ಅನುದಾನ ನೀಡಿಲ್ಲ; ಪ್ರತಾಪಸಿಂಹ ನಾಯಕ್‌

ಅಭಿವೃದ್ಧಿ ಕಾರ್ಯಗಳಿಗೆ ಕಾಂಗ್ರೆಸ್‌ ಅನುದಾನ ನೀಡಿಲ್ಲ; ಪ್ರತಾಪಸಿಂಹ ನಾಯಕ್‌

Road Mishap ಸುಳ್ಯ: ಬೊಲೆರೊ -ಕಾರು ಅಪಘಾತ; ಗಾಯ

Road Mishap ಸುಳ್ಯ: ಬೊಲೆರೊ -ಕಾರು ಅಪಘಾತ; ಗಾಯ

Missing Case ಹಲುವಳ್ಳಿ: ಮಹಿಳೆ ನಾಪತ್ತೆ

Missing Case ಹಲುವಳ್ಳಿ: ಮಹಿಳೆ ನಾಪತ್ತೆ

ಕೊಕ್ಕಡದಲ್ಲಿ ಬೆಂಗಳೂರು ಮೂಲದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Kokkada ಬೆಂಗಳೂರು ಮೂಲದ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.