ಬೆಂಗಳೂರು : ಡಿವೈಡರ್ ಹಾರಿದ ಸರ್ಕಾರಿ ಬಸ್, ಓರ್ವ ಬಲಿ, ಮೂವರು ಗಂಭೀರ
ಮಗುವನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಕಾರಿಗೆ ಗುದ್ದಿದ ಬಸ್, ಆಪತ್ಬಾಂಧವನೇ ಬಲಿ
Team Udayavani, May 25, 2019, 9:37 AM IST
ಬೆಂಗಳೂರು : ಶನಿವಾರ ನಸುಕಿನ 3.30 ರ ವೇಳೆಗೆ ನವರಂಗ್ ಸರ್ಕಲ್ ಬಳಿ ಸರ್ಕಾರಿ ಬಸ್ಸೊಂದು ಡಿವೈಡರ್ ಹಾರಿ ಕಾರಿಗೆ ಗುದ್ದಿದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಮಗು ಸೇರಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಲಗ್ಗೆರೆ ಮೂಲದ ರವಿ ಎನ್ನುವವರು ಸಾವನ್ನಪ್ಪಿದ ದುರ್ದೈವಿ.ಅನಾರೋಗ್ಯಕ್ಕೀಡಾದ ನೆರೆ ಮನೆಯ ಮಗುವನ್ನು ಆಸ್ಪತ್ರೆಗೆ ದಾಖಲಿಸಲು ಸ್ನೇಹಿತನ ಕಾರಿನಲ್ಲಿ ಬರುತ್ತಿದ್ದ ವೇಳೆ ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ.
ಅನಾರೋಗ್ಯಕ್ಕೀಡಾದ ಮಗು ಸೇರಿ ಮೂವರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮಲ್ಲೇಶ್ವರಂ ಸಂಚಾರಿ ಠಾಣೆಯಲ್ಲಿ ಕೇಸು ದಾಖಲಾಗಿದೆ. ಬಸ್ ಚಾಲಕ ಮತ್ತು ನಿರ್ವಾಹಕನನ್ನು ಪೊಲೀಸರು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗ್ಯಾರಂಟಿ ಯೋಜನೆಗಳ ಟೀಕೆಗೆ ತಾಯಂದಿರೇ ಉತ್ತರ ನೀಡುತ್ತಾರೆ: ಡಿಕೆ ಶಿವಕುಮಾರ್
Crime: ಅನೈತಿಕ ಸಂಬಂಧ; ವ್ಯಕ್ತಿ ಕೊಲೆಗೆ ಸುಪಾರಿ!
CCB Raid: ಲೋಕ ಚುನಾವಣೆ ಹಿನ್ನೆಲೆ; ಪರಪ್ಪನ ಅಗ್ರಹಾರ ಜೈಲಿನ ಮೇಲೆ ಸಿಸಿಬಿ ದಾಳಿ
Motivational: ಪಿಯುನಲ್ಲಿ 2 ಬಾರಿ ಫೇಲ್, ಯುಪಿಎಸ್ಸಿ ಪಾಸ್
Bike Theft: ಹಗಲಲ್ಲಿ ಫುಡ್ಡೆಲಿವರಿ ಕೆಲಸ, ರಾತ್ರಿ ಬೈಕ್ಗಳ ಕಳವು: ಆರೋಪಿ ಬಂಧನ