ಪ್ರಭಾವಿಗಳ ಖರ್ಚಿನ ಮೇಲೆ ಕಣ್ಣಿಡಲು ವಿಶೇಷ ತಂಡ


Team Udayavani, Apr 22, 2018, 12:21 PM IST

prabhavi.jpg

ಬೆಂಗಳೂರು: ರಾಜಧಾನಿಯ 28 ವಿಧಾನಸಭೆ ಕ್ಷೇತ್ರಗಳ ಪೈಕಿ ಜಿದ್ದಾಜಿದ್ದಿನ ಕಣ ಎಂದೇ ಬಿಂಬಿತವಾಗಿರುವ ಹಾಗೂ ಪ್ರಭಾವಿ ನಾಯಕರು ಸ್ಪರ್ಧಿಸುತ್ತಿರುವ ವಿಧಾನಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ಮಾಡುವ ಖರ್ಚು, ವೆಚ್ಚಗಳ ಮೇಲೆ ಹದ್ದಿನ ಕಣ್ಣಿರಿಸಲು ಚುನಾವಣಾ ಆಯೋಗ ಅಧಿಕಾರಿಗಳನ್ನು ನೇಮಿಸಿದೆ.

ರಾಜರಾಜೇಶ್ವರಿ ನಗರ, ಶಿವಾಜಿನಗರ, ಚಿಕ್ಕಪೇಟೆ, ಪದ್ಮನಾಭನಗರ, ಬಿಟಿಎಂ ಬಡಾವಣೆ, ಚಾಮರಾಜಪೇಟೆ, ಸರ್ವಜ್ಞನಗರ, ಮಹದೇವಪುರ, ಕೆ.ಆರ್‌.ಪುರ ಹಾಗೂ ಯಶವಂತಪುರ ಕ್ಷೇತ್ರಗಳಲ್ಲಿ ಒಂದೊಂದು ಕ್ಷೇತ್ರಕ್ಕೆ ಪ್ರತ್ಯೇಕ ಅಧಿಕಾರಿ ನಿಯೋಜಿಸಲಾಗಿದೆ.

ಬಿಬಿಎಂಪಿ ವ್ಯಾಪ್ತಿಗೆ ಬರುವ ವಿಧಾನಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ವೆಚ್ಚಗಳ ಮಾಹಿತಿ ಪಡೆಯಲು ಹಾಗೂ ನಿಯಮ ಮೀರಿ ಹಣ ಖರ್ಚು ಮಾಡುವವರ ಮೇಲೆ ನಿಗಾವಹಿಸಲು ಎರಡು ಕ್ಷೇತ್ರಗಳಿಗೆ ಒಬ್ಬರಂತೆ ವೀಕ್ಷಕ ಹಾಗೂ ಸಂಪರ್ಕ ಅಧಿಕಾರಿ ನೇಮಿಸಲಾಗಿದೆಯಾದರೂ ಹತ್ತು ವಿಧಾನಸಭೆ ಕ್ಷೇತ್ರಗಳಲ್ಲಿ ಪ್ರತ್ಯೇಕ ಅಧಿಕಾರಿ ನೇಮಿಸಲಾಗಿದೆ.

ಉಳಿದಂತೆ, ಅಭ್ಯರ್ಥಿಗಳ ಖರ್ಚು ವೆಚ್ಚಗಳ ಪರಿಶೀಲನೆಗಾಗಿ 28 ವಿಧಾನಸಭಾ ಕ್ಷೇತ್ರಗಳಿಗೆ 19 ಮಂದಿ ವೀಕ್ಷಕ ಹಾಗೂ ಸಂಪರ್ಕ ಅಧಿಕಾರಿಗಳನ್ನು ಚುನಾವಣಾ ಆಯೋಗವು ನೇಮಿಸಲಾಗಿದ್ದು, ಖರ್ಚು ವೆಚ್ಚಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರು ಸಹ ಅಧಿಕಾರಿಗಳಿಗೆ ಮಾಹಿತಿ ನೀಡಬಹುದಾಗಿದೆ. 

 ಪ್ರಭಾವಿ ನಾಯಕರು ಸ್ಪರ್ಧಿಸುವ, ನಿಗದಿಗಿಂತ ಹೆಚ್ಚು ಖರ್ಚು-ವೆಚ್ಚ ಮಾಡುವುದು ಸೇರಿದಂತೆ ಈ ಹಿಂದಿನ ಚುನಾವಣೆಗಳಲ್ಲಿ ನಡೆದಿರುವಂತಹ ಘಟನೆಗಳು ಹಾಗೂ ದಾಖಲಾಗಿರುವ ಪ್ರಕರಣಗಳ ಆಧಾರದ ಮೇಲೆ ಕೆಲವೊಂದು ವಿಧಾನಸಭಾ ಕ್ಷೇತ್ರಗಳ ಮೇಲೆ ವಿಶೇಷ ನಿಗಾ ಇರಿಸಲಾಗುತ್ತದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. 

ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗೆ 28 ಲಕ್ಷ ರೂ.ವರೆಗೆ ವೆಚ್ಚ ಮಾಡಲು ಚುನಾವಣಾ ಆಯೋಗ ಅನುಮತಿ ನೀಡಿದೆ. ಅದನ್ನು ಮೀರಿ ವೆಚ್ಚ ಮಾಡುವುದು, ಮತದಾರರ ಮೇಲೆ ಒತ್ತಡ ಹೇರುವುದು, ಮತದಾರರಿಗೆ ಆಮೀಷವೊಡ್ಡುವುದು, ಹಣ, ಮದ್ಯ ಹಾಗೂ ಇತರೆ ವಸ್ತುಗಳ ಹಂಚಿಕೆಗಳ ಕುರಿತು ಸಾರ್ವಜನಿಕರು ಚುನಾವಣಾ ಆಯೋಗದ ವತಿಯಿಂದ ಅಭಿವೃದ್ಧಪಡಿಸಿರುವ ಅಥವಾ ಕಂಟ್ರೋಲ್‌ ರೂಂಗೆ ಕರೆ ಮಾಹಿತಿ ಮಾಹಿತಿ ನೀಡಬಹುದಾಗಿದೆ. 

ಪ್ರತಿಯೊಂದು ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಮಾಡುವ ಖರ್ಚು ವೆಚ್ಚಗಳ ಮೇಲೆ ನಿಗಾವಹಿಸಲು 19 ಮಂದಿ ವೀಕ್ಷಕ ಹಾಗೂ ಸಂಪರ್ಕ ಅಧಿಕಾರಿಗಳನ್ನು, 14 ಮಂದಿ ಸಾಮಾನ್ಯ ವೀಕ್ಷಕ ಅಧಿಕಾರಿಗಳು ಹಾಗೂ ಪ್ರತಿ ಏಳು ವಿಧಾನಸಭಾ ಕ್ಷೇತ್ರಗಳಿಗೆ ಒಬ್ಬರಂತೆ ಪೊಲೀಸ್‌ ವೀಕ್ಷಕರನ್ನು ನೇಮಿಸಲಾಗಿದೆ.
-ಎನ್‌.ಮಂಜುನಾಥ ಪ್ರಸಾದ್‌, ಜಿಲ್ಲಾ ಚುನಾವಣಾಧಿಕಾರಿ

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ

Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ

Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್‌ನಲ್ಲೇ ಚಾಕು, ಡ್ಯಾಗರ್‌ ಹಿಡಿದು ಹೊಡೆದಾಟ!

Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್‌ನಲ್ಲೇ ಚಾಕು, ಡ್ಯಾಗರ್‌ ಹಿಡಿದು ಹೊಡೆದಾಟ!

ಸ್ನೇಹಿತನ ಪತ್ನಿಯ ಕ್ಯಾನ್ಸರ್‌ ಚಿಕಿತ್ಸೆಗಾಗಿ ಬೈಕ್‌ ಕಳ್ಳತನಕ್ಕಿಳಿದ ಕುಚುಕು ಗೆಳೆಯ! 

ಸ್ನೇಹಿತನ ಪತ್ನಿಯ ಕ್ಯಾನ್ಸರ್‌ ಚಿಕಿತ್ಸೆಗಾಗಿ ಬೈಕ್‌ ಕಳ್ಳತನಕ್ಕಿಳಿದ ಕುಚುಕು ಗೆಳೆಯ! 

Shivakumar

Bengaluru: ಅಧಿವೇಶನದ ಬಳಿಕ ಕಾವೇರಿ ನೀರಿನ ದರ ಪರಿಷ್ಕರಣೆ: ಡಿ.ಕೆ.ಶಿವಕುಮಾರ್‌

Bengaluru: ಕೋರ್ಟ್‌ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ

Bengaluru: ಕೋರ್ಟ್‌ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.