ಡಿ.29ರಿಂದ ಶಿಕ್ಷಕರ ವರ್ಗಾವಣೆ ಅರ್ಜಿ ಸ್ವೀಕಾರ
Team Udayavani, Dec 23, 2017, 6:00 AM IST
ಬೆಂಗಳೂರು: ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. ಡಿ.29ರಿಂದ ಅರ್ಹ ಶಿಕ್ಷಕರು ವರ್ಗಾವಣೆಗೆ ಅರ್ಜಿ ಸಲ್ಲಿಸಬಹುದು.
ಶಾಲಾ ಶಿಕ್ಷಕರ ವರ್ಗಾವಣೆಯ ಮಾರ್ಗಸೂಚಿ ಈಗಾಗಲೇ ಬಿಡುಗಡೆಯಾಗಿದೆ. ಇಲಾಖೆ ಅಧಿಕಾರಿಗಳು ವರ್ಗಾವಣೆ ಪ್ರಕ್ರಿಯೆ ವೇಳಾಪಟ್ಟಿಯನ್ನು ಸಿದ್ಧಪಡಿಸಿದ್ದಾರೆ. ಸಾಫ್ಟ್ವೇರ್ ಉನ್ನತೀಕರಿಸಲು ಕಾಲಾವಕಾಶ ತೆಗೆದುಕೊಂಡ ಹಿನ್ನೆಲೆಯಲ್ಲಿ ವರ್ಗಾವಣೆ ಪ್ರಕ್ರಿಯೆ ಆರಂಭ ವಿಳಂಬವಾಗಿದೆ.
ವರ್ಗಾವಣೆ ಸಾಫ್ಟ್ವೇರ್ ಉನ್ನತೀಕರಿಸುವ ಪ್ರಕ್ರಿಯೆ ಈಗ ಬಹುತೇಕ ಪೂರ್ಣಗೊಂಡಿದ್ದರಿಂದ ಇಲಾಖೆಯ ಆಯುಕ್ತರು ಶುಕ್ರವಾರ ಸಂಜೆ ವರ್ಗಾವಣೆಯ ಕಡತಕ್ಕೆ ಸಹಿ ಹಾಕಿ, ವೇಳಾಪಟ್ಟಿ ಪ್ರಕಟಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವರ್ಗಾವಣೆ ವೇಳಾಪಟ್ಟಿಯನ್ನು ಇಲಾಖೆಯಿಂದ ಅಧಿಕೃತವಾಗಿ ಇನ್ನಷ್ಟೇ ಪ್ರಕಟಿಸಬೇಕಿದೆ. ಡಿ.29ರಿಂದ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಜನವರಿ ಅಂತ್ಯದ ವರೆಗೂ ಪ್ರಕ್ರಿಯೆ ನಡೆಯಲಿದ್ದು, ವರ್ಗಾವಣೆ ಪಡೆದ ಶಿಕ್ಷಕರಿಗೆ ಶೈಕ್ಷಣಿಕ ವರ್ಷದ ಕೊನೆಯಲ್ಲಿ ಆದೇಶ ಪ್ರತಿ ನೀಡಲಾಗುತ್ತದೆ. ಮುಂದಿನ ಶೈಕ್ಷಣಿಕ ವರ್ಷದಿಂದ ಹೊಸ ಸ್ಥಳಕ್ಕೆ ಸೇರಿಕೊಳ್ಳಲು ಅನುಕೂಲವಾಗುವಂತೆ ವರ್ಗಾವಣೆ ಪ್ರಕ್ರಿಯೆ ನಡೆಯಲಿದೆ ಎಂದು ಇಲಾಖೆ ಆಯುಕ್ತ ಡಾ.ಪಿ.ಸಿ.ಜಾಫರ್ “ಉದಯವಾಣಿ’ಗೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ