ಖಾತೆ ಬದಲಾವಣೆ ವಿಳಂಬ: ತಹಶೀಲ್ದಾರ್‌ಗೆ ಹೈ ಚಾಟಿ


Team Udayavani, Mar 1, 2019, 6:10 AM IST

highcourt.jpg

ಬೆಂಗಳೂರು: ವ್ಯಕ್ತಿಯೊಬ್ಬರ ಜಮೀನು ಖಾತೆ ಬದಲಾವಣೆ ಕುರಿತ ವಿವಾದಕ್ಕೆ ಸಂಬಂಧಿಸಿದಂತೆ ಕನಕಪುರ ತಹಶೀಲ್ದಾರ್‌ ಆನಂದಯ್ಯ ಗುರುವಾರ ಪುನಃ ಹೈಕೋರ್ಟ್‌ ಕೆಂಗಣ್ಣಿಗೆ ಗುರಿಯಾದರು. ಪ್ರಕರಣದ ಕುರಿತು ಪ್ರಮಾಣಪತ್ರ ಸಲ್ಲಿಸುವಂತೆ ಬುಧವಾರಷ್ಟೇ ಹೈಕೋರ್ಟ್‌ ತಾಕೀತು ಮಾಡಿತ್ತು.

ಅದರಂತೆ, ಗುರುವಾರ ಖುದ್ದು ಹಾಜರಾಗಿ ಪ್ರಮಾಣಪತ್ರ ಸಲ್ಲಿಸಿದ ತಹಶೀಲ್ದಾರ್‌ ಆನಂದಯ್ಯ, ನಾನು ಕನಕಪುರ ತಹಶೀಲ್ದಾರ್‌ ಆಗಿ ಅಧಿಕಾರ ವಹಿಸಿಕೊಳ್ಳುವ ಮೊದಲೇ ಆಗಿರುವ ತಪ್ಪು ಇದು, ಅಷ್ಟಕ್ಕೂ ನನಗೆ ಈಗ ಕೊಳ್ಳೆಗಾಲಕ್ಕೆ ವರ್ಗಾವಣೆಯಾಗಿದೆ’ ಎಂದು ನ್ಯಾಯಪೀಠಕ್ಕೆ ತಿಳಿಸಿದರು.

ಇದರಿಂದ ಕೆರಳಿದ ನ್ಯಾ. ಎಸ್‌.ಎನ್‌. ಸತ್ಯನಾರಾಯಣ, 24 ಗಂಟೆಗಳಲ್ಲಿ ಅದ್ಹೇಗೆ ವರ್ಗಾವಣೆ ಆಯಿತು. ಒಂದೇ ದಿನದಲ್ಲಿ ವರ್ಗಾವಣೆ ಆಗಿದೆ ಅಂದರೆ ಈ ಮನುಷ್ಯ (ತಹಶೀಲ್ದಾರ್‌) ಭಾರಿ ಪವರ್‌ಫ‌ುಲ್‌ ಆಗಿರಬೇಕು. ಈ ವರ್ಗಾವಣೆ ಹೇಗಾಯಿತು, ಇದರ ಹಿಂದೆ ಯಾರಿದ್ದಾರೆ ಎಂಬುದು ಗೊತ್ತಾಗಬೇಕು.

ನಿಮ್ಮನ್ನು ಅಷ್ಟು ಸುಲಭವಾಗಿ ಕೊಳ್ಳೇಗಾಲಕ್ಕೆ ಹೋಗಲು ಬಿಡುವುದಿಲ್ಲ. ನೀವು ವರ್ಗಾವಣೆ ಮಾಡಿಸಿಕೊಂಡಿರಬಹುದು. ಆದರೆ, ಕೋರ್ಟ್‌ ಕೇಸ್‌ ಮುಗಿಬೇಕಲ್ಲ. ನಿಮ್ಮನ್ನು ಕೊಳ್ಳೇಗಾಲಕ್ಕೆ ಅಲ್ಲ, ಪರಪ್ಪನ ಅಗ್ರಹಾರಕ್ಕೆ ಕಳಿಸುವುದು ನನಗೆ ಗೊತ್ತು ಎಂದು ಕಿಡಿಕಾರಿದರು.

ಬುಧವಾರ ವಿಚಾರಣೆಗೆ ಹಾಜರಾಗಿ ಕೋರ್ಟ್‌ಗೆ ಸಲ್ಲಿಸಲಾದ ದಾಖಲೆಗಳಲ್ಲಿ ತಪ್ಪಾಗಿದೆ ಎಂದು ಒಪ್ಪಿಕೊಂಡು, ಮರು ದಿನ ಬಂದು ನನ್ನ ಅವಧಿಯಲ್ಲಿ ಆದ ಪ್ರಮಾದ ಅಲ್ಲ ಎಂದು ಪ್ರಮಾಣ ಪತ್ರ ಸಲ್ಲಿಸುತ್ತಿದ್ದೀರಿ, ಮೇಲಾಗಿ ಒಂದೇ ದಿನದಲ್ಲಿ ವರ್ಗಾವಣೆ ಸಹ ಆಗಿದ್ದೀರಿ.

ನಡೆದಿರುವ ತಪ್ಪನ್ನು ಮುಚ್ಚಿ ಹಾಕಲು ಪ್ರಯತ್ನ ಮಾಡುತ್ತಿರುವಂತಿದೆ. ಆದರೆ, ಅದು ಸಾಧ್ಯವಿಲ್ಲ. ಪ್ರಕರಣದ ಸಂಪೂರ್ಣ ದಾಖಲೆಳೊಂದಿಗೆ ಮಾರ್ಚ್‌ 6ರಂದು ಪುನಃ ಖುದ್ದು ಹಾಜರಾಗಿ ವಿವರಣೆ ಕೊಡಬೇಕು ಇಲ್ಲದಿದ್ದರೆ ಜೀಪ್‌ನಲ್ಲಿ ಕೋರ್ಟ್‌ಗೆ ಬರುವಂತೆ ಮಾಡುತ್ತೇನೆ ಎಂದು ನ್ಯಾಯಮೂರ್ತಿಗಳು ತಹಶೀಲ್ದಾರ್‌ಗೆ ಎಚ್ಚರಿಕೆ ನೀಡಿ ವಿಚಾರಣೆ ಮುಂದೂಡಿದರು.

ಪ್ರಕರಣವೇನು?: ಕನಕಪುರ ತಾಲೂಕಿನ ಹಾರೋಹಳ್ಳಿ ಹೋಬಳಿಯ ಹುಳುಗೊಂಡನಹಳ್ಳಿ ಸರ್ವೇ ನಂ-58ರಲ್ಲಿನ ಒಂದು ಎಕರೆ ಜಮೀನಿನ ಖಾತೆ ಮಾಡಿಕೊಡಲು ವೆಂಕಟೇಶ್‌ ಎಂಬುವರು 2017ರಲ್ಲಿ  ಸಲ್ಲಿಸಿದ್ದ ಮನವಿಗೆ ಕ್ರಮ ಕೈಗೊಳ್ಳಲು ವಿಳಂಬ ಮಾಡಿದ್ದಕ್ಕೆ ಬುಧವಾರಷ್ಟೇ ತಹಶೀಲ್ದಾರ್‌ ಆನಂದಯ್ಯ ಅವರನ್ನು ಬುಧವಾರ ಹೈಕೋರ್ಟ್‌ ತೀವ್ರ ತರಾಟೆಗೆ ತೆಗೆದುಕೊಂಡಿತ್ತು. ಹಾಗೆಯೇ, ಸೇವೆಯಿಂದ ಅಮಾನತುಪಡಿಸುವ ಎಚ್ಚರಿಕೆ ನೀಡಿ, ಕರ್ತವ್ಯಲೋಪ ಎಸಗಿದ್ದಕ್ಕೆ ವಿವರಣೆ ನೀಡಿ ಗುರುವಾರ ಪ್ರಮಾಣಪತ್ರ ಸಲ್ಲಿಸುವಂತೆ ಸೂಚಿಸಿತ್ತು. 

ಟಾಪ್ ನ್ಯೂಸ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

7-uv-fusion

UV Fusion: ಚುಕ್ಕಿ ತಾರೆ ನಾಚುವಂತೆ ಒಮ್ಮೆ ನೀ ನಗು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.