ಬೆಂಗಳೂರಿನಲ್ಲಿ ಭೀಕರ ಅಪಘಾತ: ಕಾರಿಗೆ ಬೆಂಕಿ ; ಇಬ್ಬರು ಸಜೀವ ದಹನ
Team Udayavani, Jul 22, 2018, 9:09 AM IST
ಬೆಂಗಳರೂರು: ಹೊಸೂರು ಮುಖ್ಯ ರಸ್ತೆಯ ಚಂದಾಪುರ ಬಳಿ ಭಾನುವಾರ ಬೆಳ್ಳಂಬೆಳಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸಜೀವವಾಗಿ ದಹನಗೊಂಡಿದ್ದಾರೆ.
ಬಸ್ಸೊಂದು ಡಿವೈಡರ್ಗೆ ಢಿಕ್ಕಿ ಹೊಡೆದು ಬಳಿಕ ಕಾರಿಗೆ ಗುದ್ದಿದೆ, ಪರಿಣಾಮವಾಗಿ ಕಾರಿಗೆ ಬೆಂಕಿ ತಗುಲಿ ಕ್ಷಣಾರ್ಧದಲ್ಲಿ ವ್ಯಾಪಿಸಿದೆ. ಕಾರಿನಲ್ಲಿದ್ದ ಇಬ್ಬರು ಹೊರ ಬರಲಾರದೆ ದಾರುಣವಾಗಿ ದಹನವಾಗಿದ್ದಾರೆ.
ಬಸ್ಸಿಗೂ ಬೆಂಕಿ ಹೊತ್ತಿಕೊಂಡಿದ್ದು ಒಳಗಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರು ಕೂಡಲೆ ಹೊರ ಬಂದ ಕಾರಣ ಯಾವುದೇ ಗಾಯಗಳಿಲ್ಲದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಘಟನೆ ನಡೆದ ಬಳಿಕ ಬಸ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಅಗ್ನಿಶಾಮಕದಳದ ಸಿಬಂದಿಗಳು ಆಗಮಿಸಿ ಬೆಂಕಿಯನ್ನು ತಹಬದಿಗೆ ತಂದಿದ್ದಾರೆ.
ಸೂರ್ಯ ಸಿಟಿ ಪೊಲೀಸರು ಸ್ಥಳಕ್ಕಾಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.