ಪೊಲೀಸರು ವಶಕ್ಕೆ ಪಡೆದ ಬಳಿಕ ಲೈಂಗಿಕ ದೌರ್ಜನ್ಯ ಬಯಲಿಗೆ
Team Udayavani, Nov 16, 2022, 3:32 PM IST
ಬೆಂಗಳೂರು: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಯನ್ನು ತಲಘಟ್ಟಪುರ ಪೊಲೀಸರು ಬಂಧಿಸಿದ್ದಾರೆ.
ವೇಣುಗೋಪಾಲ್(22) ಬಂಧಿತ. ಯಾದಗಿರಿ ಮೂಲದದವರಾದ ಸಂತ್ರಸ್ತೆ ಪೋಷಕರು ತಲಘಟ್ಟಪುರದಲ್ಲಿ ವಾಸವಾಗಿದ್ದು, ಕೂಲಿ ಕೆಲಸ ಮಾಡಿಕೊಂಡಿದ್ದಾರೆ.
ಆರೋಪಿ ಕೂಡ ಕುಟುಂಬ ಸಮೇತ ಆಕೆಯ ಪಕ್ಕದ ಮನೆಯಲ್ಲೇ ವಾಸವಾಗಿದ್ದಾನೆ. ಹೀಗಾಗಿ ಅಪ್ರಾಪ್ತೆಗೆ ಪರಿಚಯವಿದ್ದ ಆರೋಪಿ ಸೋಮವಾರ ರಾತ್ರಿ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದಾನೆ. ನಂತರ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂಬುದು ಗೊತ್ತಾಗಿದೆ. ಈ ಸಂಬಂಧ ಸಂತ್ರಸ್ತೆ ಪೋಷಕರಿಂದ ದೂರು ದಾಖಲಿಸಿಕೊಂಡು ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಹೊಯ್ಸಳ ಸಿಬ್ಬಂದಿಗೆ ಸಿಕ್ಕಿಬಿದ್ದ ಆರೋಪಿ: ಸೋಮವಾರ ತಡರಾತ್ರಿ ತಲಘಟ್ಟಪುರದಲ್ಲಿ ಹೊಯ್ಸಳ ಸಿಬ್ಬಂದಿ ಗಸ್ತು ತಿರುಗುತ್ತಿದ್ದರು. ಅದೇ ವೇಳೆ ಸಂತ್ರಸ್ತೆ ಹಾಗೂ ಆರೋಪಿ ನಿರ್ಜನ ಪ್ರದೇಶದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಓಡಾಡುತ್ತಿದ್ದರು. ಅನುಮಾನಗೊಂಡು ಹೊಯ್ಸಳ ಸಿಬ್ಬಂದಿ ಇಬ್ಬರನ್ನು ಕರೆದು ವಿಚಾರಣೆ ನಡೆಸಿದ್ದಾರೆ. ಆಗ ಸಮಪರ್ಕ ಉತ್ತರ ನೀಡಿಲ್ಲ. ನಂತರ ಠಾಣೆಗೆ ಕರೆದೊಯ್ದು ತೀವ್ರ ರೀತಿಯಲ್ಲಿ ವಿಚಾರಣೆ ನಡೆಸಿದಾಗ ಸತ್ಯಾಂಶ ಬಾಯಿಬಿಟ್ಟಿದ್ದಾನೆ.ಬಳಿಕ ಸಂತ್ರಸ್ತೆ ಪೋಷಕರಿಂದ ದೂರು ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಈ ಕುರಿತು ಮಾಹಿತಿ ನೀಡಿದ ದಕ್ಷಿಣ ವಿಭಾಗ ಡಿಸಿಪಿ ಕೃಷ್ಣಕಾಂತ್, ಸಂತ್ರಸ್ತೆ ಹಾಗೂ ಆರೋಪಿ ನಿರ್ಜನ ಪ್ರದೇಶದಲ್ಲಿ ಓಡಾಡುತ್ತಿದ್ದನ್ನು ಗಮನಿಸಿ ಹೊಯ್ಸಳ ಸಿಬ್ಬಂದಿ ಕರೆದು ವಿಚಾರಣೆ ನಡೆಸಿದಾಗ ಘಟನೆ ಬೆಳಕಿಗೆ ಬಂದಿದೆ.
ಪ್ರಾಥಮಿಕ ಮಾಹಿತಿ ಪ್ರಕಾರ ಸಂತ್ರಸ್ತೆ ಹಾಗೂ ಆರೋಪಿ ಪರಸ್ಪರ ಪರಿಚಯಸ್ಥರು ಎಂಬುದು ಗೊತ್ತಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ