ರಾತ್ರಿ ವೇಳೆ ಗಾಂಜಾ ಸೇವಿಸಿ ಮನೆಗಳ್ಳತನ!
Team Udayavani, Oct 15, 2022, 1:13 PM IST
ಬೆಂಗಳೂರು: ಹಗಲಿನಲ್ಲಿ ಹೊತ್ತು ಬೀಗ ಹಾಕಿದ ಮನೆಗಳನ್ನು ಗುರುತಿಸಿ ರಾತ್ರಿ ವೇಳೆ ಗಾಂಜಾ ಸೇವಿಸಿ ಮನೆ ಕಳವು ಮಾಡುತ್ತಿದ್ದ ಸಹೋದರರು ಸೇರಿ ಮೂವರನ್ನು ಹೆಣ್ಣೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.
ಪರಪ್ಪನ ಅಗ್ರಹಾರದ ಭುವನೇಶ್ವರಿ ಲೇಔಟ್ ನಿವಾಸಿಗಳಾದ ಗುಣಶೇಖರ್ ಅಲಿಯಾಸ್ ಕೊರಂಗು (21), ಆತನ ಸಹೋದರ ಅಜಿತ್ (22), ತಮಿಳುನಾಡಿನ ಧರ್ಮಪುರಿಯ ಮುತ್ತುಕುಮಾರ್ (27) ಬಂಧಿತರು. ಆರೋಪಿಗಳಿಂದ 49.17 ಲಕ್ಷ ರೂ. ಮೌಲ್ಯದ 1 ಕೆ.ಜಿ. 92 ಗ್ರಾಂ ಚಿನ್ನಾಭರಣ ಜಪ್ತಿ ಮಾಡಲಾಗಿದೆ.
ಇವರ ಬಂಧನದಿಂದ ಹೆಣ್ಣೂರು ಪೊಲೀಸ್ ಠಾಣೆ 8, ಕೊತ್ತನೂರು 3, ರಾಮಮೂರ್ತಿನಗರ, ಯಲಹಂಕ , ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯ ಪಿಳಮೇಡು ಪೊಲೀಸ್ ಠಾಣೆಯಲ್ಲಿ ತಲಾ 1 ಸೇರಿದಂತೆ ಒಟ್ಟು 14 ಮನೆಗಳವು ಪ್ರಕರಣಗಳು ಬೆಳಕಿಗೆ ಬಂದಿದೆ. ಆರೋಪಿಗಳು ಹಗಲಿನಲ್ಲಿ ಬೀಗ ಹಾಕಿದ ಮನೆಗಳನ್ನು ಗುರುತಿಸುತ್ತಿದ್ದರು. ನಂತರ ಬೀಗ ಮುರಿದು ಮನೆಗೆ ನುಗ್ಗಿ ನಗದು, ಚಿನ್ನಾಭರಣ ದೋಚುತ್ತಿದ್ದರು. ನಂತರ ಕದ್ದ ವಸ್ತುಗಳನ್ನು ತಮಿಳುನಾಡು ಹಾಗೂ ಕೇರಳಕ್ಕೆ ಕೊಂಡೊಯ್ದು ಗಿರಾಕಿಗಳನ್ನು ಹುಡುಕಿ, ಕಡಿಮೆ ಬಲೆಗೆ ಮಾರಾಟ ಮಾಡುತ್ತಿದ್ದರು. ಮಾರಾಟ ಮಾಡಿ ಬಂದ ಹಣದಲ್ಲಿ ಮಾದಕ ವಸ್ತು ಸೇವನೆ, ವೇಶ್ಯೆಯರ ಸಹವಾಸಕ್ಕೆ ದುಂದು ವೆಚ್ಚ ಮಾಡುತ್ತಿದ್ದರು. ಹಣ ಖಾಲಿಯಾದ ಬಳಿಕ ಮತ್ತೆ ಮನೆಗಳ್ಳತನಕ್ಕೆ ಇಳಿಯುತ್ತಿದ್ದರು.
ಕದ್ದ ಮೊಬೈಲ್ ಬಳಕೆ: ಪೊಲೀಸರಿಗೆ ತಮ್ಮ ಸುಳಿವು ಸಿಗಬಾರದು ಎಂಬ ಉದ್ದೇಶದಿಂದ ಆರೋಪಿಗಳು ಮನೆಗಳ್ಳತನಕ್ಕೆ ಹೋಗುತ್ತಿದ್ದಾಗ ಕದ್ದ ಮೊಬೈಲ್ಗಳನ್ನೇ ಬಳಕೆ ಮಾಡುತ್ತಿದ್ದರು. ಮನೆಗಳ್ಳತನಕ್ಕೂ ಮುನ್ನ ಮೂವರೂ ಗಾಂಜಾ ಸೇವಿಸುತ್ತಿದ್ದರು. ಬಂಧಿತರ ಪೈಕಿ ಪ್ರಮುಖ ಆರೋಪಿ ಗುಣಶೇಖರ್ ತನ್ನ 17ನೇ ವಯಸ್ಸಿನಲ್ಲೇ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಎರಡು ಬಾರಿ ಬಾಲಮಂದಿರಕ್ಕೆ ಸೇರಿ ಬಿಡುಗಡೆಯಾಗಿದ್ದ. ಜೈಲಿನಿಂದ ಹೊರ ಬಂದು ಮತ್ತೆ ಹಳೆ ಚಾಳಿ ಮುಂದುವರಿಸಿದ್ದ. ಆತನ ಕೃತ್ಯಗಳಿಗೆ ಸಹೋದರ ಅಜಿತ್ ಹಾಗೂ ಸ್ನೇಹಿತ ಮುತ್ತುಕುಮಾರ್ ಸಹಕಾರ ನೀಡುತ್ತಿದ್ದರು. ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಮನೆಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಂತ್ರಿಕ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ