ಎಸಿಬಿ ದಾಳಿ: ಇನ್ನಷ್ಟು ಭ್ರಷ್ಟಾಚಾರ ಬಯಲು


Team Udayavani, Nov 24, 2021, 11:00 AM IST

BDA

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ( ಬಿಡಿಎ)ದ ಬ್ರಹ್ಮಾಂಡ ಭ್ರಷ್ಟಾಚಾರ ಬಯಲಾದ ಬೆನ್ನ ಲ್ಲೇ ಅದರ ಇನ್ನಷ್ಟು ಹುಳುಕು ಹೊರ ತೆಗೆಯಲು ಮುಂದಾಗಿರುವ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಮಂಗಳವಾರ ನಗರದ ನಾಲ್ಕು ಕಡೆಗಳಲ್ಲಿರುವ ಬಿಡಿಎ ಕಚೇರಿಗಳ ಮೇಲೆ ಏಕಕಾಲಕ್ಕೆ ದಾಳಿ ಮುಂದುವರಿಸಿದೆ.

ಶುಕ್ರವಾರ ಮತ್ತು ಶನಿವಾರ ದಾಳಿ ನಡೆಸಿದ್ದ ಎಸಿಬಿ ಅಧಿಕಾರಿಗಳು, ಮಂಗಳವಾರ ವೈಯಾಲಿಕಾವಲ್‌ ನಲ್ಲಿರುವ ಬಿಡಿಎ ಕೇಂದ್ರ ಕಚೇರಿ ಮೇಲೆ ದಾಳಿ ನಡೆಸಿದ್ದರು. ಇದೇ ವೇಳೆ ಆರ್‌.ಟಿ.ನಗರಲ್ಲಿನ ಬಿಡಿಎ ಉತ್ತರ ವಿಭಾಗ ಕಚೇರಿ, ವಿಜಯನಗರದಲ್ಲಿ ಪಶ್ಚಿಮ ವಿಭಾಗ ಕಚೇರಿ, ಎಚ್‌ಎಸ್‌ಆರ್‌ ಲೇಔಟ್‌ನ ಪೂರ್ವ ವಿಭಾಗ ಕಚೇರಿ, ಬನಶಂಕರಿಯಲ್ಲಿನ ದಕ್ಷಿಣ ವಿಭಾಗದ ಕಚೇರಿಗಳ ಮೇಲೆ ದಾಳಿ ನಡೆಸಿ ಕಡತಗಳನ್ನು ಪರಿಶೀಲನೆ ನಡೆಸಲಾಯಿತು.

ಈ ವೇಳೆ ಬಿಡಿಎನಲ್ಲಿ ನಡೆಯುತ್ತಿದ್ದ ಇನ್ನಷ್ಟು ಅಕ್ರಮಗಳು ಬಯಲಾಗಿದ್ದು, ನಿವೇಶನ ಹಂಚಿಕೆಯ ಪ್ರತಿ ಹಂತದಲ್ಲೂ ಲಂಚ ಮತ್ತು ಭ್ರಷ್ಟಾಚಾರ ನಡೆದಿ ರುವುದು ಬೆಳಕಿಗೆ ಬಂದಿದೆ. ದಾಳಿಯ ವೇಳೆ ನಕಲಿ ದಾಖಲೆಗಳನ್ನು ಸೃಷ್ಟಿಸಿ ಅನರ್ಹ ವ್ಯಕ್ತಿಗಳಿಗೆ ಪರಿಹಾರ ನೀಡಿರುವುದು. ಬಿಡಿಎ ಅನುಮೋದಿತ ನಕ್ಷೆ ರೀತಿಯಲ್ಲಿ ಕಟ್ಟವನ್ನು ನಿರ್ಮಾಣ ಮಾಡದೆ ಇರುವುದು.

ಇದನ್ನೂ ಓದಿ:- ಜಲಿಯನ್ ವಾಲಾಬಾಗ್ ಎಲ್ಲರಿಗೂ ತಲುಪಲೆಂದೇ ಈ ಸಿನಿಮಾ ಮಾಡಿದ್ದು : ಸೂಜಿತ್ ಸರ್ಕಾರ್

ಹರಾಜು ಪ್ರಕ್ರಿಯೆ ನಡೆಸದೆ ಕಾರ್ನರ್‌ (ಮೂಲೆ) ಸೈಟ್‌ಗಳನ್ನು ಹಂಚಿಕೆ ಮಾಡಿ ಸರ್ಕಾರಕ್ಕೆ ಕೋಟ್ಯಂತರ ರೂ. ನಷ್ಟವನ್ನುಂಟು ಮಾಡಿರುವುದು ಸೇರಿ ಸಾಲು ಸಾಲು ಅಕ್ರಮಗಳು ಬೆಳಕಿಗೆ ಬಂದಿವೆ ಎಂದು ಎಸಿಬಿ ತಿಳಿಸಿದೆ. ವಿವಾದಿತ ಅರ್ಕಾವತಿ, ಕೆಂಪೇಗೌಡ ಹಾಗೂ ಶಿವರಾಮ್‌ ಕಾರಂತ್‌ ಬಡಾವಣೆಗಳಲ್ಲಿ ಬಿಡಿಎ ಹಂಚಿಕೆ ಮಾಡಿರುವ ನಿವೇ ಶನಗಳು ಹಾಗೂ ಬಡಾವಣೆಗಾಗಿ ಭೂ ಸ್ವಾಧೀನಕ್ಕಾಗಿ ಪಡೆದಿರುವ ಜಾಗಗಳ ದಾಖಲಾತಿಗಳನ್ನು ಈಗಾಗಲೇ ವಶಕ್ಕೆ ಪಡೆದುಕೊಂಡಿರುವ ಅಧಿಕಾರಿಗಳು ಮೂಲ ದಾಖಲಾತಿಗಳ ಶೋಧ ನಡೆಸುತ್ತಿದ್ದು, ಅಸಲಿ ದಾಖಲಾತಿಗಾಗಿ ಕಂದಾಯ ಇಲಾಖೆಯಿಂದ ಪಡೆಯಲಾಗುವುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

 ಬಿ.ಜೆ.ಪುಟ್ಟಸ್ವಾಮಿ ಅವರಿಂದಲೂ ದೂರು: ವಿಧಾನಪರಿಷತ್‌ ಮಾಜಿ ಸದಸ್ಯ ಬಿ.ಜೆ ಪುಟ್ಟಸ್ವಾಮಿ ನೀಡಿದ ದೂರಿನ ಆಧಾರದ ಮೇಲೆ ಬಿಡಿಎ ಮೇಲೆ ಎಸಿಬಿ ಅಧಿಕಾರಿಗಳು ದಿಢೀರ್‌ ದಾಳಿ ಮಾಡಿದ್ದಾರೆ. ಬಿಡಿಎ 3,702 ಎಕರೆ ಜಾಗದಲ್ಲಿ ಅನಧಿಕೃತವಾಗಿ ಬಡಾವಣೆಗಳನ್ನು ನಿರ್ಮಾಣ ಮಾಡಿದೆ. ಭ್ರಷ್ಟಚಾರ ಮಾಡಿ ಕೆಲ ಬಿಡಿಎ ಅಧಿಕಾರಿಗಳು ಕೋಟಿÂಧಿ ಪತಿಗಳಾಗಿದ್ದಾರೆ.

ಈ ಸಂಬಂಧ ಎಸಿಬಿ ಹಿರಿಯ ಅಧಿಕಾರಿಯೊಬ್ಬರಿಗೆ 3-4 ದಿನಗಳ ಹಿಂದೆ ದಾಖಲೆ ಸಮೇತ ದೂರು ನೀಡಿದ್ದೇನೆ. ಈ ಹಿನ್ನೆಲೆಯಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಿಎಂಆರ್‌ ಡಿನಲ್ಲಿ 8,456 ಎಕರೆ ಅನಧಿಕೃತ ಬಡಾವಣೆ ನಿರ್ಮಾಣ ಮಾಡಲಾಗುತ್ತಿದೆ ಎಂದು ವಿಧಾನ ಪರಿಷತ್‌ ಮಾಜಿ ಸದಸ್ಯ ಬಿ.ಜೆ ಪುಟ್ಟಸ್ವಾಮಿ ತಿಳಿಸಿ ದ್ದಾರೆ. ಇದುವರೆಗೂ 40ಕ್ಕೂ ಅಧಿಕ ದೂರುಗಳು ಬಂದಿವೆ ಎಂದು ಎಸಿಬಿ ಮೂಲಗಳು ತಿಳಿಸಿವೆ.

ಸಂತ್ರಸ್ತರು ದೂರು ನೀಡಬಹುದು ಬಿಡಿಎ ಕಚೇರಿಯಲ್ಲಿನ ಅವ್ಯವಹಾರದ ಸಂಬಂಧ ಈಗಾಗಲೇ ಹಲವು ದೂರುಗಳು ಬಂದಿವೆ. ವಂಚನೆಗೊಳಗಾಗಿರುವ ಸಾರ್ವಜನಿಕರಿಗೆ ಬಿಡಿಎ ಕಚೇರಿಯಲ್ಲಿನ ಅವ್ಯಹಾರದ ಕುರಿತು ಎಸಿಬಿ ಕಚೇರಿಗೆ ಆಗಮಿಸಿ ಲಿಖೀತ ದೂರನ್ನು ನೀಡಬಹುದು ಎಂದು ಎಸಿಬಿ ಸಾರ್ವಜನಿಕರಲ್ಲಿ ಮನವಿ ಮಾಡಿದೆ.

ಈ ಬೆಳವಣಿಗೆಗೆ ಸಂಬಂಧಿಸಿದಂತೆ ಇಂದು ಮುಂಜಾನೆ ಆದಾಯಕ್ಕೆ ಮೀರಿದ ಆಸ್ತಿಯ ಆರೋಪದಡಿಯಲ್ಲಿ ಹಲವು ಅಧಿಕಾರಿಗಳ ಮತ್ತು ಅವರ ಸಹಚರರ ಮನೆಗಳಿಗೆ ಏಸಿಬಿ ತನ್ನ ಮೆಗಾ ಬೇಟೆ ಆರಂಭಿಸಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.