ಆರು ಅಧಿಕಾರಿಗಳಿಗೆ ಎಸಿಬಿ ಶಾಕ್‌ : 24 ಕಡೆ ದಾಳಿ 


Team Udayavani, Mar 21, 2018, 10:40 AM IST

ACB-Nameplate-600.jpg

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪ ಹಿನ್ನೆಲೆಯಲ್ಲಿ ಆರು ಮಂದಿ ಸರಕಾರಿ ಅಧಿಕಾರಿಗಳಿಗೆ ಭ್ರಷ್ಟಾಚಾರ ನಿಗ್ರಹದಳ (ಎಸಿಬಿ) ಬಿಸಿಮುಟ್ಟಿಸಿದೆ. ದಾವಣಗೆರೆ ನಗರಾಭಿವೃದ್ಧಿ  ಪ್ರಾಧಿಕಾರ ಜಂಟಿ ನಿರ್ದೇಶಕ ಗೋಪಾಲಕೃಷ್ಣ, ಕಳಸದ ಕಂದಾಯ ನಿರೀಕ್ಷಕ, ಪ್ರಭಾರ ತಹಶೀಲ್ದಾರ್‌ ಕೀರ್ತಿ ಜೈನ್‌ ಸಹಿತ ವಿವಿಧ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಲವು ಇಲಾಖೆಗಳ ಆರು ಮಂದಿ ಅಧಿಕಾರಿಗಳಿಗೆ ಸೇರಿದ ಕಚೇರಿ, ನಿವಾಸಗಳು, ಸಂಬಂಧಿಕರ ಮನೆಗಳ ಮೇಲೆ ಮಂಗಳವಾರ ಬೆಳಿಗ್ಗೆ ಏಕಕಾಲಕ್ಕೆ ದಾಳಿ ನಡೆಸಿರುವ ಎಸಿಬಿ ಅಧಿಕಾರಿಗಳು ಅಪಾರ ಪ್ರಮಾಣದ ಆಸ್ತಿ ದಾಖಲೆಗಳ ಪರಿಶೀಲನೆ ನಡೆಸಿ ವಶಕ್ಕೆ ಪಡೆದರು.

ಆರೋಪಿ ಅಧಿಕಾರಿಗಳಿಗೆ ಸೇರಿದ ದಾವಣಗೆರೆ, ತುಮಕೂರು, ಚಿತ್ರದುರ್ಗ, ಬೀದರ್‌, ಕಲಬುರಗಿ, ಬೆಂಗಳೂರು, ಬೆಳಗಾವಿ, ಉತ್ತರ ಕನ್ನಡ, ಧಾರವಾಡ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯಲ್ಲಿನ ಕಚೇರಿ, ನಿವಾಸ ಸಹಿತ ಒಟ್ಟು 24 ಸ್ಥಳಗಳಲ್ಲಿ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ಆರೋಪಿತರು ಅಕ್ರಮ ಆಸ್ತಿ ಹೊಂದಿದ ಬಗ್ಗೆ ವಿಶ್ವಾಸಾರ್ಹ ಮೂಲಗಳ ಮಾಹಿತಿ ಆಧರಿಸಿ ಅವರಿಗೆ ಸೇರಿರುವ ನಿವಾಸಗಳು ಹಾಗೂ ಕಚೇರಿಗಳಲ್ಲಿ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ನಡೆಸಲಾಗಿದೆ. ಅಕ್ರಮ  ಆಸ್ತಿ ಹೊಂದಿದ ಬಗ್ಗೆ ಮತ್ತಷ್ಟು ದಾಖಲೆಗಳಲ್ಲಿ ಖಚಿತವಾಗಬೇಕಿದ್ದು,  ಕಾರ್ಯಾಚರಣೆ ಮುಂದುವರಿಸಲಾಗಿದೆ ಎಂದು ಎಸಿಬಿ ಅಧಿಕಾರಿಗಳು ತಿಳಿಸಿದರು.

ದಾಳಿಗೊಳಗಾದ ಅಧಿಕಾರಿಗಳು ಹಾಗೂ ದಾಳಿ ನಡೆಸಿದ ಸ್ಥಳಗಳು
1. ಗೋಪಾಲಕೃಷ್ಣ- ಜಂಟಿ ನಿರ್ದೇಶಕ ದಾವಣಗೆರೆ ಹರಿಹರ ನಗರಾಭಿವೃದ್ಧಿ ಪ್ರಾಧಿಕಾರ, ಮಹಾನಗರ ಪಾಲಿಕೆ ಪ್ರಭಾರ ಆಯುಕ್ತ ( ದಾವಣಗೆರೆಯ ಅವರ ನಿವಾಸ ಹಾಗೂ ಎರಡೂ ಕಚೇರಿ)
2. ತಿಪ್ಪೇಸ್ವಾಮಿ –  ಸಹಾಯಕ ಆಯುಕ್ತ, ತುಮಕೂರು ಉಪವಿಭಾಗ  ( ತುಮಕೂರಿನ ನಿವಾಸ ಹಾಗೂ ಕಚೇರಿ, ಚಿತ್ರದುರ್ಗದ ಬೆಳಘಟ್ಟದ ನಿವಾಸ)
3. ವಿಜಯ್‌ ಕುಮಾರ್‌ ಮಾಶೆಟ್ಟಿ- ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ , ಕಾರಂಜ ಉಪಕಾಲುವೆ ಯೋಜನೆ, ಹುಮ್ನಾಬಾದ್‌, ( ಹುಮ್ನಾಬಾದ್‌ ಕಚೇರಿ ಹಾಗೂ ಮನೆ, ಬೀದರ್‌ನ ನಿವಾಸ)
4. ಕಿರಣ್‌ ಸುಬ್ಟಾರಾವ್‌ ಭಟ್‌ -ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ, ಬೆಳಗಾವಿ ಸ್ಮಾರ್ಟ್‌ ಸಿಟಿ ಯೋಜನೆ ( ಕಚೇರಿ, ಬೆಳಗಾವಿಯಲ್ಲಿರುವ ಎರಡು ನಿವಾಸ, ಬೆಂಗಳೂರಿನ ಬನಶಂಕರಿಯಲ್ಲಿರುವ ನಿವಾಸ, ಉತ್ತರಕನ್ನಡ ಜಿಲ್ಲೆಯ ಹಸುರುಗೋಡುವಿನ ಮನೆ)
5. ಶ್ರೀಪತಿ ದೊಡ್ಡಲಿಂಗಣ್ಣವರ್‌ – ಉಪಮುಖ್ಯ ಭದ್ರತೆ ಹಾಗೂ ಜಾಗೃತಾಧಿಕರಿ, ಕೆಆರ್‌ಟಿಸಿ, ಕಲಬುರಗಿ (ಕಚೇರಿ, ಕಚೇರಿ, ಧಾರವಾಡದಲ್ಲಿ ಹೊಂದಿರುವ ಎರಡು ಮನೆ)
6. ಕಳಸಾ ಹೋಬಳಿ (ಕಚೇರಿ, ನಿವಾಸ, ಉಜಿರೆ,  ಮೂಡಿಗೆರೆ ತಾಲೂಕಿನ ಸಂಸೆಯಲ್ಲಿರುವ ನಿವಾಸಗಳು)

ಟಾಪ್ ನ್ಯೂಸ್

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

NIA (2)

Rameshwaram Cafe case: ಎನ್‌ಐಎಯಿಂದ ಸಹ ಸಂಚುಕೋರನ ಬಂಧನ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ: ರಕ್ಷಾ ರಾಮಯ್ಯ

Raksha Ramaiah: ಯಾರಿಗೆ ಟಿಕೆಟ್‌ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Narayan Gowda: ಹೆಚ್ಚಿನ ಮತಗಳಿಂದ ಎಚ್‌ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.