ಆನ್ಲೈನಲ್ಲೇ ಖಾತಾ ಕಾರ್ಯ
Team Udayavani, Apr 20, 2018, 11:47 AM IST
ಬೆಂಗಳೂರು: ಇನ್ನುಮುಂದೆ ಸಹಾಯಕ ಕಂದಾಯ ಅಧಿಕಾರಿಗಳ (ಎಆರ್ಒ) ಕಚೇರಿಗಳಲ್ಲಿ ಖಾತಾ ನೋಂದಣಿ ಹಾಗೂ ವರ್ಗಾವಣೆಗೆ ಅರ್ಜಿಗಳನ್ನು ಸ್ವೀಕರಿಸುವಂತಿಲ್ಲ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಪಾಲಿಕೆಯ ಎಆರ್ಒ ಕಚೇರಿಗಳಲ್ಲಿ ನಾಗರಿಕರು ಖುದ್ದು ಭೇಟಿ ನೀಡಿ ಖಾತಾ ನೋಂದಣಿ ಹಾಗೂ ವರ್ಗಾವಣೆಗೆ ಅರ್ಜಿ ನೀಡಿದರೂ, ಅರ್ಜಿಗಳ ವಿಲೇವಾರಿ ವಿಳಂಬವಾಗುತ್ತಿದೆ. ಆ ಹಿನ್ನೆಲೆಯಲ್ಲಿ ಖಾತಾ ನೋಂದಣಿ ಹಾಗೂ ವರ್ಗಾವಣೆ (ಖಾತಾ ವಿಭಜನೆ ಹಾಗೂ ಜೋಡಣೆ) ಸೇವೆಗಳನ್ನು ಆನ್ಲೈನ್ ಮೂಲಕವೇ ನಿರ್ವಹಿಸಬೇಕು ಎಂದು ನಗರಾಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ.
ಆನ್ಲೈನ್ ಖಾತಾ ಸೇವೆಗಳಿಗೆ ಇ-ಆಡಳಿತ ಇಲಾಖೆಯ ವತಿಯಿಂದ ತಂತ್ರಾಶ ಅಭಿವೃದ್ಧಿಪಡಿಸಲಾಗಿದ್ದು ಈಗಾಗಲೇ ಪ್ರಯೋಗಿಕವಾಗಿ ಯಶಸ್ವಿಯಾಗಿದೆ. ಹೀಗಾಗಿ, ಇನ್ಮುಂದೆ ಆನ್ಲೈನ್ನಲ್ಲೇ ವಿಲೇವಾರಿ ಮಾಡಬೇಕು. ಕಂದಾಯ ಅಧಿಕಾರಿಗಳು ಸಾರ್ವಜನಿಕರಿಂದ ಖಾತಾ ನೋಂದಣಿ ಹಾಗೂ ವರ್ಗಾವಣೆಗೆ ಸಂಬಂಧಿಸಿದ ಅರ್ಜಿಗಳನ್ನು ಸ್ವೀಕರಿಸುವಂತಿಲ್ಲ ಎಂದು ಇಲಾಖೆ ಗುರುವಾರ ಸುತ್ತೋಲೆ ಹೊರಡಿಸಿದೆ. ಸಾರ್ವಜನಿಕರು ಖಾತಾ ನೋಂದಣಿ ಹಾಗೂ ವರ್ಗಾವಣೆ ಸೇವೆಗಳಿಗಾಗಿ ಬೆಂಗಳೂರು ಒನ್ ಕೇಂದ್ರಗಳ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಉದಯವಾಣಿ ಪ್ರಕಟಿಸಿತ್ತು: ಸಾರ್ವಜನಿಕರು ಅನಗತ್ಯವಾಗಿ ಬಿಬಿಎಂಪಿ ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಲು ಹಾಗೂ ಆಡಳಿತದಲ್ಲಿ ಪಾರದರ್ಶಕತೆ ತರುವ ಉದ್ದೇಶದಿಂದ ಖಾತಾ ನೋಂದಣಿ, ವರ್ಗಾವಣೆ, ವಿಭಜನೆ ಹಾಗೂ ಜೋಡಣೆಯಂತಹ ಸೇವೆಗಳನ್ನು ಆನ್ಲೈನ್ಗೊಳಿಸಲು ಬಿಬಿಎಂಪಿ ಮುಂದಾಗಿರುವ ಕುರಿತು “ಉದಯವಾಣಿ’ಯ ಮಂಗಳವಾರ (ಏ.17) “ಇನ್ನು ಖಾತಾ ಕೂಡ ಆನ್ಲೈನ್ನಲ್ಲೇ’ ಎಂಬ ಶೀರ್ಷಿಕೆಯಡಿಯಲ್ಲಿ ವಿಶೇಷ ವರದಿ ಪ್ರಕಟಿಸಿತ್ತು.
ಸಾರ್ವಜನಿಕರಿಗೆ ಆನ್ಲೈನ್ ಮೂಲಕ ಖಾತಾ ನೋಂದಣಿ ಹಾಗೂ ವರ್ಗಾವಣೆ ಸೇವೆಗಳನ್ನು ಒದಗಿಸಲು ಇ-ಆಡಳಿತ ಇಲಾಖೆಯಿಂದ ತಂತ್ರಾಂಶ ಅಭಿವೃದ್ಧಿಪಡಿಸಲಾಗಿದೆ. ಅದರಂತೆ ಇನ್ನು ಮುಂದೆ ಸಹಾಯಕ ಕಂದಾಯ ಅಧಿಕಾರಿಗಳು ಅರ್ಜಿಗಳನ್ನು ಸ್ವೀಕರಿಸುವಂತಿಲ್ಲ. ಸಾರ್ವಜನಿಕರು ಆನ್ಲೈನ್ ಇಲ್ಲವೆ, ಬೆಂಗಳೂರು ಒನ್ ಕೇಂದ್ರಗಳ ಮೂಲಕ ಸೇವೆ ಪಡೆಯಬಹುದು.
-ಎನ್.ಮಂಜುನಾಥ ಪ್ರಸಾದ್, ಬಿಬಿಎಂಪಿ ಆಯುಕ್ತ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crime: ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ
Bengaluru: ಖೋಖೋ ತೀರ್ಪು ವಿವಾದ: ಫೀಲ್ಡ್ನಲ್ಲೇ ಚಾಕು, ಡ್ಯಾಗರ್ ಹಿಡಿದು ಹೊಡೆದಾಟ!
ಸ್ನೇಹಿತನ ಪತ್ನಿಯ ಕ್ಯಾನ್ಸರ್ ಚಿಕಿತ್ಸೆಗಾಗಿ ಬೈಕ್ ಕಳ್ಳತನಕ್ಕಿಳಿದ ಕುಚುಕು ಗೆಳೆಯ!
Bengaluru: ಅಧಿವೇಶನದ ಬಳಿಕ ಕಾವೇರಿ ನೀರಿನ ದರ ಪರಿಷ್ಕರಣೆ: ಡಿ.ಕೆ.ಶಿವಕುಮಾರ್
Bengaluru: ಕೋರ್ಟ್ನಲ್ಲೇ ವಕೀಲೆಗೆ ಚಾಕು ಇರಿದ ಆರೋಪಿ ಸೆರೆ
MUST WATCH
ಹೊಸ ಸೇರ್ಪಡೆ
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.