ಮಗಳನ್ನು ನೋಡಲು ಬಂದ ಆರೋಪಿ ಸೆರೆ


Team Udayavani, Sep 26, 2022, 11:49 AM IST

ಮಗಳನ್ನು ನೋಡಲು ಬಂದ ಆರೋಪಿ ಸೆರೆ

ಬೆಂಗಳೂರು: ಸುಲಿಗೆ, ಮನೆಗಳವು, ಸರಗಳ್ಳತನ ಸೇರಿ 30 ಅಪರಾಧ ಪ್ರಕರಣಗಳ ಎಸಗಿ 4 ವರ್ಷಗಳಿಂದ ತಲೆಮರೆಕೊಂಡಿದ್ದ ಖತರ್ನಾಕ್‌ ಆರೋಪಿಯನ್ನು ಕೊನೆಗೂ ಅಶೋಕ್‌ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಆಸೀಫ್ ಅಲಿಯಾಸ್‌ ಪಿಸ್ತೂಲ್‌ ಬಂಧಿತ. ಆಸೀಫ್ 3 ವರ್ಷಗಳ ಹಿಂದೆ ದರೋಡೆ, ಸುಲಿಗೆ, ಮನೆ ಕಳವು, ಸರಗಳ್ಳತನ ಸೇರಿ 30ಕ್ಕೂ ಅಧಿಕ ಅಪರಾಧ ಪ್ರಕರಣ ಎಸಗಿದ್ದ. ಕೆಲ ಪ್ರಕರಣಗಳಲ್ಲಿ ಬಂಧನ ಕ್ಕೊಳಗಾಗಿ ಜಾಮೀನಿನ ಮೇಲೆ ಹೊರಬಂದಿದ್ದ. ಆದರೆ, ನಂತರ ಕೋರ್ಟ್‌ಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ನಗರದ ವಿವಿಧ ಠಾಣಾ ವ್ಯಾಪ್ತಿಗಳಲ್ಲಿ ಅಪರಾಧ ಎಸಗಿದ್ದ ಹಿನ್ನೆಲೆಯಲ್ಲಿ ಆತನಿಗಾಗಿ ವಿವಿಧೆಡೆ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದರು. ಆದರೆ, ಚಲಾಕಿಯಾಗಿದ್ದ ಆಸೀಫ್ ಎಲ್ಲೂ ತನ್ನ ಸಣ್ಣ ಸುಳಿವನ್ನೂ ಬಿಟ್ಟು ಕೊಡಲಿಲ್ಲ. ಆಗಾಗ ತಾನು ವಾಸಿಸುತ್ತಿದ್ದ ಮನೆಗಳನ್ನು ಬದಲಾಯಿಸುತ್ತಿದ್ದ. ಹೀಗಾಗಿ ಆತನ ಪತ್ತೆ ಸವಾಲಾಗಿತ್ತು.

ಶಾಲಾ ವಾಹನದಲ್ಲಿ ಹೋಗಿ ಸೆರೆ: ಇತ್ತೀಚೆಗೆ ಪತ್ನಿ ಜತೆ ಜಗಳ ಮಾಡಿ ಆಕೆಯಿಂದ ದೂರ ಹೋಗಿದ್ದ. ಆರೋಪಿಗೆ ಓರ್ವ ಮಗಳಿದ್ದು, ಆಕೆಯ ಮೇಲೆ ಪ್ರೀತಿಯಿದ್ದ ಕಾರಣ ನೋಡಲೆಂದು ಆಗಾಗ ಆಕೆಯ ಶಾಲೆಯ ಬಳಿ ಬಂದು ಮಾತನಾಡಿಸಿಕೊಂಡು ಹೋಗುತ್ತಿದ್ದ. ಈ ಸಂಗತಿ ಅಶೋಕ್‌ನಗರ ಪೊಲೀಸರ ಗಮನಕ್ಕೂ ಬಂದಿತ್ತು. ಆರೋಪಿಯ ಮಗಳು ಶಾಲೆಗೆ ಹೋಗುತ್ತಿದ್ದ ಸ್ಕೂಲ್‌ ವ್ಯಾನ್‌ ಸಿಬ್ಬಂದಿಗೆ ಮಾಹಿತಿ ನೀಡಿ, ಸಿವಿಲ್‌ ಧಿರಿಸನಲ್ಲಿ ಸ್ಕೂಲ್‌ ವ್ಯಾನ್‌ನಲ್ಲಿ ಹೋಗಿದ್ದರು. ಮಗಳು ಬಸ್‌ನಿಂದ ಇಳಿಯುತ್ತಿದ್ದಂತೆ ಆಸೀಫ್ ಮಗಳನ್ನು ನೋಡಲು ಕಾತುರನಾಗಿ ಶಾಲೆ ಬಳಿ ನಿಂತಿದ್ದ. ಇದೇ ವೇಳೆ ಆತನನ್ನು ಸುತ್ತುವರಿದು ಬಂಧಿಸಿದ್ದಾರೆ.

ಪಿಸ್ತೂಲ್‌ನಂತೆ ಕೈ ಬೆರಳು :

ಆರೋಪಿ ಆಸೀಫ್ ಅಲಿಯಾಸ್‌ ಪಿಸ್ತೂಲ್‌ನ ಕೈ ಬೆರಳು ಗೂನವಾಗಿದ್ದು, ಕೊನೆಯ ಎರಡು ಬೆರಳನ್ನು ಸದಾ ಮಡಿಚುತ್ತಿದ್ದ. ಆತನ ಒಂದು ಕೈಯ ಬೆರಳುಗಳು ಪಿಸ್ತೂಲ್‌ನಂತೆ ಕಾಣುತ್ತಿದ್ದವು. ಇದಕ್ಕಾಗಿ ಆತನಿಗೆ ಆಸೀಫ್ ಅಲಿಯಾಸ್‌ ಪಿಸ್ತೂಲ್‌ ಎಂಬ ಹೆಸರು ಬಂದಿದೆ ಎಂದು ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.