ಸಾಲ ತೀರಿಸಲು ರಕ್ತ ಚಂದನ ದಂಧೆಗಿಳಿದ ಯುವಕ

ಸ್ನೇಹಿತನ ಸಲಹೆಯಂತೆ ಆರೋಪಿಯು ರಕ್ತ ಚಂದನ ಮಾರಾಟಕ್ಕೆ ಮುಂದಾಗಿದ್ದ.

Team Udayavani, Dec 15, 2022, 11:39 AM IST

ಸಾಲ ತೀರಿಸಲು ರಕ್ತ ಚಂದನ ದಂಧೆಗಿಳಿದ ಯುವಕ

ಬೆಂಗಳೂರು: ರಕ್ತ ಚಂದನ ಮಾರಾಟ ದಂಧೆ ಕಥಾಹಂದರವುಳ್ಳ ಪುಷ್ಪಾ ಸಿನಿಮಾ ರೀತಿ ರಕ್ತ ಚಂದನ ಮಾರಾಟಕ್ಕೆ ಇಳಿದಿದ್ದ ಯುವಕನೊಬ್ಬ ಬಾಣಸವಾಡಿ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾನೆ. ರಾಮನಗರ ಚನ್ನಪಟ್ಟಣದ ನಿವಾಸಿ ಕೂಟಕಲ್ಲೇಗೌಡ ಅಲಿಯಾಸ್‌ ಅಭಿ (27) ಬಂಧಿತ. ಆತನಿಂದ 12 ಲಕ್ಷ ರೂ. ಮೌಲ್ಯದ 1 ಕ್ವಿಂಟಲ್‌ ತೂಕದ ರಕ್ತ ಚಂದನ ಹಾಗೂ ಟೊಯೋಟಾ ಇಟಿಯೋಸ್‌ ಕಾರನ್ನು ಜಪ್ತಿ ಮಾಡಲಾಗಿದೆ.

ಆರೋಪಿ ಅಭಿ ಚನ್ನಪಟ್ಟಣದಲ್ಲಿ ಜಿಮ್‌ ತೆರೆದಿದ್ದ. ಇದಕ್ಕೆ 25 ಲಕ್ಷ ರೂ. ಸಾಲ ಮಾಡಿದ್ದ. ಆದರೆ, ಜಿಮ್‌ನಲ್ಲಿ ಆತ ನಿರೀಕ್ಷಿಸಿದಷ್ಟು ವ್ಯವಹಾರ ನಡೆಯದ ಕಾರಣ ಸಾಲ ತೀರಿಸಲು ಸಾಧ್ಯವಾಗಲಿಲ್ಲ. ಸಾಲ ಕೊಟ್ಟವರು ಸಾಲ ಹಿಂತಿರುಗಿಸುವಂತೆ ಒತ್ತಡ ಹಾಕುತ್ತಿದ್ದರು. ಈ ವಿಚಾರವನ್ನು ರಾಮನಗರದಲ್ಲಿರುವ ತನ್ನ ಸ್ನೇಹಿತನೊಬ್ಬನ ಬಳಿ ಹೇಳಿಕೊಂಡಿದ್ದ.

ಆರೋಪಿ ಅಭಿಯ ಸ್ಥಿತಿ ಕಂಡು ಅನುಕಂಪದಿಂದ ಆತನ ಸ್ನೇಹಿತ ತನ್ನ ಬಳಿಯಿದ್ದ ರಕ್ತ ಚಂದದ ತುಂಡುಗಳನ್ನು ಕೊಟ್ಟಿದ್ದ. ಇದಕ್ಕೆ ಬೆಂಗಳೂರಿನಲ್ಲಿ ಹೆಚ್ಚಿನ ಬೇಡಿಕೆ ಇದೆ. ಯಾರಿಗೂ ತಿಳಿಯದಂತೆ ರಾಮನಗರದಿಂದ ಕಾರಿನಲ್ಲಿ ಬೆಂಗಳೂರಿಗೆ ತೆಗೆದುಕೊಂಡು ಹೋಗಿ ಮಾರಾಟ ಮಾಡುವಂತೆ ಸಲಹೆ ನೀಡಿದ್ದ. ಇದಾದ ಕೆಲ ದಿನಗಳಲ್ಲಿ ಆತನ ಸ್ನೇಹಿತ ಅನಾರೋಗ್ಯದಿಂದ ಮೃತಪಟ್ಟಿದ್ದ. ಇತ್ತ ಸ್ನೇಹಿತನ ಸಲಹೆಯಂತೆ ಆರೋಪಿಯು ರಕ್ತ ಚಂದನ ಮಾರಾಟಕ್ಕೆ ಮುಂದಾಗಿದ್ದ.

ಗಿರಾಕಿಗಳನ್ನು ಹುಡುಕುತ್ತಿದ್ದಾಗ ಸಿಕ್ಕಿಬಿದ್ದ:
ಡಿ.12ರಂದು ಸಂಜೆ 4 ಗಂಟೆಗೆ ಬಾಣಸವಾಡಿ ಮುಖ್ಯ ರಸ್ತೆಯನ್ನು ಅಗ್ನಿಶಾಮಕ ದಳ ಠಾಣೆಯ ಸಮೀಪದ ಪೂಜಾ ದೋಸೆ ಕ್ಯಾಂಪ್‌ ರಸ್ತೆಯಲ್ಲಿ ಟಾಟಾ ಇಟಿಯೋಸ್‌ ಕಾರಿನಲ್ಲಿ ರಕ್ತ ಚಂದನ ಮರದ ತುಂಡುಗಳನ್ನು ಇಟ್ಟುಕೊಂಡು ಮಾರಾಟ ಮಾಡಲು ಗಿರಾಕಿಗಳನ್ನು ಹುಡುಕುತ್ತಿದ್ದ. ವ್ಯಕ್ತಿ ಯೊಬ್ಬ ಅನುಮಾನಾಸ್ಪದ ವಸ್ತುಗಳನ್ನು ಕಾರಿನಲ್ಲಿಟ್ಟು ತಿರುಗಾಡುತ್ತಿರುವ ಬಗ್ಗೆ ಬಾಣಸವಾಡಿ ಪೊಲೀಸರಿಗೆ ಸುಳಿವು ಸಿಕ್ಕಿತ್ತು. ಈ ಸುಳಿವಿನ ಆಧಾರದ ಮೇಲೆ ಬಾಣಸವಾಡಿ ಮುಖ್ಯರಸ್ತೆಯ ಕೆಲ ಭಾಗಗಳಲ್ಲಿ ಪೊಲೀಸರು ವಾಹನ ತಪಾಸಣೆ ನಡೆಸಿದ್ದರು. ಆರೋಪಿಯ ಕಾರಿನ ಡಿಕ್ಕಿ ಪರಿಶೀಲಿಸಿದಾಗ ರಕ್ತ ಚಂದನ ಪತ್ತೆಯಾಗಿದೆ.

ರಕ್ತ ಚಂದನದ ಮೂಲ ಪತ್ತೆ ಹಚ್ಚುವುದೇ ಸವಾಲು
ತನ್ನ ಸ್ನೇಹಿತನಿಗೆ ರಕ್ತ ಚಂದನದ ತುಂಡು ಎಲ್ಲಿಂದ ಸಿಕ್ಕಿದೆ ಎಂಬುದು ನನಗೂ ತಿಳಿದಿಲ್ಲ ಎಂದು ವಿಚಾರಣೆ ವೇಳೆ ಆರೋಪಿಯು ಪೊಲೀಸರಿಗೆ ತಿಳಿಸಿದ್ದಾನೆ. ಇದೀಗ ಆತನ ಸ್ನೇಹಿತ ಮೃತಪಟ್ಟಿರುವ ಕಾರಣ ರಕ್ತ ಚಂದನದ ಮೂಲ ಪತ್ತೆ ಹಚ್ಚುವುದೇ ಪೊಲೀಸರಿಗೆ ಸವಾಲಾಗಿದೆ.

ಟಾಪ್ ನ್ಯೂಸ್

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

19-gobi

Gobi Manchurian ಬ್ಯಾನ್‌ ಎಫೆಕ್ಟ್: ಚಾಟ್ಸ್‌ ಮಾರಾಟ ಕುಸಿತ

18-

Book Brahma ಸ್ವಾತಂತ್ರ‍್ಯೋತ್ಸವ ಕಥಾ ಸ್ಪರ್ಧೆ, ಕಾದಂಬರಿ ಪುರಸ್ಕಾರ- 2024: ವಿವರಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.