ನಶೆಯಲ್ಲಿದ್ದ ಗೆಳತಿಯರ ಮೇಲೆ ಅತ್ಯಾಚಾರ
Team Udayavani, Feb 8, 2023, 2:59 PM IST
ಬೆಂಗಳೂರು: ಮದ್ಯದ ಅಮಲಿನಲ್ಲಿ ಸ್ನೇಹಿತೆ ಯರ ಮೇಲೆ ಅತ್ಯಾಚಾರ ಎಸಗಿದ ಇಬ್ಬರು ವಿದ್ಯಾರ್ಥಿಗಳನ್ನು ವಿವೇಕನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಆಂಧ್ರಪ್ರದೇಶದ ಗೋದಾವರಿ ಜಿಲ್ಲೆಯ ಗರಕಿಪತಿ ಅಜಯ್ ವೆಂಕಟ್ ಸಾಯಿ(23) ಹಾಗೂ ಬಿಹಾರ ಜಿಲ್ಲೆಯ ಆದಿತ್ಯ ಅಭಿರಾಜ್ (26) ಬಂಧಿತರು.
ಆರೋಪಿಗಳು ಫೆ.6ರಂದು ನಸುಕಿನ 2 ಗಂಟೆ ಸುಮಾರಿಗೆ ಇಬ್ಬರು ಸ್ನೇಹಿತೆಯ ರನ್ನು ಮನೆಗೆ ಕರೆಸಿಕೊಂಡು ಮದ್ಯ ಸೇವಿಸಿದ್ದಾರೆ. ಬಳಿಕ ಇಬ್ಬರ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ಹೇಳಿದರು.
ಆರೋಪಿಗಳ ಪೈಕಿ ಅಜಯ್ ವೆಂಕಟ್ ಪಂಜಾಬ್ನಲ್ಲಿ ಎಂಬಿಎ ವ್ಯಾಸಂಗ ಮಾಡುತ್ತಿದ್ದ. ಆದಿತ್ಯ ಅಭಿರಾಜ್ ಬೆಂಗಳೂರಿನಲ್ಲಿ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿದ್ದ. ಹೀಗಾಗಿ ಅಜಯ್ ವೆಂಕಟ್ ಆಗಾಗ್ಗೆ ಬೆಂಗಳೂರಿನ ಕೋರ ಮಂಗಲದ ಅಪಾರ್ಟ್ಮೆಂಟ್ನಲ್ಲಿ ವಾಸವಾಗಿರುವ ಆದಿತ್ಯ ಅಭಿರಾಜ್ ಮನೆಗೆ ಬಂದು, ಕೆಲ ದಿನಗಳ ಕಾಲ ಇದ್ದು, ಸ್ನೇಹಿತರಿಗೆ ಪಾರ್ಟಿ ಕೊಡುತ್ತಿದ್ದ. ಇನ್ನು ಸಂತ್ರಸ್ತೆ ಪೈಕಿ ಒಬ್ಬರು ಹಾಗೂ ಆರೋಪಿಗಳಿಬ್ಬರು ಈ ಹಿಂದೆ ಪಂಜಾಬ್ನ ಜಲಾಂದರ್ನಲ್ಲಿರುವ ಲೌಲಿ ಪ್ರೊಫೆಷನಲ್ ಯುನಿವರ್ಸಿಟಿಯಲ್ಲಿ ಒಟ್ಟಿಗೆ ವ್ಯಾಸಂಗ ಮಾಡುತ್ತಿದ್ದರು. ನಾಲ್ಕು ವರ್ಷಗಳಿಂದ ಮೂವರು ಪರಸ್ಪರ ಪರಿಚಯಸ್ಥರಾಗಿದ್ದಾರೆ.
ಸಂತ್ರಸ್ತೆ ಒಂದೆರಡು ವರ್ಷಗಳ ಹಿಂದೆಯೇ ಬೆಂಗಳೂರಿಗೆ ಬಂದಿದ್ದು, ಇಲ್ಲಿಯೆ ಕೆಲಸ ಮಾಡಿ ಕೊಂಡಿದ್ದಾರೆ. ಫೆ.4ರಂದು ಬೆಂಗಳೂರಿಗೆ ಬಂದಿದ್ದ ಅಜಯ್ ವೆಂಕಟ್, ಆದಿತ್ಯ ಮನೆಯಲ್ಲಿ ವಾಸವಾಗಿದ್ದ. ಫೆ.5ರಂದು ಸಂಜೆ ಸ್ನೇಹಿತೆಗೆ ಕರೆ ಮಾಡಿದ ಆರೋಪಿ, ಕೋರಮಂಗಲದಲ್ಲಿರುವ ಸ್ನೇಹಿತ ಮನೆಗೆ ಪಾರ್ಟಿ ಮಾಡಲು ಬರುವಂತೆ ಸೂಚಿಸಿದ್ದಾನೆ. ಅದಕ್ಕೆ ಒಪ್ಪಿದ ಆಕೆ, ತನ್ನ ಸ್ನೇಹಿತೆಯನ್ನು ಕರೆದುಕೊಂಡು ಹೋಗಿದ್ದಾಳೆ. ತಡರಾತ್ರಿ 11. 45ರಿಂದ ನಸುಕಿನ 1.46ರವರೆಗೆ ನಾಲ್ವರು ಪಾರ್ಟಿ ಮಾಡಿದ್ದಾರೆ. ನಾಲ್ವರು ಕಂಠಪೂರ್ತಿ ಮದ್ಯ ಸೇವಿಸಿದ್ದರು ಎಂದು ಪೊಲೀಸರು ಹೇಳಿದರು.
ಕೃತ್ಯ ಬಳಿಕ ಯುವತಿಯರಿಗೆ ಕ್ಯಾಬ್ಬುಕ್: ಮದ್ಯದ ನಶೆಯಲ್ಲಿದ್ದ ಸ್ನೇಹಿತೆಯ ಖಾಸಗಿ ಅಂಗಾಂಗ ಮುಟ್ಟುತ್ತಾ ಆಕೆಯನ್ನು ವಿವಸ್ತ್ರಗೊಳಿಸಿದ ಅಜಯ್ ವೆಂಕಟ್ ಸಾಯಿ, ಆಕೆ ಮೇಲೆ ಅತ್ಯಾಚಾರ ಎಸಗಿದ್ದಾನೆ. ಮತ್ತೂಬ್ಬ ಆರೋಪಿ ಆದಿತ್ಯ ಕೂಡ ಇನ್ನೊಬ್ಬ ಯುವತಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಅನಂತರ ಫೆ.6ರಂದು ಮುಂಜಾನೆ 5 ಗಂಟೆ ಸುಮಾರಿಗೆ ಆರೋಪಿಗಳೇ ಯುವತಿಯರಿಗೆ ಕ್ಯಾಬ್ ಬುಕ್ ಮಾಡಿ ಮನೆಗೆ ಕಳುಹಿಸಿದ್ದರು. ಘಟನೆಯಿಂದ ಬೇಸತ್ತ ಯುವತಿ ಠಾಣೆಗೆ ದೂರು ನೀಡಿದ್ದರು. ಈ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
Arrested: 17 ಕೇಸ್ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ