ವೇದಿಕೆಯಲ್ಲೇ ಕುಸಿದ ವಿದ್ಯಾರ್ಥಿನಿ
Team Udayavani, Oct 20, 2019, 3:05 AM IST
ಟಿ.ದಾಸರಹಳ್ಳಿ: ಕಾಲೇಜಿಗೆ ಬಂದ ಹೊಸ ವಿದ್ಯಾರ್ಥಿಗಳ ಸ್ವಾಗತ ದಿನ ಕಾರ್ಯಕ್ರಮಕ್ಕೆ ಪೂರ್ವಭಾವಿ ಸಿದ್ಧತೆ ಮಾಡಿಕೊಳ್ಳುವ ಸಂದರ್ಭದಲ್ಲಿ ವಿದ್ಯಾರ್ಥಿನಿಯೊಬ್ಬರು ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ನಗರದಲ್ಲಿ ನಡೆದಿದೆ.
ಶ್ರೀರಾಂಪುರ ನಿವಾಸಿ ಶಾಲಿನಿ (21) ಮೃತ ವಿದ್ಯಾರ್ಥಿನಿ. ಶುಕ್ರವಾರ ಸಂಜೆ ಐದು ಗಂಟೆ ಸುಮಾರಿಗೆ ಆಚಾರ್ಯ ಎಂಬಿಎ ಕಾಲೇಜಿನ ಆವರಣದಲ್ಲೇ ದುರ್ಘಟನೆ ನಡೆದಿದ್ದು, ಕೂಡಲೇ ಇತರೆ ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಚಿಕಿತ್ಸೆ ನೀಡಿದ ವೈದ್ಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ದೃಢಪಡಿಸಿದ್ದಾರೆ.
ಮರಣೋತ್ತರ ಪರೀಕ್ಷೆ ಬಳಿಕ ವಿದ್ಯಾರ್ಥಿನಿಯ ದೇಹದ ಭಾಗಗಳನ್ನು ವಿಧಿ ವಿಜ್ಞಾನ ಪರೀಕ್ಷಾ ಕೇಂದ್ರಕ್ಕೆ ಕಳುಹಿಸಲಾಗಿದ್ದು, ವರದಿ ಬಂದ ಬಳಿಕ ಸಾವಿಗೆ ಸ್ಪಷ್ಟ ಕಾರಣ ಸಿಗಲಿದೆ. ಪ್ರಾಥಮಿಕ ಮಾಹಿತಿ ಪ್ರಕಾರ ಹೃದಯಘಾತದಿಂದ ಮೃತಪಟ್ಟಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಶ್ರೀರಾಂಪುರ ನಿವಾಸಿ, ಬಟ್ಟೆ ವ್ಯಾಪಾರಿ ರಾಜನ್ ಮತ್ತು ಅಂಬಿಕಾ ದಂಪತಿಯ ಪುತ್ರಿ ಶಾಲಿನಿ, ಪೀಣ್ಯದಲ್ಲಿರುವ ಆಚಾರ್ಯ ಎಂಬಿಎ ಕಾಲೇಜಿನಲ್ಲಿ ಪ್ರಥಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದರು. ಅ.21ರಂದು ಕಾಲೇಜಿನಲ್ಲಿ ಹೊಸ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ ಆಯೋಜಿಸಲಾಗಿದೆ.
ಅದಕ್ಕೆ ಪೂರ್ವಭಾವಿಯಾಗಿ ಕಳೆದ ಕೆಲ ದಿನಗಳಿಂದ ಕಾಲೇಜು ಆವರಣದಲ್ಲಿರುವ ವೇದಿಕೆಯಲ್ಲಿಯೇ ಫ್ಯಾಷನ್ ಶೋ ಅಭ್ಯಾಸ ಮಾಡಲಾಗುತ್ತಿದೆ. ಶುಕ್ರವಾರ ಸಂಜೆ ಅಭ್ಯಾಸ ಮಾಡುವಾಗ ರ್ಯಾಂಪ್ ವಾಕ್ ಮಾಡಿದ ಬಳಿಕ ವೇದಿಕೆ ಪಕ್ಕಕ್ಕೆ ಹೋದ ಶಾಲಿನಿ ಇದಕ್ಕಿದ್ದಂತೆ ಕುಸಿದು ಬಿದ್ದಿದ್ದಾರೆ.
ಆತಂಕಗೊಂಡ ಇತರೆ ವಿದ್ಯಾರ್ಥಿಗಳು ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆ ಸಂಬಂಧ ಪೀಣ್ಯ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದರು. ಅನಿರೀಕ್ಷಿತ ಅವಘಡದಲ್ಲಿ ಮೃತಪಟ್ಟ ಪುತ್ರಿ ಶಾಲಿನಿಯ ಪೋಷಕರ ಆಕ್ರಂದನ ಮುಗಿಲು ಮುಟ್ಟುವಂತಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ