Share Investment: ಷೇರು ಹೂಡಿಕೆ ಲಾಭದ ಆಸೆಗೆ 52.30 ಲಕ್ಷ ಕಳೆದುಕೊಂಡ ಮಹಿಳೆ  


Team Udayavani, Jan 22, 2024, 11:39 AM IST

Share Investment: ಷೇರು ಹೂಡಿಕೆ ಲಾಭದ ಆಸೆಗೆ 52.30 ಲಕ್ಷ ಕಳೆದುಕೊಂಡ ಮಹಿಳೆ  

ಬೆಂಗಳೂರು: ಷೇರಿನಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭಾಂಶ ಕೊಡಿಸುವುದಾಗಿ ನಂಬಿಸಿ ಮಹಿಳೆಯೊಬ್ಬರಿಗೆ ಸೈಬರ್‌ ಕಳ್ಳರು 52.30 ಲಕ್ಷ ರೂ. ವಂಚಿಸಿದ್ದಾರೆ.

ಕೆಂಗೇರಿಯ ನಿವಾಸಿ ಲೀನಾ (41) ವಂಚನೆಗೊಳಗಾದವರು. ‌

ಲೀನಾ ಅವರು ವಾಟ್ಸ್ ಆ್ಯಪ್‌ಗೆ ಇತ್ತೀಚೆಗೆ ಅಪರಿಚಿತ ನಂಬರ್‌ನಿಂದ ಸಂದೇಶವೊಂದು ಬಂದಿತ್ತು. ಆ ಸಂದೇಶದಲ್ಲಿ ಷೇರು ಮಾರುಕಟ್ಟೆಯ ತರಬೇತಿ ಬಗ್ಗೆ ಮಾಹಿತಿ ಇತ್ತು. ಈ ಬಗ್ಗೆ ವಿಚಾರಿಸಿ ಷೇರು ತರಬೇತಿ ಪಡೆದುಕೊಳ್ಳುವುದಾಗಿ ಲೀನಾ ಒಪ್ಪಿದ ಬಳಿಕ ಅವರಿಗೆ 1 ತಿಂಗಳ ಆನ್‌ಲೈನ್‌ ತರಬೇತಿ ಕೊಡಲಾಗಿತ್ತು. ನಂತರ ಇನ್ನೊಂದು ಗ್ರೂಪ್‌ಗೆ ಸೇರಿಸಿ ಅಲ್ಲಿರುವ ಲಿಂಕ್‌ ಕ್ಲಿಕ್‌ ಮಾಡುವಂತೆ ಸೂಚಿಸಿ ಅದರಲ್ಲಿ ಬರುವ ಬ್ಯಾಂಕ್‌ ಖಾತೆಗೆ 50 ಸಾವಿರ ರೂ. ಜಮೆ ಮಾಡುವಂತೆ ಸೂಚಿಸಿದ್ದರು. ಅದರಂತೆ ಲೀನಾ 50 ಸಾವಿರ ರೂ. ವರ್ಗಾವಣೆ ಮಾಡುತ್ತಿದ್ದಂತೆ ಲೀನಾ ಅವರ ವ್ಯಾಲೆಟ್‌ನಲ್ಲಿ 80 ಸಾವಿರ ರೂ. ಲಾಭದ ಹಣ ತೋರಿಸುತ್ತಿತ್ತು. ಇತ್ತ ಲೀನಾಗೆ ಕರೆ ಮಾಡಿದ ಅಪರಿಚಿತರು ಕಂಪನಿಯವರು 1 ಲಕ್ಷ ಷೇರುಗಳನ್ನು ನಿಮಗೆ ಕೊಟ್ಟಿದ್ದಾರೆ. ಇದಕ್ಕೆ ಪ್ರತಿಯಾಗಿ ನೀವು ದುಡ್ಡು ಪಾವತಿಸಬೇಕು. ಇಲ್ಲದಿದ್ದರೆ ನಿಮ್ಮ ವಿರುದ್ಧ ಕಂಪನಿ ಕೇಸ್‌ ದಾಖಲಿಸಲಿದೆ ಎಂದು ಬೆದರಿಸಿದ್ದರು.

ಕಂಪನಿಯವರು 1 ಲಕ್ಷ ರೂ. ಷೇರು ಕೊಡಬಹುದು ಎಂದು ನಂಬಿದ ಲೀನಾ ಹಂತವಾಗಿ ಅಪರಿಚಿತರ ಬ್ಯಾಂಕ್‌ ಖಾತೆಗೆ 52.30 ಲಕ್ಷ ರೂ. ವರ್ಗಾವಣೆ ಮಾಡಿದ್ದರು. ಆದರೆ, ಇದಾದ ಬಳಿಕ ಲೀನಾ ಅವರಿಗೆ ಅಪರಿಚಿತರು ಯಾವುದೇ ಷೇರನ್ನು ನೀಡದೇ, 52.30 ಲಕ್ಷ ರೂ. ದುಡ್ಡನ್ನು ಹಿಂತಿರುಗಿಸಿರಲಿಲ್ಲ. 52.30 ಲಕ್ಷ ರೂ. ಹಿಂತಿರುಗಿಸಬೇಕಾದರೆ ಇನ್ನಷ್ಟು ದುಡ್ಡು ನೀಡಬೇಕೆಂದು ಅಪರಿಚಿತರು ಸೂಚಿಸಿದ್ದರು. ಅನುಮಾನ ಬಂದು ಲೀನಾ ಪರಿಶೀಲಿಸಿದಾಗ ಇದು ಸೈಬರ್‌ ಕಳ್ಳರ ಕೈಚಳಕ ಎಂಬುದು ಗೊತ್ತಾಗಿದೆ. ಲೀನಾ ಪಶ್ಚಿಮ ವಿಭಾಗದ ಸಿಇಎನ್‌ ಠಾಣೆಗೆ ದೂರು ನೀಡಿದ್ದಾರೆ.

 

ಟಾಪ್ ನ್ಯೂಸ್

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.