ಒಂಟಿಯಾಗಿ ಸಂಚರಿಸುವವರಿಗೆ ಮಾರಕಾಸ್ತ್ರ ತೋರಿಸಿ ದರೋಡೆ
Team Udayavani, Feb 4, 2023, 2:23 PM IST
ಬೆಂಗಳೂರು: ಒಂಟಿಯಾಗಿ ಓಡಾಡುವ ಸಾರ್ವಜನಿಕರನ್ನೇ ಟಾರ್ಗೆಟ್ ಮಾಡಿಕೊಂಡುಮಾರಕಾಸ್ತ್ರ ತೋರಿಸಿ ಮೊಬೈಲ್ ಹಾಗೂ ಹಣ ಸುಲಿಗೆ ಮಾಡುತ್ತಿದ್ದ ಇಬ್ಬರು ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಸುಂಕದಕಟ್ಟೆ ವಿಘ್ನೇಶ್ವರನಗರ ನಿವಾಸಿ ಪವನ್(20) ಹಾಗೂ ಮುತ್ತುರಾಯಸ್ವಾಮಿ ಬಡಾವಣೆನಿವಾಸಿ ಪ್ರವೀಣ್(21) ಬಂಧಿತರು. ಆರೋಪಿ ಗಳಿಂದ 1.10 ಲಕ್ಷ ರೂ. ಮೌಲ್ಯದ ವಿವಿಧ ಕಂಪನಿಗಳ 7 ಮೊಬೈಲ್ ಹಾಗೂ ಕೃತ್ಯಕ್ಕೆ ಬಳಲುತ್ತಿದ್ದ ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ.
ಬಂಧಿತರು ಒಂದೇ ಬೈಕ್ನಲ್ಲಿ ನಗರದಾದ್ಯಂತ ಸುತ್ತಾಡಿ ವಾಯುವಿಹಾರಕ್ಕೆ ಹೋಗುವಹಾಗೂ ಒಂಟಿಯಾಗಿ ಓಡಾಡುವ ಸಾರ್ವಜನಿಕರನ್ನು ಗುರಿಯಾಗಿಸಿ ಅಡ್ಡಗಟ್ಟಿ ಸುಲಿಗೆ ಮಾಡುತ್ತಿದ್ದರು. ಬಸವೇಶ್ವರನಗರ ನಿವಾಸಿ ಧನಂಜಯ ಜ.29 ರಂದು ರಾತ್ರಿ 11.15ರ ಸುಮಾರಿಗೆ ಸಿದ್ದಯ್ಯಪುರಾಣಿಕ್ ರಸ್ತೆಯ ಪಾದಚಾರಿ ಮಾರ್ಗದಲ್ಲಿ ವಾಯು ವಿಹಾರಕ್ಕೆ ಹೋಗುತ್ತಿದ್ದರು. ಆ ವೇಳೆ ದ್ವಿಚಕ್ರ ವಾಹನದಲ್ಲಿಬಂದ ಆರೋಪಿಗಳು ಏಕಾಏಕಿ ಧನಂಜಯಅವರನ್ನು ಹಿಡಿದು ಚೂರಿ ತೋರಿಸಿ ಬಳಿಕ ತಲೆಗೆ ಮತ್ತು ಮುಖಕ್ಕೆ ಹಲ್ಲೆ ಮಾಡಿ 20 ಸಾವಿರ ರೂ.ಮೌಲ್ಯದ ಮೊಬೈಲ್, ಪರ್ಸ್ ನಲ್ಲಿದ್ದ 1 ಸಾವಿರ ರೂ. ಕಸಿದುಕೊಂಡು ಪರಾರಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ