ಆರು ಮಂದಿ ಸರ್ಕಾರಿ ಅಧಿಕಾರಿಗಳ ಮೇಲೆ ಎಸಿಬಿ ದಾಳಿ


Team Udayavani, Apr 13, 2018, 12:08 PM IST

ACB2.jpg

ಬೆಂಗಳೂರು: ಆದಾಯ ಮೀರಿ ಆಸ್ತಿಗಳಿಸಿದ ಆರೋಪದ ಮೇಲೆ ಆರು ಸರ್ಕಾರಿ ಅಧಿಕಾರಿಗಳ ನಿವಾಸ ಮತ್ತು ಕಚೇರಿಗಳ ಮೇಲೆ ಎರಡು ದಿನಗಳ ಹಿಂದೆ ದಾಳಿ ನಡೆಸಿದ್ದ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಇದೀಗ ಆ ಅಧಿಕಾರಿಗಳ ದಾಖಲೆಗಳ ಪರಿಶೀಲನೆ ವೇಳೆ ಪತ್ತೆಯಾದ ಸ್ಥಿರ ಮತ್ತು ಚರ ಆಸ್ತಿಗಳ ವಿವರ ಬಿಡುಗಡೆ ಮಾಡಿದೆ.

ಎಸಿಬಿ ದಾಳಿಗೊಳಗಾದ ಹುಬ್ಬಳ್ಳಿಯ ಕೆಪಿಟಿಸಿಎಲ್‌ ಕಚೇರಿಯ ಸಹಾಯಕ ಕಾರ್ಯಪಾಲಕ ಅಭಿಯಂತರ ಮಲ್ಲಿಕಾರ್ಜುನ್‌ ಎನ್‌.ಸವಣೂರ ಬಳಿ ಹುಬ್ಬಳ್ಳಿಯ ಶಿರೂರು ಪಾರ್ಕ್‌ನಲ್ಲಿ ಒಂದು ವಾಸದ ಮನೆ, 4 ಖಾಲಿ ಫ್ಲಾಟ್‌ಗಳು, ಶಿರಹಟ್ಟಿಯ ನವೆಬಾವನೂರು ಗ್ರಾಮದಲ್ಲಿ 8 ಎಕರೆ ಕೃಷಿ ಜಮೀನು, 300 ಗ್ರಾಂ ಚಿನ್ನ, 432 ಗ್ರಾಂ ಬೆಳ್ಳಿ, 1 ಬೈಕ್‌ ಮತ್ತು 6 ಮೊಬೈಲ್‌ಗ‌ಳು ಇವೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಅದೇರೀತಿ ಧಾರವಾಢ ಅರಣ್ಯ ಇಲಾಖೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪಾರ್ಶ್ವನಾಥ್‌ ವರೂರ ಅವರಲ್ಲಿ ದೊಡ್ಡನಾಯಕನ ಕೊಪ್ಪ ವಾಸದ 1 ಮನೆ, ಹು-ಧಾ ನಗರದಲ್ಲಿ 5 ಖಾಲಿ ಫ್ಲಾಟ್‌ಗಳು, ಮಾರಕಟ್ಟಿ ಗ್ರಾಮದಲ್ಲಿ 1.20 ಎಕರೆ ಮತ್ತು ಛಟ್ಟಿ ಗ್ರಾಮದಲ್ಲಿ 1.05 ಎಕರೆ ಕೃಷಿ ಜಮೀನು, 377 ಗ್ರಾಂ ಚಿನ್ನ, 2 ಕೆ.ಜಿ. 290 ಗ್ರಾಂ ಬೆಳ್ಳಿ, 1 ಮಾರುತಿ ಆಲ್ಟೋ ಕಾರು, 1 ಬೈಕ್‌, 66 ಸಾವಿರ ನಗದು ಹಾಗೂ ವಿವಿಧ ಬ್ಯಾಂಕ್‌ ಖಾತೆಗಳಲ್ಲಿ 13.50 ಲಕ್ಷ ನಗದು ಪತ್ತೆಯಾಗಿದೆ.

ಕುಂದಾಪುರ ತಾಲೂಕು ಪಂಚಾಯಿತಿ ಜೂನಿಯರ್‌ ಎಂಜಿನಿಯರ್‌ ರವಿ ಶಂಕರ್‌ ಬಳಿ ಕುಂದಾಪುರದ 3 ಮನೆಗಳು, 4 ನಿವೇಶನಗಳು, 1.113 ಕೆ.ಜಿ. ಚಿನ್ನ, 1.074 ಕೆ.ಜಿ. ಬೆಳ್ಳಿ, 1 ಮಾರುತಿ ಸ್ವಿಫ್ಟ್ ಕಾರು, 1 ಬೈಕ್‌, 18.79 ಲಕ್ಷ ನಗದು ಹಾಗೂ 2 ಐಪೋನ್‌, 2 ಲಕ್ಷ ರೂ. ಮೌಲ್ಯದ ಗೃಹೋಪಯೋಗಿ ವಸ್ತುಗಳು ಇವೆ.

ಬೆಂಗಳೂರಿನ ತಲಘಟ್ಟಪುರದ ಬಿಬಿಎಂಪಿ ಕಂದಾಯ ನಿರೀಕ್ಷಕ ಜಿ.ಎಂ.ಶಿವಕುಮಾರ್‌ ಅವರಿಗೆ ವಾಜರಹಳ್ಳಿಯಲ್ಲಿ 2 ವಸತಿ ಸಂಕೀರ್ಣ, 4 ನಿವೇಶನಗಳು, 880 ಗ್ರಾಂ ಚಿನ್ನ, 4.148 ಕೆ.ಜಿ. ಬೆಳ್ಳಿ, 1 ಟೋಯೋಟಾ ಕ್ರಿಸ್ಟಾ ಕಾರು, 2 ಮಾರುತಿ ಆಲ್ಟೋ ಕಾರು, 1 ಬೈಕ್‌, 4.23 ಲಕ್ಷ ನಗದು, 2 ಲಕ್ಷ ರೂ.ನ ಎಲ್‌ಐಸಿ ಪಾಲಿಸಿಗಳು, 16.69 ಲಕ್ಷ ರೂ. ಮೌಲ್ಯದ ಗೃಹೋಪಯೋಗಿ ವಸ್ತುಗಳು ಪತ್ತೆಯಾಗಿವೆ.

ಮೈಸೂರು ಕಾರ್ಪೊರೇಷನ್‌ ವಾಟರ್‌ ಇನ್‌ಸ್ಪೆಕ್ಟರ್‌ ಟಿ.ಎಸ್‌.ಕೃಷ್ಣೇಗೌಡ ಅವರಿಗೆ ಮೈಸೂರಿನಲ್ಲಿ 2 ವಾಸದ ಮನೆ, 1 ನಿವೇಶನ, ತಿಪ್ಪೂರು ಗ್ರಾಮದಲ್ಲಿ 20 ಗುಂಟೆ ಜಮೀನು, 532 ಗ್ರಾಂ ಚಿನ್ನ, 750 ಗ್ರಾಂ ಬೆಳ್ಳಿ, 1 ಸ್ಯಾಂಟ್ರೋ ಕಾರು ಹಾಗೂ 3 ಬೈಕ್‌ಗಳು ಮತ್ತು 1 ಲಕ್ಷ ರೂ. ನಗದು ಸಿಕ್ಕಿದೆ.

ದಾವಣಗೆರೆಯ ಗುರುಸಿದ್ದಾಪುರ ಗ್ರಾಮದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಾಗರಾಜ್‌ ಬಳಿ ದಾವಣಗೆರೆಯ ಎಸ್‌ಎಸ್‌ ಲೇಔಟ್‌ನಲ್ಲಿ 1 ವಾಸದ ಮನೆ, ವೆಂಕಾಟಪುರದ ವಿವಿಧ ಸರ್ವೆ ನಂಬರ್‌ಗಳಲ್ಲಿ 33.21 ಎಕರೆ ಕೃಷಿ ಜಮೀನು, 586 ಗ್ರಾಂ ಚಿನ್ನ, 250 ಗ್ರಾಂ ಬೆಳ್ಳಿ, 2 ಕಾರು, 4 ಬೈಕ್‌ಗಳು, 2 ಮೊಬೈಲ್‌ ಮತ್ತು 3 ಲಕ್ಷ ರೂ. ಮೌಲ್ಯದ ಗೃಹೋಪಯೋಗಿ ವಸ್ತುಗಳು ಪತ್ತೆಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆರೋಪಿತ ಆರು ಮಂದಿ ಸರ್ಕಾರಿ ಅಧಿಕಾರಿಗಳ ವಿರುದ್ಧ ತನಿಖೆ ಮುಂದುವರಿದಿದ್ದು, ಇವರು ಹೊಂದಿರುವ ಆಸ್ತಿ-ಪಾಸ್ತಿಗಳ ಮೂಲದ ಬಗ್ಗೆ ತನಿಖೆ ಹಾಗೂ ದಾಖಲೆಗಳ ಪರಿಶೀಲನಾ ಕಾರ್ಯ ಮುಂದುವರಿಸಲಾಗಿದೆ ಎಂದು ಎಸಿಬಿ ಅಧಿಕಾರಿಗಳು ಹೇಳಿದ್ದಾರೆ.

ಟಾಪ್ ನ್ಯೂಸ್

Kharge 2

Congress ವರಿಷ್ಠರ ಸೂಚನೆಯಂತೆ ವರ್ತಿಸಿ: ಎಂಪಿ ಅಧೀರ್‌ಗೆ ಖರ್ಗೆ ತಾಕೀತು

Lok Sabha Elections ಹಂತ-5: ಇಂದು ಮತ; ರಾಹುಲ್‌, ರಾಜನಾಥ್‌,ಸ್ಮೃತಿ ಭವಿಷ್ಯ ನಿರ್ಧಾರ

Lok Sabha Elections ಹಂತ-5: ಇಂದು ಮತ; ರಾಹುಲ್‌, ರಾಜನಾಥ್‌,ಸ್ಮೃತಿ ಭವಿಷ್ಯ ನಿರ್ಧಾರ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

bCharmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

7

ಇನ್‌ಸ್ಪೆಕ್ಟರ್‌ ಹೆಸರಲ್ಲಿ ಸುಲಿಗೆ: ಬೆಸ್ಕಾಂ ಎಂಜಿನಿಯರ್‌ ಸೆರೆ

Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ

Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Kharge 2

Congress ವರಿಷ್ಠರ ಸೂಚನೆಯಂತೆ ವರ್ತಿಸಿ: ಎಂಪಿ ಅಧೀರ್‌ಗೆ ಖರ್ಗೆ ತಾಕೀತು

1-qwewqe

Patanjali ಸೋನ್‌ ಪಾಪಡಿ ಪ್ರಕರಣದಲ್ಲಿ ಮೂವರಿಗೆ ಜೈಲು

Lok Sabha Elections ಹಂತ-5: ಇಂದು ಮತ; ರಾಹುಲ್‌, ರಾಜನಾಥ್‌,ಸ್ಮೃತಿ ಭವಿಷ್ಯ ನಿರ್ಧಾರ

Lok Sabha Elections ಹಂತ-5: ಇಂದು ಮತ; ರಾಹುಲ್‌, ರಾಜನಾಥ್‌,ಸ್ಮೃತಿ ಭವಿಷ್ಯ ನಿರ್ಧಾರ

police crime

National Conference ರೋಡ್‌ ಶೋ ವೇಳೆ ಮೂವರಿಗೆ ಚಾಕು ಇರಿತ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.