ಮಂಪರು ಪರೀಕ್ಷೆಗೆ ಹೊಟ್ಟೆ ಮಂಜ ನಿರಾಕರಣೆ


Team Udayavani, Apr 16, 2018, 12:35 PM IST

manparu.jpg

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಎನ್ನಲಾದ ಹೊಟ್ಟೆ ಮಂಜ ಅಲಿಯಾಸ್‌ ನವೀನ್‌ ಕುಮಾರ್‌ನನ್ನು ಏ.16ರಂದು ಗುಜರಾತ್‌ನ ವಿಧಿ ವಿಜ್ಞಾನ ಪರೀಕ್ಷಾ ಕೇಂದ್ರದಲ್ಲಿ ಮಂಪರು ಪರೀಕ್ಷೆಗೆ ಒಳಪಡಿಸಲು ವಿಶೇಷ ತನಿಖಾ ತಂಡ (ಎಸ್‌ಐಟಿ) ನಿರ್ಧರಿಸಿದೆ.

ಈ ಮಧ್ಯೆ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿರುವ ಮಂಜ, ಮಂಪರು ಪರೀಕ್ಷೆಗೆ ನಿರಾಕರಿಸಿ ಏ.13ರಂದು ಪರಪ್ಪನ ಅಗ್ರಹಾರ ಕಾರಾಗೃಹ ಅಧೀಕ್ಷರಿಗೆ ಪತ್ರ ಬರೆದಿದ್ದು, ಪತ್ರವನ್ನು ಕೋರ್ಟ್‌ಗೆ ಸಲ್ಲಿಸುವಂತೆ ಮನವಿ ಮಾಡಿದ್ದಾನೆ ಎನ್ನಲಾಗಿದೆ. ಆದರೆ, ಈ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿರುವ ಜೈಲಿನ ಅಧಿಕಾರಿಗಳು, ಇದುವರೆಗೂ ಮಂಜನಿಂದ ಯಾವುದೇ ಪತ್ರ ಬಂದಿಲ್ಲ ಎಂದು ತಿಳಿಸಿದ್ದಾರೆ.

ಪತ್ರದಲ್ಲೇನಿದೆ?: ಗೌರಿ ಹತ್ಯೆ ಪ್ರಕರಣದಲ್ಲಿ ಎಸ್‌ಐಟಿ ಅಧಿಕಾರಿಗಳು ನನ್ನನ್ನು ಬಂಧಿಸಿದ್ದು, ಕೋರ್ಟ್‌ಗೆ ಹಾಜರುಪಡಿಸಿ ಮಂಪರು ಪರೀಕ್ಷೆಗೆ ಕೋರ್ಟ್‌ ಅನುಮತಿ ಕೋರಿದ್ದರು. ನ್ಯಾಯಾಧೀಶರು ಈ ಬಗ್ಗೆ ನನ್ನ ಪ್ರತಿಕ್ರಿಯೆ ಕೇಳಿದಾಗ ನಿರಾಕರಿಸಿದ್ದೆ. ಆದರೆ, ಎಸ್‌ಐಟಿ ಅಧಿಕಾರಿಗಳು ಮಂಪರು ಪರೀಕ್ಷೆಗೆ ಒಪ್ಪಿಗೆ ಸೂಚಿಸದಿದ್ದರೆ ಜಾಮೀನು ಸಿಗುವುದಿಲ್ಲ ಎಂದು ನನಗೆ ಹೆದರಿಸಿದರು.

ಹೀಗಾಗಿ ಮುಂದಿನ ವಿಚಾರಣೆ ಸಂದರ್ಭದಲ್ಲಿ ನ್ಯಾಯಾಲಯದ ಮುಂದೆ ಪರೀಕ್ಷೆಗೆ ಒಪ್ಪಿಗೆ ಸೂಚಿಸಿದೆ. ನಂತರ ಈ ಬಗ್ಗೆ ಯೋಚಿಸಿದ್ದು, ಮಂಪರು ಪರೀಕ್ಷೆಗೆ ಒಳಗಾಗಲು ಇಷ್ಟವಿಲ್ಲ. ಹೀಗಾಗಿ ಈ ಪತ್ರವನ್ನು 3ನೇ ಎಸಿಎಂಎಂ ನ್ಯಾಯಾಲಯಕ್ಕೆ ತಲುಪಿಸಿ ಅನುಮತಿ ಆದೇಶವನ್ನು ಹಿಂಪಡೆಯಲು ಸಹಾಯ ಮಾಡಬೇಕೆಂದು ಪತ್ರದಲ್ಲಿ ಮನವಿ ಮಾಡಿದ್ದಾನೆ ಎಂದು ತಿಳಿದುಬಂದಿದೆ.

ಪತ್ರದ ಬಗ್ಗೆ ಅನುಮಾನ: ಹೊಟ್ಟೆ ಮಂಜ ಬರೆದಿರುವ ಪತ್ರದ ಬಗ್ಗೆ ಜೈಲಿನ ಅಧಿಕಾರಿಗಳಲ್ಲಿ ಹಲವು ಅನುಮಾನ ಮೂಡಿವೆ. ಒಂದೆಡೆ ಜೈಲಿನ ಹಿರಿಯ ಅಧಿಕಾರಿಗಳೇ “ನಮಗೆ ಯಾವುದೇ ಪತ್ರಗಳು ಸಿಕ್ಕಿಲ್ಲ’ ಎನ್ನುತ್ತಿದ್ದಾರೆ. ಮತ್ತೂಂದೆಡೆ ಮಂಜ ಜೈಲಿನ ಅಧೀಕ್ಷರಿಗೆ ಬರೆದಿರುವ ಪತ್ರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದು ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಈ ಬಗ್ಗೆ ಕಾರಾಗೃಹ ಇಲಾಖೆಯ ಹಿರಿಯ ಅಧಿಕಾರಿಗಳು ಜೈಲಿನ ಅಧೀಕ್ಷಕರಿಗೆ ಸ್ಪಷ್ಟ ಮಾಹಿತಿ ನೀಡುವಂತೆ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

Ad

ಟಾಪ್ ನ್ಯೂಸ್

Retirement plan: ನಿವೃತ್ತಿ ಬಳಿಕ ಸಾವಯವ ಕೃಷಿ ಕೈಗೆತ್ತಿಕೊಳ್ಳುವೆ… ಅಮಿತ್‌ ಶಾ

Retirement plan: ನಿವೃತ್ತಿ ಬಳಿಕ ಸಾವಯವ ಕೃಷಿ ಕೈಗೆತ್ತಿಕೊಳ್ಳುವೆ… ಅಮಿತ್‌ ಶಾ

1-horoscope

Daily Horoscope: ಉದ್ಯೋಗದಲ್ಲಿ ಭಿನ್ನ ರೀತಿಯ ಜವಾಬ್ದಾರಿಗಳು, ವ್ಯಾಪಾರಿಗಳಿಗೆ ಲಾಭ

GTD

ಜೆಡಿಎಸ್‌ ಮುನ್ನಡೆಸುವ ಸಾಮರ್ಥ್ಯ ನಿಖಿಲ್‌ಗಿದೆ: ಶಾಸಕ ಜಿ.ಟಿ.ದೇವೇಗೌಡ

CPY–Family

ಶಾಸಕ ಸಿ.ಪಿ.ಯೋಗೇಶ್ವರ್‌ ವಿರುದ್ಧ ಮೊದಲ ಪತ್ನಿ, ಪುತ್ರಿಯಿಂದ ಸುರ್ಜೇವಾಲಗೆ ದೂರು

Ashok-Bjp

ಉಗ್ರರಿಗೆ ಜೈಲಿನಲ್ಲೇ ಅನುಕೂಲ: ರಾಜ್ಯದಲ್ಲಿ ಗೃಹ ಇಲಾಖೆ ಸತ್ತೇ ಹೋಗಿದೆ: ಆರ್‌.ಅಶೋಕ್‌

FATF; ಪಾಕ್‌ ಹಣ ಬೆಂಬಲ: ಭಾರತದ ವಾದಕ್ಕೆ ಮೊದಲ ಜಯ

FATF; ಪಾಕ್‌ ಹಣ ಬೆಂಬಲ: ಭಾರತದ ವಾದಕ್ಕೆ ಮೊದಲ ಜಯ

Chinnaswamy-CId

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ಪ್ರಕರಣ ಶೀಘ್ರ ಸಿಐಡಿ ವರದಿ ಸಲ್ಲಿಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Theft Case: ಅಪಾರ್ಟ್‌ಮೆಂಟ್‌ನಲ್ಲಿ ಕಳ್ಳತನ: ಬಂಗಾಳದ ಯುವಕ ಸೆರೆ

10

ED: ವಕ್ಫ್ ಬೋರ್ಡ್‌ಗೆ ಸೇರಿದ 3.82 ಕೋಟಿ ರೂ. ಮರಳಿಸಿದ ಇಡಿ

Bengaluru: ಕದ್ದ ಚಿನ್ನವನ್ನು ಸ್ಮಶಾನದಲ್ಲಿ ಹೂತಿಟ್ಟಿದ್ದ ಬಾಲಕರು

Bengaluru: ಕದ್ದ ಚಿನ್ನವನ್ನು ಸ್ಮಶಾನದಲ್ಲಿ ಹೂತಿಟ್ಟಿದ್ದ ಬಾಲಕರು

Arrested: ಬೆಟ್ಟಿಂಗ್‌ನಿಂದ ಸಾಲ; ಕಳ್ಳತನಕ್ಕೆ ಇಳಿದಿದ್ದ ಟೆಕಿ ಸೆರೆ

Arrested: ಬೆಟ್ಟಿಂಗ್‌ನಿಂದ ಸಾಲ; ಕಳ್ಳತನಕ್ಕೆ ಇಳಿದಿದ್ದ ಟೆಕಿ ಸೆರೆ

Crime: 8 ಕೋಟಿ ಮೌಲ್ಯದ ಚಿನ್ನದ ಗಟ್ಟಿ ದೋಚಿದ್ದ ಅಕ್ಕಸಾಲಿಗ ಸೆರೆ

Crime: 8 ಕೋಟಿ ಮೌಲ್ಯದ ಚಿನ್ನದ ಗಟ್ಟಿ ದೋಚಿದ್ದ ಅಕ್ಕಸಾಲಿಗ ಸೆರೆ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

Retirement plan: ನಿವೃತ್ತಿ ಬಳಿಕ ಸಾವಯವ ಕೃಷಿ ಕೈಗೆತ್ತಿಕೊಳ್ಳುವೆ… ಅಮಿತ್‌ ಶಾ

Retirement plan: ನಿವೃತ್ತಿ ಬಳಿಕ ಸಾವಯವ ಕೃಷಿ ಕೈಗೆತ್ತಿಕೊಳ್ಳುವೆ… ಅಮಿತ್‌ ಶಾ

1-horoscope

Daily Horoscope: ಉದ್ಯೋಗದಲ್ಲಿ ಭಿನ್ನ ರೀತಿಯ ಜವಾಬ್ದಾರಿಗಳು, ವ್ಯಾಪಾರಿಗಳಿಗೆ ಲಾಭ

GTD

ಜೆಡಿಎಸ್‌ ಮುನ್ನಡೆಸುವ ಸಾಮರ್ಥ್ಯ ನಿಖಿಲ್‌ಗಿದೆ: ಶಾಸಕ ಜಿ.ಟಿ.ದೇವೇಗೌಡ

CPY–Family

ಶಾಸಕ ಸಿ.ಪಿ.ಯೋಗೇಶ್ವರ್‌ ವಿರುದ್ಧ ಮೊದಲ ಪತ್ನಿ, ಪುತ್ರಿಯಿಂದ ಸುರ್ಜೇವಾಲಗೆ ದೂರು

Ashok-Bjp

ಉಗ್ರರಿಗೆ ಜೈಲಿನಲ್ಲೇ ಅನುಕೂಲ: ರಾಜ್ಯದಲ್ಲಿ ಗೃಹ ಇಲಾಖೆ ಸತ್ತೇ ಹೋಗಿದೆ: ಆರ್‌.ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.