ಚೆಕ್‌ಪೋಸ್ಟ್‌ಗಳಲ್ಲಿ ವಸೂಲಿ ದಂಧೆ: ಎಚ್‌ಡಿಕೆ ಆರೋಪ 


Team Udayavani, Nov 12, 2017, 12:56 PM IST

HD-Kumarswamy-700.jpg

ಬೆಂಗಳೂರು: ಜಿಎಸ್‌ಟಿ ಜಾರಿಯಾದ ಬಳಿಕ ದೇಶಾದ್ಯಂತ ಚೆಕ್‌ ಪೋಸ್ಟ್‌ ಬಂದ್‌ ಮಾಡಲಾಗಿದೆ. ಆದರೂ ಕರ್ನಾಟಕದಲ್ಲಿ ಚೆಕ್‌ ಪೋಸ್ಟ್‌ಗಳಲ್ಲಿ ನಿತ್ಯ 30ಲಕ್ಷ ರೂ.ವರೆಗೆ ರೌಡಿಗಳ ಮೂಲಕ ವಸೂಲಿ ಮಾಡಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.

ಪಕ್ಷದ ಕಚೇರಿಯಲ್ಲಿ ಶನಿವಾರ ಮಾತನಾಡಿ, ಸರ್ಕಾರವೇ ರೌಡಿಗಳ ಮೂಲಕ ಇಂಥದ್ದೊಂದು ದಂಧೆಗೆ ಇಳಿದಿದೆ. ಇದು ಸಿಎಂ ಸಿದ್ದರಾಮಯ್ಯನವರಿಗೆ ಗೊತ್ತಿಲ್ಲವೇ? ಎಂದು ಪ್ರಶ್ನಿಸಿದರು. ಚೆಕ್‌ ಪೋಸ್ಟ್‌ಗಳಲ್ಲಿ ಅನಧಿಕೃತವಾಗಿ ವಸೂಲಿ ದಂಧೆ ಅವ್ಯಾಹತವಾಗಿ ನಡೆಯುತ್ತಿದ್ದು ಇದಕ್ಕೆ ಗೃಹ ಸಚಿವರು ಹಾಗೂ ಸಾರಿಗೆ ಸಚಿವರೇ ಜವಾಬ್ದಾರರು ಎಂದು ಕುಮಾರಸ್ವಾಮಿ ಆರೋಪಿಸಿದರು.

ವಿಜಯಪುರ ಜಿಲ್ಲೆ ಝಳಕಿ ಸೇರಿ ರಾಜ್ಯದ ಚೆಕ್‌ಪೋಸ್ಟ್‌ ಗಳಲ್ಲಿ ನಡೆಯುತ್ತಿರುವ ದಂಧೆಯ ಬಗ್ಗೆ 15 ದಿನಗಳವರೆಗೂ ಕಾಯುತ್ತೇನೆ.

ಸರ್ಕಾರ ಯಾವುದೇ ಕ್ರಮ ಕೈಗೊಳ್ಳದಿದ್ದರೆ ನಮ್ಮ ಪಕ್ಷದಿಂದಲೇ ದಾಳಿ ಮಾಡಿ ವಸೂಲಿಗಾರರನ್ನು ಹಿಡಿಯಲಾಗುವುದು ಎಂದರು.

ಸಿದ್ದರಾಮಯ್ಯ ಬೇರೆಯವರ ಬಗ್ಗೆ “ಡೋಂಗಿ’ ಪದಬಳಸುತ್ತಾರೆ. ಅದು ಅವರಿಗೆ ಬಹುಪ್ರಿಯ ಪದ. ಆದರೆ, ಸಮಾಜವಾದ ಹಿನ್ನೆಲೆಯಿಂದ ಬಂದಿರುವ ಅವರು 50 ಸಾವಿರ ರೂ. ಮೌಲ್ಯದ ಶೂ ಬಳಸುತ್ತಾರೆ.ಅವರದ್ದು ಢೋಂಗಿ ಸಮಾಜವಾದವಲ್ಲವೇ ಎಂದು ಪ್ರಶ್ನಿಸಿದರು.

ಕಾಂಗ್ರೆಸ್‌ ಹಾಗೂ ಬಿಜೆಪಿಯಲ್ಲಿ ಅಸಮಾಧಾನಗೊಂಡಿರುವ ಅನೇಕ ಶಾಸಕರು ಜೆಡಿಎಸ್‌ ಸೇರ್ಪಡೆ ಬಗ್ಗೆ ಸಂಪರ್ಕಿಸಿರುವುದು ನಿಜ. ಆದರೆ, ಸಮಯ ಬಂದಾಗ ಆ ಬಗ್ಗೆ ಬಹಿರಂಗಪಡಿಸುತ್ತೇನೆ. ಮಾಲಕರೆಡ್ಡಿ ಹೇಳಿಕೆ ಗಮನಿಸಿದ್ದೇನೆ. ಮಾಲೀಕಯ್ಯ ಗುತ್ತೇದಾರ್‌ ಅವರು ಸಚಿವ ಪ್ರಿಯಾಂಕ ಖರ್ಗೆ ಆಡಳಿತದ ಬಗ್ಗೆ ಬೇಸರ ಹೊರಹಾಕಿದ್ದಾರೆ. ಆನಂದ್‌ ಅಸ್ನೋಟಿಕರ್‌ ಜೆಡಿಎಸ್‌ ಸೇರುವ ಬಗ್ಗೆ ಮಾಧ್ಯಮಗಳ ವರದಿ ಗಮನಿಸಿದ್ದೇನೆ. ಆದರೆ, ಸದ್ಯಕ್ಕೆ ಏನೂ ಹೇಳಲಾರೆ.
–  ಎಚ್‌.ಡಿ.ಕುಮಾರಸ್ವಾಮಿ,
ಮಾಜಿ ಮುಖ್ಯಮಂತ್ರಿ

ಎಚ್‌ಡಿಕೆ ಕ್ರಿಯೇಟಿವ್‌ ಸೆಂಟರ್‌ಗೆ ಚಾಲನೆ
ಬೆಂಗಳೂರು:
ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಸಾಮಾಜಿಕ ಜಾಲತಾಣಗಳ ಮೂಲಕ ಮತದಾರರ ತಲುಪಲು ಜೆಡಿಎಸ್‌ ಹೊಸ ಪ್ರಯೋಗಗಳಲ್ಲಿ ತೊಡಗಿದೆ.

“ಕರ್ನಾಟಕ ನಿಮ್ಮ ಕಡೆಗೆ ನನ್ನ ನಡಿಗೆ’ ಘೋಷವಾಕ್ಯದಡಿ ಫೇಸ್‌ಬುಕ್‌, ಟ್ವಿಟರ್‌, ಯೂಟ್ಯೂಬ್‌, ಸೌಂಡ್‌ ಕೌಡ್‌,
ಪಿಂಟರೆಸ್ಟ್‌ ಮೂಲಕ ಟಿವಿ ಚಾನೆಲ್‌ಗ‌ಳ ರೀತಿಯಲ್ಲಿ ದಿನದ 24 ಗಂಟೆ ನಿರಂತರವಾಗಿ ಸಾಮಾಜಿಕ ಜಾಲತಾಣಗಳ
ಮೂಲಕ ಜೆಡಿಎಸ್‌ ಕಾರ್ಯಚಟುವಟಿಕೆಗಳು, ಕುಮಾರಸ್ವಾಮಿ ಭಾಷಣಗಳನ್ನು ಅಪಲೋಡ್‌ ಮಾಡುವುದು ಇದರ ಉದ್ದೇಶ. “ನಮ್ಮ ಎಚ್‌ಡಿಕೆ’ ಆ್ಯಪ್‌ ನಂತರ ಇದೀಗ “ನಮ್ಮ ಎಚ್‌ಡಿಕೆ’ ಕ್ರಿಯೇಟಿವ್‌ ಸೆಂಟರ್‌ ಆರಂಭಿಸಿದೆ. ಇದರ ಜತೆಗೆ ಮಾಧ್ಯಮಗಳಿಗೆ ಹೇಳಿಕೆಗಳನ್ನು ಸುದ್ದಿರೂಪದಲ್ಲಿ ಕಳುಹಿಸಲು “ಎಚ್‌ಡಿಕೆ μàಚರ್‌ ಸರ್ವೀಸ್‌’, ಪಕ್ಷದ ಕಾರ್ಯಕರ್ತರು ಹಾಗೂ ನಾಯಕರಿಗೆ ಸಂದೇಶ ರವಾನಿಸಲು “ನಮ್ಮ ಎಚ್‌ಡಿಕೆ’ ವಾಟ್ಸ್‌ಆ್ಯಪ್‌ ಕೇಂದ್ರ, ಜನ ಸಾಮಾನ್ಯರು ಮಿಸ್ಡ್ ಕಾಲ್‌ ಕೊಟ್ಟರೆ ಪಕ್ಷಕ್ಕೆ ಸಂಬಂಧಿಸಿದ ಮಾಹಿತಿ ರವಾನಿಸಲು “ಎಚ್‌ಡಿಕೆ ಕಾಮನ್‌
ಮ್ಯಾನ್‌ ಕ್ಲಿಕ್‌’ ಕೇಂದ್ರ ಸ್ಥಾಪಿಸಲಾಗಿದೆ. ಶನಿವಾರ ಪಕ್ಷದ ಕಚೇರಿಯಲ್ಲಿ ಎಚ್‌ಡಿಕೆ ಕ್ರಿಯೇಟಿವ್‌ ಸೆಂಟರ್‌ಗೆ ಕುಮಾರಸ್ವಾಮಿ ಚಾಲನೆ ನೀಡಿದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.