Arrested: ಯೂಟ್ಯೂಬ್ ನೋಡಿ ದ್ವಿಚಕ್ರ ವಾಹನ ಕದ್ದಿದ್ದ ಯುವಕ ಬಂಧನ
Team Udayavani, May 5, 2024, 11:48 AM IST
ಬೆಂಗಳೂರು: ಹೋಟೆಲ್ ಮಾಲೀಕ ವೇತನ ಕೊಡದೇ ಬೈಕ್ ಕಳ್ಳತನ ಮಾಡುವಂತೆ ತಮಾಷೆಗೆ ಹೇಳಿರುವುದನ್ನೇ ಗಂಭೀರ ವಾಗಿ ಪರಿಗಣಿಸಿದ ವ್ಯಕ್ತಿಯೊಬ್ಬ ಯೂಟ್ಯೂಬ್ ನೋಡಿ ಬೈಕ್ ಕಳ್ಳತನ ಮಾಡಿ ಮಡಿವಾಳ ಪೊಲೀಸರಿಂದ ಬಂಧನಕ್ಕೊಳಗಾಗಿದ್ದಾನೆ.
ಕೇರಳ ಮೂಲದ ಅಖಿಬ್ ಖಾನ್ (23) ಬಂಧಿತ ಆರೋಪಿ.
ಈತ ಕೆಲ ತಿಂಗಳಿಂದ ಮಡಿ ವಾಳದ ಹೊಟೆಲ್ವೊಂದರಲ್ಲಿ ಕೆಲಸ ಮಾಡುತ್ತಿದ್ದ. ಹೆಚ್ಚುವರಿಯಾಗಿ ದುಡಿಸಿಕೊಂಡು ಸಂಬಳ ಸರಿಯಾಗಿ ನೀಡದ ಆರೋಪ ಮಾಲೀಕ ಆಸಿಫ್ ಮೇಲಿತ್ತು. ಇತ್ತೀಚೆಗೆ ಸಂಬಳ ಕೊಟ್ಟರೆ ಕೆಲಸ ಬಿಟ್ಟು ಹೋಗುತ್ತೇನೆ. ಊರಿಗೆ ಹೋಗಲು ಹಣವಿಲ್ಲ ಎಂದು ಮಾಲೀಕನಿಗೆ ಆಖೀಬ್ ಖಾನ್ ಬಳಿ ಹೇಳಿದ್ದ. ಇದಕ್ಕೆ ಮಾಲೀಕ “ಹೋಟೆಲ್ ಬಳಿ ಎಷ್ಟೊಂದು ಬೈಕ್ಗಳಿವೆ ಕಳ್ಳತನ ಮಾಡು’ ಎಂದು ತಮಾಷೆಯಾಗಿ ಹೇಳಿದ್ದ. ಇದನ್ನೇ ಗಂಭೀರವಾಗಿ ಪರಿಗಣಿಸಿದ ಆರೋಪಿಯು ಯೂಟ್ಯೂಬ್ನಲ್ಲಿ ಬೈಕ್ ಕದಿಯುವುದನ್ನು ನೋಡಿದ್ದ. ನಂತರ ಲಾಕ್ ಓಪನ್ ಮಾಡುವುದು ಹೇಗೆ ಎಂಬುದನ್ನು ತಿಳಿದು ಮಡಿವಾಳದ ಅಯ್ಯಪ್ಪ ದೇವಸ್ಥಾನ ಬಳಿ ಬೈಕ್ ಕಳ್ಳತನ ಮಾಡಿದ್ದ. ಕದ್ದ ಬೈಕ್ನಲ್ಲೇ ಕೇರಳಕ್ಕೆ ತೆರಳಿದ್ದ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸಿಸಿ ಕ್ಯಾಮೆರಾ ದೃಶ್ಯ ಆಧರಿಸಿ ಆರೋಪಿ ಯಾರೆಂಬುದನ್ನು ಪತ್ತೆ ಹಚ್ಚಿದ್ದರು. ಮತ್ತೂಂದಡೆ ಬೈಕ್ ಕದ್ದಿರುವುದಕ್ಕೆ ಪಾಲಕರು ಬೈದಿದ್ದಾರೆ ಎಂದು ಬೇಸರಿಸಿಕೊಂಡು ಮತ್ತೆ ಬೆಂಗಳೂರಿಗೆ ವಾಪಸ್ಸಾಗುತ್ತಿದ್ದ. ಆ ವೇಳೆ ಪೊಲೀಸರು ಆತನನ್ನು ಬಂಧಿಸಿದ್ದಾರೆ. ವಿಚಾರಣೆ ನಡೆಸಿದಾಗ ಹೋಟೆಲ್ ಮಾಲೀಕರು ಸಂಬಳ ನೀಡಿರಲಿಲ್ಲ. ಹೀಗಾಗಿ ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಬೈಕ್ ಕಳ್ಳತನ ಮಾಡು ಎಂದು ಸೂಚಿಸಿದ್ದ ಹೊಟೇಲ್ ಮಾಲೀಕನಿಗೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru Rave Party; 86 ಜನರು ಡ್ರಗ್ ಸೇವೆನೆ ಮಾಡಿರುವುದು ರಕ್ತ ಪರೀಕ್ಷಯಲ್ಲಿ ದೃಢ
ಕೈಗಾರಿಕೆಗೆಂದು ಅಭಿವೃದ್ಧಿಪಡಿಸಿದ ಜಾಗದಲ್ಲಿ ನೂರಾರು ದೊಡ್ಡ ಗಿಡ ನೆಟ್ಟ ಅನಾಮಿಕರು!
Bengaluru Road: ಮಳೆ ನಿಂತ ನಂತರ ರಸ್ತೆ ಗುಂಡಿ ದುರಸ್ತಿ ಶುರು
ಹೊಯ್ಸಳ ಪೊಲೀಸರನ್ನು ಕಳ್ಳ ಕಳ್ಳ ಎಂದು ಬೆನ್ನಟ್ಟಿದ ಸಾರ್ವಜನಿಕರು!
Bengaluru: 13 ವರ್ಷದ ಅಪ್ರಾಪ್ತ ಸಹೋದರನಿಂದಲೇ 3 ತಿಂಗಳ ಗರ್ಭಿಣಿಯಾದ ತಂಗಿ!
MUST WATCH
ಹೊಸ ಸೇರ್ಪಡೆ
POCSO Case: ಅನ್ಯ ಕೋಮಿನ ಯುವಕನಿಂದ ಅಪ್ರಾಪ್ತೆಗೆ ಕಿರುಕುಳ: ಪೋಕ್ಸೋ ಕೇಸ್ ದಾಖಲು!
Udupi; ಯಕ್ಷರಂಗಕ್ಕೆ ಜಿವ ತುಂಬುವ ಮಟ್ಟು ಲಕ್ಷ್ಮಣ ಶೆಟ್ಟಿಗಾರರ ಕೈಮಗ್ಗದ ಸೀರೆ
Anwarul Azim Anwar; ಹನಿ ಟ್ರ್ಯಾಪ್ ಮಾಡಿ ಬಾಂಗ್ಲಾ ಸಂಸದನ ಹತ್ಯೆ; ಢಾಕಾದಲ್ಲಿ ಮಹಿಳೆ ಬಂಧನ
10km ದೂರದಲ್ಲಿರುವ ಪ್ರವಾಸಿತಾಣಕ್ಕೆ ಕರೆದೊಯ್ಯಲಿಲ್ಲವೆಂದು ನೇಣಿಗೆ ಶರಣಾದ 10 ವರ್ಷದ ಬಾಲಕಿ
ಪುತ್ತೂರು: 10 ಶಾಲೆಗಳಿಗೆ ಹೈ ಟೆನ್ಶ ನ್ ತಂತಿ ಟೆನ್ಶನ್| ಸ್ಥಳಾಂತರಕ್ಕೆ ಪೋಷಕರ ಆಗ್ರಹ