ಹಣ ಕೊಡದಿದ್ದಕ್ಕೆ ಬಾಡಿಗೆ ತಾಯಿಯ ಗರ್ಭಪಾತ!


Team Udayavani, Mar 16, 2020, 3:08 AM IST

hana-koda

ಸಾಂದರ್ಭಿಕ ಚಿತ್ರ

ಬೆಂಗಳೂರು: ಕಾನೂನ್ಮಾತಕವಾಗಿ ಬಾಡಿಗೆ ತಾಯ್ತನಕ್ಕಾಗಿ ಗರ್ಭ ಧರಿಸಿದ್ದ ಮಹಿಳೆ ಬಳಿ ಹಣಕ್ಕೆ ಬೇಡಿಕೆ ಇಟ್ಟಿದಲ್ಲದೆ, ಹಣ ಕೊಡಲು ನಿರಾಕರಿಸಿದಾಗ ಆಕೆ ಮೇಲೆ ಗಂಭೀರವಾಗಿ ಹಲ್ಲೆ ನಡೆಸಿ ಗರ್ಭ ಪಾತ ಮಾಡಿಸಿರುವ ಅಮಾನವೀಯ ಪ್ರಕರಣ ಬೆಳಕಿಗೆ ಬಂದಿದೆ.

ಮೈಕೋ ಲೇಔಟ್‌ ನಿವಾಸಿ 27 ವರ್ಷದ ಸಂತ್ರಸ್ತೆ ನೀಡಿದ ದೂರಿನ ಮೇರೆಗೆ ಬೊಮ್ಮನಹಳ್ಳಿಯ ಸ್ವಾತಿ ಮಹಿಳಾ ಸಂಘಟನೆಯ ಪೂಜಾ, ಪ್ರೇಮಾ, ಆಶಾ, ರೀಟಾ, ಪ್ರಮೀಳಾ ಮತ್ತು ಮಂಜುನಾಥ್‌ ಎಂಬವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಆರೋಪಿ ಗಳು ತಲೆಮರೆಸಿಕೊಂಡಿದ್ದಾರೆ. ಆರೋಪಿಗಳಿಂದ ಗರ್ಭಪಾತಕ್ಕೊಳದ ಮಹಿಳೆಯ ಸ್ಥಿತಿ ಗಂಭೀರವಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿ ದ್ದಾರೆ ಎಂದು ಪೊಲೀಸರು ಹೇಳಿದರು.

ಬಡ ಕುಟುಂಬದ ಸಂತ್ರಸ್ತೆ ಸಂಸಾರದ ನಿರ್ವಹಣೆಗಾಗಿ ಬಾಡಿಗೆ ತಾಯ್ತನಕ್ಕೆ ಒಪ್ಪಿಕೊಂಡಿದ್ದು, ವಿಶ್ವಾಸ್‌ ಫರ್ಟಿಲಿಟಿ ಸೆಂಟರ್‌ ಮೂಲಕ ಬಾಡಿಗೆ ತಾಯಿಯಾಗಿದ್ದರು. ಕಾನೂನ್ಮಾತಕವಾ ಗಿಯೂ ಎಲ್ಲ ಪ್ರಕ್ರಿಯೆ ನಡೆಸಲಾಗಿದೆ. ಮದುರೀಮನಾಗ್‌ ಮತ್ತು ದೀಪಾಂ ಜನಾಗ್‌ ದಂಪತಿಯ ಪ್ರನಾಳ ಶಿಶು ವಿಧಾನದಲ್ಲಿ ಗರ್ಭಧರಿಸಿದ್ದು, ನಾಲ್ಕು ತಿಂಗಳ ಗರ್ಭಿಣಿಯಾಗಿದ್ದರು.

ವಿಶ್ವಾಸ್‌ ಫರ್ಟಿಲಿಟಿ ಸೆಂಟರ್‌ನ ಬಾಡಿಗೆ ತಾಯಂದಿರನ್ನು ನೋಡಿಕೊಳ್ಳುವ ಸಾಯಿ ಆರ್ಟ್‌ ಬ್ಯಾಂಕ್‌ ಸಂಸ್ಥೆಯ ಮಾಲೀಕರಾದ ಗೀತಾ ಅವರ ಪಿಜಿ (ಪೇಯಿಂಗ್‌ ಗೆಸ್ಟ್‌)ಯಲ್ಲಿ ಸಂತ್ರಸ್ತೆ ಯನ್ನು ಪೋಷಣೆ ಮಾಡಲಾಗುತ್ತಿತ್ತು. ಈ ಮಧ್ಯೆ ಆರೋಪಿಗಳು ಪಿಜಿಗೆ ನುಗ್ಗಿ ತಾವುಗಳು ಬೊಮ್ಮನಹಳ್ಳಿಯ “ಸ್ವಾತಿ ಮಹಿಳಾ ಸಂಘಟನೆ’ ಸದಸ್ಯರು ಎಂದು ಹೇಳಿ, ಬಾಡಿಗೆ ತಾಯ್ತನಕ್ಕೆ ಪಡೆಯುತ್ತಿರುವ ಹಣದಲ್ಲಿ ತಮಗೂ ಪಾಲು ಕೊಡುವಂತೆ ಕೇಳಿದ್ದಾರೆ.

ಅದಕ್ಕೆ ಗರ್ಭಿಣಿ ಹಾಗೂ ಪಿಜಿ ಮಾಲೀಕರಾದ ಗೀತಾ ನಿರಾಕರಿಸಿದ್ದಾರೆ. ಅದಕ್ಕೆ ಆರೋಪಿಗಳು, ಒಂದು ವೇಳೆ ಹಣ ಕೊಡದಿದ್ದರೆ ಗರ್ಭಿಣಿಯರಿಗೆ ಹೊಡೆದು ಗರ್ಭಪಾತ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ. ಆಗ ಸಂತ್ರಸ್ತೆ, ಹೊಟ್ಟೆಪಾಡಿಗಾಗಿ ಬಾಡಿಗೆ ತಾಯಿ ಆಗಿದ್ದೇನೆ ಬಿಟ್ಟು ಬಿಡಿ ಎಂದು ಗೋಗರೆದಿದ್ದಾರೆ. ಆಗ ಪ್ರೇಮಾ ಎಂಬ ಆರೋಪಿ, “ನೀನು ಹಾಗೂ ನಿನ್ನ ಮಗುವನ್ನು ಉಳಿಸಿಕೊಳ್ಳಬೇಕಾದರೆ ನಮಗೆ ಹಣ ಕೊಡಲೇಬೇಕು’ ಎಂದು ಜೀವ ಬೆದರಿಕೆ ಹಾಕಿದ್ದಾರೆ ಎಂದು ಸಂತ್ರಸ್ತೆ ದೂರಿನಲ್ಲಿ ಆರೋಪಿಸಿದ್ದಾರೆ.

ಕೂದಲಿಡಿದು ಎಳೆದಾಡಿ, ಮನಸೋಯಿಚ್ಛೆ ಹಲ್ಲೆ: ಮಾ.11ರಂದು ರಾತ್ರಿ 10 ಗಂಟೆಗೆ ಮತ್ತೂಮ್ಮೆ ಪಿಜಿಗೆ ಬಂದ ಆರೋಪಿಗಳು, “ಈ ಮೊದಲು ಹೇಳಿದಂತೆ ಮಾಮೂಲಿ ಕೊಡಬೇ ಕೆಂದು ಹೇಳಲಾಗಿತ್ತು. ಇಷ್ಟು ದಿನಗಳಾದರೂ ಏಕೆ ನೀಡಿಲ್ಲ ಎಂದು ಸಂತ್ರಸ್ತೆಗೆ ಬೆದರಿಕೆ ಹಾಕಿದ್ದಾರೆ. ಬಳಿಕ ಆಕೆಯ ಕೂದಲನ್ನು ಹಿಡಿದು ಎಳೆದಾಡಿ ಮನಸೋ ಇಚ್ಛೆ ಹಲ್ಲೆ ನಡೆಸಿ, ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ.

ಆಕೆಯ ಮೇಲಿನ ಹಲ್ಲೆ ತಡೆಯಲು ಮುಂದಾದ ಪಿಜಿ ಮುಖ್ಯಸ್ಥೆ ಗೀತಾ ಹಾಗೂ ಇತರೆ ಯುವತಿಯರಿಗೂ ಥಳಿಸಿದ್ದಾರೆ. ಈ ವೇಳೆ ಸಂತ್ರಸ್ತೆ, ತಾನೂ ಗರ್ಭಿಣಿ ಯಾಗಿದ್ದೇನೆ ಹೊಡೆಯಬೇಡಿ ಎಂದು ಅಂಗಲಾಚಿದರೂ ದುಷ್ಕರ್ಮಿಗಳು, ಆಕೆಯನ್ನು ನೆಲಕ್ಕೆ ಬೀಳಿಸಿ ಕಾಲಿನಲ್ಲಿ ಒದ್ದಿದ್ದಾರೆ. ಈ ವೇಳೆ ಸಂತ್ರಸ್ತೆಗೆ ತೀವ್ರ ರಕ್ತಸ್ರಾವ ವಾಗಿದ್ದು, ಅಸ್ವಸ್ಥಗೊಂಡು ಕುಸಿದು ಬಿದ್ದಿ ದ್ದಾಳೆ. ಆದರೂ ಬಿಡದ ಆರೋಪಿ ಮಹಿಳೆಯರು ಗರ್ಭಪಾತ ಮಾಡಿಯೇ ಹೋಗುತ್ತೇವೆ ಎಂದು ಕಾಲಿನಿಂದ ಹೊಟ್ಟೆಗೆ ಒದ್ದಿದ್ದಾರೆ.

ಪರಿಣಾಮ ಇನ್ನಷ್ಟು ರಕ್ತಸ್ರಾವವಾಗಿ ಸಂತ್ರಸ್ತೆ ಅರೆಪ್ರಜ್ಞಾ ಸ್ಥಿತಿ ತಲುಪಿಸಿದ್ದಾರೆ. ಅನಂ ತರ ಆರೋಪಿಗಳು ಹೋಗುತ್ತಿದ್ದಂತೆ ಪಿಜಿಯಲ್ಲಿದ್ದ ಮಹಿಳೆಯರು ಸಂತ್ರಸ್ತೆ ಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಪರೀಕ್ಷಿಸಿದ ವೈದ್ಯರು ಗರ್ಭಪಾತವಾಗಿದೆ ಎಂದು ದೃಢಪಡಿಸಿದ್ದಾರೆ. ಹೀಗಾಗಿ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸಂತ್ರಸ್ತೆ ದೂರು ನೀಡಿ ದ್ದಾರೆ ಎಂದು ಪೊಲೀಸರು ಹೇಳಿದರು.

ಆರೋಪಿಗಳು ಸ್ವಾತಿ ಮಹಿಳಾ ಸಂಘಟನೆಗೆ ಸೇರಿದವರಾಗಿದ್ದು, ಇದು ವರೆಗೂ ಬಂಧಿಸಿಲ್ಲ. ಸಂತ್ರಸ್ತೆ ಚೇತರಿಸಿಕೊಳ್ಳುತ್ತಿದ್ದಾರೆ.
-ಶ್ರೀನಾಥ್‌ ಮಹದೇವ್‌ ಜೋಶಿ, ಡಿಸಿಪಿ ಆಗ್ನೇಯ ವಿಭಾಗ

ಟಾಪ್ ನ್ಯೂಸ್

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.